AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಯೋಜನೆ ದೇಶದಲ್ಲಿ ತರಬೇತಿ ಪಡೆದ ಉಗ್ರರನ್ನು ಹೊಂದುವಂತೆ ಮಾಡುತ್ತದೆ: ರಾಜಸ್ಥಾನದ ಸಚಿವ

ಅಗ್ನಿವೀರರಾಗಿ ಮೂರ್ನಾಲ್ಕು ವರ್ಷ ಕೆಲಸ ಮಾಡಿ ನಂತರ ನಿರುದ್ಯೋಗಿಯಾಗುವುದರ ಬಗ್ಗೆ ಯುವಕರು ಚಿಂತಿತರಾಗಿದ್ದಾರೆ. ಕೇಂದ್ರ ಸರ್ಕಾರ ಯುವ ಜನಾಂಗದ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಸಚಿವರು ಹೇಳಿದ್ದಾರೆ

ಅಗ್ನಿಪಥ್ ಯೋಜನೆ ದೇಶದಲ್ಲಿ ತರಬೇತಿ ಪಡೆದ ಉಗ್ರರನ್ನು ಹೊಂದುವಂತೆ ಮಾಡುತ್ತದೆ: ರಾಜಸ್ಥಾನದ ಸಚಿವ
ಸಚಿವ ರಾಮಲಾಲ್ ಜಾಟ್
TV9 Web
| Edited By: |

Updated on: Jul 06, 2022 | 1:10 PM

Share

ಅಗ್ನಿಪಥ್ ಯೋಜನೆ (Agnipath scheme) ಬಗ್ಗೆ ರಾಜಸ್ಥಾನದ (Rajasthan) ಕಂದಾಯ ಸಚಿವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅಗ್ನಿಪಥ್ ಯೋಜನೆಯು ದೇಶದಲ್ಲಿ ತರಬೇತಿ ನೀಡಿದ ಉಗ್ರರನ್ನು ಹೊಂದುವಂತೆ ಮಾಡುತ್ತದೆ ಎಂದು ಸಚಿವ ರಾಮಲಾಲ್ ಜಾಟ್ (Ramlal Jat) ಹೇಳಿದ್ದಾರೆ. ಒಂದು ವರ್ಷ ಕೆಲಸ ಮಾಡಿದ ಸಂಸದ ಮತ್ತು ಶಾಸಕರಿಗೆ ಪಿಂಚಣಿ ಸಿಗುತ್ತಿರುವಾಗ ಅಗ್ನಿವೀರರಿಗೆ ಪಿಂಚಣಿ ಯಾಕಿಲ್ಲ? ಅಗ್ನಿವೀರರಾಗಿ ಮೂರ್ನಾಲ್ಕು ವರ್ಷ ಕೆಲಸ ಮಾಡಿ ನಂತರ ನಿರುದ್ಯೋಗಿಯಾಗುವುದರ ಬಗ್ಗೆ ಯುವಕರು ಚಿಂತಿತರಾಗಿದ್ದಾರೆ. ಕೇಂದ್ರ ಸರ್ಕಾರ ಯುವ ಜನಾಂಗದ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಸಚಿವರು ಹೇಳಿದ್ದಾರೆ. ಐದು ವರ್ಷ, ನಾಲ್ಕು ವರ್ಷ, ಮೂರು ವರ್ಷ ಎಂದ ನೀವು ಯುವಕರಿಗೆ ಕೆಲಸ ನೀಡುತ್ತಿದ್ದೀರಿ. ಕಡೇ ಪಕ್ಷ ಅವರಿಗೆ ಪಿಂಚಣಿ ನೀಡಿ ಎಂದಿದ್ದಾರೆ ಜಾಟ್.  ಸೇನಾಪಡೆಯಲ್ಲಿ ನಾಲ್ಕು ವರ್ಷಗಳ ಕಾಲ ಅಗ್ನಿವೀರರಾಗಿ ನೇಮಕ ಮಾಡಿಕೊಳ್ಳುವ ಯೋಜನೆಯಾದ ಅಗ್ನಿಪಥ್ ಯೋಜನೆಯನ್ನು ಜೂನ್ 14ರಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಹದಿನೇಳೂವರೆ ವರ್ಷದಿಂದ ಹಿಡಿದು 21ರ ಹರೆಯದ ಯುವಕರನ್ನು ನಾಲ್ಕು ವರ್ಷಗಳ ಕಾಲ ಸೇನಾಪಡೆಯಲ್ಲಿ ನೇಮಕ ಮಾಡುವ ಯೋಜನೆ ಇದಾಗಿದ್ದು, ಹೀಗೆ ನೇಮಕವಾಗುವವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಸಮಯ ಬಂದಾಗ ಇಲ್ಲಿನ ಯುವಕರಿಗೆ ಅರ್ಥವಾಗುತ್ತದೆ. ವಿರೋಧ ಪಕ್ಷವಾದ ನಾವು ಪ್ರತಿಯೊಂದು ವೇದಿಕೆಯಲ್ಲಿಯೂ ಈ ಯೋಜನೆಯನ್ನು ವಿರೋಧಿಸುತ್ತೇವೆ. ರಾಹುಲ್ ಗಾಂಧಿಯವರು ದೇಶದ ಸಮಸ್ಯೆ ಬಗ್ಗೆ ಹೇಳುತ್ತಿದ್ದಾರೆ. ಆ ಸಮಸ್ಯೆಗಳ ಬಗ್ಗೆ ನಾವು ಮಾತನಾಡುತ್ತೇವೆ ಎಂದು ಜಾಟ್ ಹೇಳಿದ್ದಾರೆ

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ