AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ!

ಆಗ್ರಾದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ದೇಹವನ್ನು ತುಂಡು ಮಾಡಿ ಎಸೆದ ಘಟನೆ ನಡೆದಿದೆ. ಮೃತ ಮಹಿಳೆ ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಜೊತೆ ಆಕೆ ಸಂಬಂಧ ಹೊಂದಿದ್ದರು. ಅವರಿಬ್ಬರೂ ಪ್ರೀತಿ ಮಾಡುತ್ತಿದ್ದರೂ ಆ ಮಹಿಳೆ ಆತನನ್ನು ಮದುವೆಯಾಗಲು ಸಿದ್ಧವಿರಲಿಲ್ಲ.

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ!
Representative Image
ಸುಷ್ಮಾ ಚಕ್ರೆ
|

Updated on:Jan 27, 2026 | 10:56 PM

Share

ಆಗ್ರಾ, ಜನವರಿ 27: ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ, ಆಕೆಯ ತಲೆಯನ್ನು ಪ್ಯಾಕೆಟ್‌ನಲ್ಲಿ ಹಾಕಿ ಕಾಲುವೆಗೆ ಎಸೆದಿದ್ದಾನೆ. ಈ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಕೊಲೆಗಾರನನ್ನು (Killer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಮಿಂಕಿ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಜೊತೆ ಸಂಬಂಧ ಹೊಂದಿದ್ದರು. ಅವರಿಬ್ಬರ ನಡುವೆ ಮದುವೆಯ ವಿಷಯಕ್ಕೆ ಜಗಳ ನಡೆಯುತ್ತಿತ್ತು. ವಿನಯ್ ಮಿಂಕಿಯನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಅದಕ್ಕೆ ನಿರಾಕರಿಸಿದ್ದರಿಂದ ಅವರ ನಡುವೆ ಜಗಳ ಉಂಟಾಗಿದೆ. ಇದೇ ಕೋಪದಿಂದ ಆತ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ!

ಜಗಳದ ನಂತರ ತೆಂಗಿನಕಾಯಿ ಕತ್ತರಿಸಲು ಬಳಸುವ ಚಾಕುವಿನಿಂದ ವಿನಯ್ ಪದೇ ಪದೇ ಆಕೆಯ ಮೇಲೆ ಹಲ್ಲೆ ಮಾಡಿ, ಆಕೆಯ ಕುತ್ತಿಗೆಯನ್ನು ಕತ್ತರಿಸಿದ್ದಾನೆ. ನಂತರ ಅವನು ಆಕೆಯ ದೇಹವನ್ನು ತುಂಡು ಮಾಡಿ, ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿ ಪಾರ್ಸೆಲ್ ಟೇಪ್‌ನಿಂದ ಮುಚ್ಚಿದ್ದಾನೆ. ಆಕೆಯ ತಲೆಯನ್ನು ಬೇರೆ ಚೀಲದಲ್ಲಿ ಹಾಕಿ ಎಸೆದಿದ್ದಾನೆ. ಆ ತಲೆ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಅದಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಜನವರಿ 24ರ ರಾತ್ರಿ ಕೊಲೆಯ ನಂತರ, ಅವನು ದೇಹವನ್ನು ಚೀಲದಲ್ಲಿ ಹಾಕಿ ಯಮುನಾ ನದಿಗೆ ಎಸೆಯಲು ಹೊರಟಿದ್ದನು. ಆದರೆ ಅದನ್ನು ಸೇತುವೆಯ ಮೇಲೆ ಬಿಟ್ಟು ಪರಾರಿಯಾಗಿದ್ದನು. ತುಂಡರಿಸಿದ ತಲೆಯನ್ನು ಕಪ್ಪು ಪ್ಯಾಕೆಟ್‌ನಲ್ಲಿ ಇರಿಸಲಾಗಿತ್ತು. ಅದನ್ನು ಕಾಲುವೆಯಲ್ಲಿ ಎಸೆದಿದ್ದ. ಅದನ್ನು ಪತ್ತೆಹಚ್ಚಲು ಡೈವರ್‌ಗಳಿಗೆ ಸೂಚಿಸಲಾಗಿದೆ. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಚಾಕು, ಸ್ಕೂಟರ್ ಮತ್ತು ಬಟ್ಟೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 pm, Tue, 27 January 26

ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?