AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agra News: ಯಪ್ಪಾ ಕಾಲ ಎಲ್ಲಿಗೆ ಬಂತು? 11 ತಿಂಗಳ ಕಂದಮ್ಮನನ್ನು ರೇಪ್ ಮಾಡಿದ 12 ವರ್ಷದ ಅಪ್ರಾಪ್ತ ಬಾಲಕ

12 ವರ್ಷದ ಬಾಲಕ 11 ತಿಂಗಳ ಪುಟ್ಟ ಕಂದಮ್ಮನ  ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮಗುವನ್ನು ರಕ್ತಸಿಕ್ತ ಸ್ಥಿತಿಯಲ್ಲಿ ಬಿಟ್ಟು ಅಪ್ರಾಪ್ತ ವಯಸ್ಸಿನ ಆರೋಪಿ ಬಾಲಕ ಮನೆಯಿಂದ ಪರಾರಿಯಾಗಿದ್ದಾನೆ

Agra News: ಯಪ್ಪಾ ಕಾಲ ಎಲ್ಲಿಗೆ ಬಂತು? 11 ತಿಂಗಳ ಕಂದಮ್ಮನನ್ನು ರೇಪ್ ಮಾಡಿದ 12 ವರ್ಷದ ಅಪ್ರಾಪ್ತ ಬಾಲಕ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 24, 2023 | 8:12 AM

Share

ಆಗ್ರಾ: ಎಂದೂ ಕೇಳಿರದ, ಊಹಿಸಲೂ ಅಸಾಧ್ಯವಾದ ಅಘಾತಕಾರಿ ಘಟನೆಯೊಂದು ಆಗ್ರಾದ ಅಲಿಗಢದಲ್ಲಿ ನಡೆದಿದೆ. 12 ವರ್ಷದ ಬಾಲಕ 11 ತಿಂಗಳ ಪುಟ್ಟ ಕಂದಮ್ಮನ  ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮಗುವನ್ನು ರಕ್ತಸಿಕ್ತ ಸ್ಥಿತಿಯಲ್ಲಿ ಬಿಟ್ಟು ಅಪ್ರಾಪ್ತ ವಯಸ್ಸಿನ ಆರೋಪಿ ಬಾಲಕ ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಗತ್ತು ಅರಿಯದ ತಮ್ಮ ಪುಟ್ಟ ಮಗಳ ಜೊತೆ ನಡೆದ ಹೀನಾಯ ಕೃತ್ಯ ತಿಳಿಯುತ್ತಿದ್ದಂತೆ ಮಗುವಿನ ಪೋಷಕರು ತಮ್ಮ ಪಕ್ಕದ ಮನೆಯಲ್ಲೇ ವಾಸವಿದ್ದ ಆರೋಪಿ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ಜೂನ್ 22ರ ಗುರುವಾರ ಮುಂಜಾನೆ ಆರೋಪಿ ಬಾಲಕನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆರೋಪಿಯನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿದ್ದು, ಸದ್ಯ ಆಗ್ರಾದ ಮಕ್ಕಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ಶುಕ್ರವಾರ ತಿಳಿಸಿದರು ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Bengaluru News: ಅಪಾರ್ಟ್ಮೆಂಟ್ ಲಿಫ್ಟ್​ನಲ್ಲಿ 10 ವರ್ಷದ ಬಾಲಕಿ ಮೇಲೆ ಫುಡ್ ಡೆಲಿವರಿ ಬಾಯ್ ಲೈಂಗಿಕ ದೌರ್ಜನ್ಯ, ಕಾಮುಖ ಅರೆಸ್ಟ್

ಆರೋಪಿ ಬಾಲಕ ಆಗಾಗ ಸಂತ್ರಸ್ತ ಮಗುವಿನ ಮನೆಗೆ ಬಂದು ಹೋಗುತ್ತಿದ್ದ. ಆದ್ರೆ ಅದೊಂದು ದಿನ ಮಗುವನ್ನು ಟೆರೇಸ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಗುವಿನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಐಪಿಸಿ ಸೆಕ್ಷನ್ 376-ಎಬಿ (12 ವರ್ಷದೊಳಗಿನ ಬಾಲಕಿ ಮೇಲೆ ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ದೂರಿನ ಪ್ರಕಾರ, “ಆರೋಪಿಯು ನಮ್ಮ ನೆರೆಹೊರೆಯವನಾಗಿದ್ದು, ಬುಧವಾರ ಸಂಜೆ ನಾನು ಮನೆಕೆಲಸದಲ್ಲಿ ನಿರತಳಾಗಿದ್ದಾಗ ಅವನು ಬಂದು ನನ್ನ ಮಗಳನ್ನ ಟೆರೇಸ್‌ಗೆ ಕರೆದೊಯ್ದಿದ್ದಾನೆ. ನನ್ನ ಮಗಳ ಅಳು ಕೇಳಿದ ನಂತರ ನಾನು ಅಲ್ಲಿಗೆ ಧಾವಿಸಿದೆ. ಅಗ ಆಕೆಗೆ ರಕ್ತಸ್ರಾವವಾಗುತ್ತಿತ್ತು ಎಂದು ನೊಂದ ತಾಯಿ ದೂರು ದಾಖಲಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?