AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಕಾ ಡಾಬಾ ಆಯ್ತು.. ಈಗ ‘ರೋಟಿವಾಲಿ ಅಮ್ಮಾ’ಳ ಸಂಕಷ್ಟಕ್ಕೆ ಸ್ಪಂದಿಸೋರು ಬೇಕು

ಲಕ್ನೋ: ಕಳೆದ ಕೆಲವು ದಿನಗಳ ಹಿಂದೆ ಜೀವನೋಪಾಯದ ದಾರಿಯಾಗಿದ್ದ ತನ್ನ ಡಾಬಾದಲ್ಲಿ ವ್ಯಾಪಾರವಾಗ್ತಿಲ್ಲ ಎಂದು ದೆಹಲಿಯ ವೃದ್ಧ ದಂಪತಿಯೊಂದು ಬಿಕ್ಕಿ ಬಿಕ್ಕಿ ಅತ್ತು ತಮ್ಮ ನೋವು ತೋಡಿಕೊಂಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ವೃದ್ಧ ದಂಪತಿಯ ಸಂಕಷ್ಟಕ್ಕೆ ಸ್ಪಂದಿಸಿದ್ದ ನೆಟ್ಟಿಗರು ಮತ್ತು ದೆಹಲಿಯ ಜನತೆ ಅವರ ನೆರವಿಗೆ ಧಾವಿಸಿದ್ದರು. ಇದೀಗ, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಈ 80 ವರ್ಷದ ವೃದ್ಧೆಯದ್ದು ಅದೇ ಪರಿಸ್ಥಿತಿ. ಅಂದ ಹಾಗೆ, ಈಕೆಯ ಹೆಸರು ಯಾರಿಗೂ ತಿಳಿದಿಲ್ಲ. ಆದರೂ ಈಕೆಯನ್ನು ಸಾಕ್ಷಾತ್​ ಅನ್ನಪೂರ್ಣೇಶ್ವರಿಯಂತೆ […]

ಬಾಬಾ ಕಾ ಡಾಬಾ ಆಯ್ತು.. ಈಗ ‘ರೋಟಿವಾಲಿ ಅಮ್ಮಾ’ಳ ಸಂಕಷ್ಟಕ್ಕೆ ಸ್ಪಂದಿಸೋರು ಬೇಕು
KUSHAL V
|

Updated on: Oct 18, 2020 | 7:23 PM

Share

ಲಕ್ನೋ: ಕಳೆದ ಕೆಲವು ದಿನಗಳ ಹಿಂದೆ ಜೀವನೋಪಾಯದ ದಾರಿಯಾಗಿದ್ದ ತನ್ನ ಡಾಬಾದಲ್ಲಿ ವ್ಯಾಪಾರವಾಗ್ತಿಲ್ಲ ಎಂದು ದೆಹಲಿಯ ವೃದ್ಧ ದಂಪತಿಯೊಂದು ಬಿಕ್ಕಿ ಬಿಕ್ಕಿ ಅತ್ತು ತಮ್ಮ ನೋವು ತೋಡಿಕೊಂಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ವೃದ್ಧ ದಂಪತಿಯ ಸಂಕಷ್ಟಕ್ಕೆ ಸ್ಪಂದಿಸಿದ್ದ ನೆಟ್ಟಿಗರು ಮತ್ತು ದೆಹಲಿಯ ಜನತೆ ಅವರ ನೆರವಿಗೆ ಧಾವಿಸಿದ್ದರು. ಇದೀಗ, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಈ 80 ವರ್ಷದ ವೃದ್ಧೆಯದ್ದು ಅದೇ ಪರಿಸ್ಥಿತಿ. ಅಂದ ಹಾಗೆ, ಈಕೆಯ ಹೆಸರು ಯಾರಿಗೂ ತಿಳಿದಿಲ್ಲ. ಆದರೂ ಈಕೆಯನ್ನು ಸಾಕ್ಷಾತ್​ ಅನ್ನಪೂರ್ಣೇಶ್ವರಿಯಂತೆ ರೋಟಿವಾಲಿ ಅಮ್ಮಾ ಅಥವಾ ರೊಟ್ಟಿ ಉಣಬಡಿಸುವ ತಾಯಿ ಎಂದೇ ಸ್ಥಳೀಯರು ಕರೆಯುತ್ತಾರೆ.

ಕಳೆದ 15 ವರ್ಷಗಳಿಂದ ನಗರದ ಸೇಂಟ್​ ಜಾನ್​ ಕಾಲೇಜು ಬಳಿ ವ್ಯಾಪಾರ ನಡೆಸುತ್ತಿರುವ ಈ ವೃದ್ಧೆ ನಗರದ ಬಡವರು ಮತ್ತು ಕೂಲಿ ಕಾರ್ಮಿಕರ ಪಾಲಿಗೆ ಅನ್ನದಾತೆ. ಕೇವಲ 20 ರೂಪಾಯಿಗೆ ರುಚಿರುಚಿಯಾದ ರೊಟ್ಟಿ ಮತ್ತು ಗೊಜ್ಜು ಸವಿಯಲು ವೃದ್ಧೆಯ ಫುಟ್​ಪಾತ್​ ಮೇಲಿರುವ ಗೂಡಂಗಡಿಗೆ ಬರುತ್ತಾರೆ.

ಆದರೆ, ಬಾಬಾ ಕಾ ಡಾಬಾ ದಂಪತಿಯಂತೆ ಈಕೆಗೂ ಕಳೆದ ಕೆಲವು ದಿನಗಳಿಂದ ವ್ಯಾಪಾರ ಅಷ್ಟಕಷ್ಟೆ. ಲಾಕ್​ಡೌನ್​ ಬಳಿಕ ಕೂಲಿ ಕಾರ್ಮಿಕರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಇದರಿಂದ ವೃದ್ಧೆಗೆ ಬದುಕು ಸಾಗಿಸಲು ಕೊಂಚ ಕಷ್ಟವಾಗಿದೆ. ಹಾಗಂತಾ ಈಕೆ ನೆರವಿಗೆ ಮನವಿ ಮಾಡಿಲ್ಲ. ತಮ್ಮ ಕಷ್ಟವನ್ನು ಯಾರ ಬಳಿಯೂ ಹೇಳಿಕೊಳ್ಳದೇ ಬರುವ ಆದಾಯದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇನ್ನಾದರೂ ಈಕೆಯ ಸಂಕಷ್ಟಕ್ಕೆ ಸಹೃದಯಿಗಳು ಸ್ಪಂದಿಸುವರು ಎಂಬುದು ಎಲ್ಲರ ಆಶಯ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?