AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗಾಗಿ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ಕ್ಕೆ ಚಾಲನೆ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗಾಗಿ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ವನ್ನು ಜಾರಿಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ರೈತರು ಅತ್ಯಾಧುನಿಕ ಉಪಕರಣಗಳನ್ನು ಬಳಸಿ ಕೃಷಿ ನಡೆಸಲು ಸರ್ಕಾರದ ಯೋಜನೆಗಳ ಕುರಿತು ತೋಮರ್ ಮಾತನಾಡಿದ್ದಾರೆ.

ರೈತರಿಗಾಗಿ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ಕ್ಕೆ ಚಾಲನೆ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
TV9 Web
| Edited By: |

Updated on: Aug 27, 2021 | 12:55 PM

Share

ರೈತರಿಗಾಗಿ ಕೇಂದ್ರ ಕೃಷಿ ಸಚಿವ ನಾರಾಯಣ ಸಿಂಗ್ ತೋಮರ್ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ಯನ್ನು (national food and nutrition campaign) ಗುರುವಾರ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘‘ರೈತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ನಿಟ್ಟಿನಲ್ಲಿ ಸತತವಾಗಿ ಪ್ರಯತ್ನಗಳು ನಡೆಯುತ್ತಿವೆ. ಉತ್ಪಾದನೆಯಲ್ಲಿ ನಾವು ಮುಂದುವರೆದಿದ್ದೇವೆ.  ಸರ್ಕಾರ ಮತ್ತು ರೈತರ ಸಮನ್ವಯ- ಸಹಕಾರದಿಂದಾಗಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಂಡು ಜಾಗತಿಕ ಮಟ್ಟದಲ್ಲಿ ಅವು ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ರೈತರು ಉತ್ತಮ ಆದಾಯ ನೀಡುವ ಬೆಳೆಗಳತ್ತ ಆಕರ್ಷಿತರಾಗಬೇಕಾಗಿದೆ’’ ಎಂದು ತೋಮರ್ ಹೇಳಿದ್ದಾರೆ.

ಭಾರತದಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವುದು ‘ಹೆಮ್ಮೆಯ ವಿಷಯ’ ಎಂದು ಹೇಳಿರುವ ನರೇಂದ್ರ ಸಿಂಗ್ ತೋಮರ್, ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಕೃಷಿ ಸಂಶೋಧನಾ ಮಂಡಳಿಯನ್ನು (ಐಸಿಎಆರ್) ಶ್ಲಾಘಿಸಿದರು. ಐಸಿಎಆರ್ ಯಾವ ಬೆಳೆಗಳನ್ನು ಬೆಳೆಯಬೇಕೆಂದು ಹಾಗೂ ಮಳೆ ಆಶ್ರಿತ;ಇತರ ಪ್ರದೇಶಗಳಿಗೆ ಯಾವ ಬೀಜಗಳನ್ನು ಇಳುವರಿ ಮಾಡಿದರೆ ಉತ್ತಮ ಫಸಲು ನೀಡಬಹುದು ಎಂಬುದರ ಕುರಿತು ಯಶಸ್ವಿಯಾಗಿ ಸಂಶೋಧನೆ ನಡೆಸುತ್ತಿದೆ. ಕೃಷಿ ವಿಜ್ಞಾನ ಕೇಂದ್ರಗಳ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿರುವ ರೈತರು, ‘ಕೃಷಿ ಇನ್ಫ್ರಾ ಫಂಡ್’ ಸೇರಿದಂತೆ ರೈತರಿಗಾಗಿಯೇ ಇರುವ ಸ್ಕೀಮ್​ಗಳಲ್ಲಿ ತೊಡಗಿಸಿಕೊಳ್ಳಬೇಕು’’ ಎಂದು ಅವರು ಸಲಹೆ ನೀಡಿದ್ದಾರೆ.

ಮೋದಿ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಕೃಷಿಗೆ ಬಜೆಟ್ ₹ 21,000 ಕೋಟಿ ಇದ್ದು, ಈಗ ಅದನ್ನು ₹ 1.23 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ ಎಂದು ತೋಮರ್ ಇದೇ ಸಂದರ್ಭದಲ್ಲಿ ಹೇಳಿದ್ಧಾರೆ. ‘ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗಾಗಿ, ಹಣಕಾಸು ಆಯೋಗದ ಅನುದಾನದ ಮೊತ್ತವನ್ನು ಪ್ರಧಾನಮಂತ್ರಿ ಸುಮಾರು ಐದು ಪಟ್ಟು ಹೆಚ್ಚಿಸಿದ್ದಾರೆ’ ಎಂದು ಕೃಷಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:

ಕೊರೊನಾ ಲಸಿಕೆ ಪಡೆಯದಿದ್ದರೆ ಪಡಿತರ ಕೊಡೋದಿಲ್ಲ; ಚರ್ಚೆಗೆ ಗ್ರಾಸವಾಯ್ತು ತಹಶೀಲ್ದಾರ್ ಆದೇಶ

ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್’ ವಿಶೇಷ ಕಾರ್ಯಕ್ರಮಕ್ಕೆ  ಸೋನು ಸೂದ್ ಬ್ರಾಂಡ್ ಅಂಬಾಸಿಡರ್

(Agriculture minister Narendra Singh Tomar launches national food and nutrition campaign for farmers)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?