AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಆ್ಯಪಲ್‌ ಸಿಇಒ ಟಿಮ್ ಕುಕ್

ಮುಂಬೈನಲ್ಲಿ ಆಪಲ್‌ನ ಮೊದಲ ಇಂಡಿಯಾ ಸ್ಟೋರ್‌ನ ಅದ್ಧೂರಿ ಉದ್ಘಾಟನೆಯಂತೆಯೇ, ನಾಳೆ ಸಾಕೇತ್‌ನ ಸೆಲೆಕ್ಟ್ ಸಿಟಿ ಮಾಲ್‌ನಲ್ಲಿ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಟಿಮ್ ಕುಕ್ ಗ್ರಾಹಕರನ್ನು ಸ್ವಾಗತಿಸಲಿದ್ದಾರೆ.

Narendra Modi: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಆ್ಯಪಲ್‌ ಸಿಇಒ ಟಿಮ್ ಕುಕ್
ಟಿಮ್ ಕುಕ್- ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
| Updated By: Ganapathi Sharma

Updated on:Apr 19, 2023 | 9:18 PM

ನವದೆಹಲಿ: ಆ್ಯಪಲ್‌ನ (Apple) ಎರಡನೇ ಮಳಿಗೆಯನ್ನು ದೆಹಲಿಯಲ್ಲಿ ಪ್ರಾರಂಭಿಸುವ ಮುನ್ನ, ಸಿಇಒ ಟಿಮ್ ಕುಕ್ (Tim Cook) ಅವರು ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದರು. ಕಂಪನಿಯು ಪಾಸಿಟಿವ್ ಇಂಪ್ಯಾಕ್ಟ್ ಟೆಕ್ನಾಲಜಿ ಎಂಬ ನಿಮ್ಮ ದೃಷ್ಟಿಕೋನಕ್ಕೆ ಅನುಗುಣವಾಗಿ ದೇಶಾದ್ಯಂತ ಹೂಡಿಕೆ ಮಾಡಲು ಬದ್ಧವಾಗಿದೆ ಎಂದು ಒತ್ತಿ ಹೇಳಿದರು. ಟಿಮ್ ಕುಕ್, ನಿಮ್ಮನ್ನು ಭೇಟಿಯಾಗಿದ್ದರಿಂದ ಖುಷಿಯಾಗಿದೆ.  ವೈವಿಧ್ಯಮಯ ವಿಷಯಗಳ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲು ಮತ್ತು ಭಾರತದಲ್ಲಿ ನಡೆಯುತ್ತಿರುವ ತಂತ್ರಜ್ಞಾನ-ಚಾಲಿತ ರೂಪಾಂತರಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಆ್ಯಪಲ್‌ ಸಿಇಒ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಆತ್ಮೀಯ ಸ್ವಾಗತಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ತಂತ್ರಜ್ಞಾನವು ಭಾರತದ ಭವಿಷ್ಯದ ಮೇಲೆ ಮಾಡಬಹುದಾದ ಸಕಾರಾತ್ಮಕ ಪರಿಣಾಮದ ಬಗ್ಗೆ ನೀವು ಹೊಂದಿರುವ ದೃಷ್ಟಿಕೋನವನ್ನು ನಾವು ಹಂಚಿಕೊಳ್ಳುತ್ತೇವೆ. ಶಿಕ್ಷಣ ಮತ್ತು ಡೆವಲಪರ್‌ಗಳಿಂದ ತೊಡಗಿ ಉತ್ಪಾದನೆ ಮತ್ತು ಪರಿಸರದವರೆಗೆ, ದೇಶಾದ್ಯಂತ ಹೂಡಿಕೆ ಮಾಡಲು ಬದ್ಧರಾಗಿದ್ದೇವೆ ಎಂದು ಟಿಮ್ ಕುಕ್ ಟ್ವೀಟ್ ಮಾಡಿದ್ದಾರೆ.

ಆ್ಯಪಲ್ ಸಿಇಒ ಅವರು ಪ್ರಧಾನಿ ಭೇಟಿಗೂ ಮುನ್ನ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: Apple Store: ಒಂದು ಆ್ಯಪಲ್ ಸ್ಟೋರ್ ಉದ್ಘಾಟನೆಗೆ ಇಷ್ಟೊಂದು ಬಿಲ್ಡಪ್ಪಾ? ಭಾರತಕ್ಕೆ ಬಂದಿರುವ ಸಿಇಒ ಟಿಮ್ ಕುಕ್ ತಲೆಯಲ್ಲಿ ಬೇರಿನ್ನೇನಾದರೂ ಇದೆಯಾ?

ಟಿಮ್ ಕುಕ್ ಅವರನ್ನು ಭೇಟಿಯಾದೆ. ಉತ್ಪಾದನೆ, ಎಲೆಕ್ಟ್ರಾನಿಕ್ಸ್ ರಫ್ತು ವಿಚಾರದಲ್ಲಿ ಭಾರತದಲ್ಲಿ ಆ್ಯಪಲ್​ನ ಪಾತ್ರದ ಬಗ್ಗೆ ಆಳವಾಗಿ ಚರ್ಚಿಸಲಾಗಿದೆ. ಅಪ್ಲಿಕೇಶನ್, ಆರ್ಥಿಕತೆ, ಕೌಶಲ, ಸುಸ್ಥಿರತೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗ ಸೃಷ್ಟಿ ವಿಚಾರವಾಗಿ ಚರ್ಚಿಸಿದೆವು. ದೀರ್ಘಾವಧಿಯ ಮತ್ತು ಬಲವಾದ ಸಂಬಂಧ ಹೊಂದುವ ಬಗ್ಗೆ ಬಲವಾದ ಪ್ರತಿಪಾದನೆ ಮಾಡಿದೆವು ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.

ಮುಂಬೈನಲ್ಲಿ ಆಪಲ್‌ನ ಮೊದಲ ಇಂಡಿಯಾ ಸ್ಟೋರ್‌ನ ಅದ್ಧೂರಿ ಉದ್ಘಾಟನೆಯಂತೆಯೇ, ನಾಳೆ ಸಾಕೇತ್‌ನ ಸೆಲೆಕ್ಟ್ ಸಿಟಿ ಮಾಲ್‌ನಲ್ಲಿ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಟಿಮ್ ಕುಕ್ ಗ್ರಾಹಕರನ್ನು ಸ್ವಾಗತಿಸಲಿದ್ದಾರೆ.

ಆ್ಯಪಲ್ ಸ್ಟೋರ್​ನಲ್ಲಿ ಏನೇನು ಸಿಗುತ್ತದೆ?

ಈ ಆ್ಯಪಲ್ ಸ್ಟೋರ್ ಬೇರೆ ಸ್ಮಾರ್ಟ್​ಫೋನ್​ಗಳ ಸ್ಟೋರ್​ಗಿಂತ ಬಹಳ ವಿಭಿನ್ನ ಮತ್ತು ವೈಭವಯುತವಾಗಿದೆ. ಇಲ್ಲಿ ಆ್ಯಪಲ್​ನ ಐಫೋನ್, ಐಪ್ಯಾಡ್, ಐಪಾಡ್, ಮ್ಯಾಕ್ ಕಂಪ್ಯೂಟರ್, ಮ್ಯಾಕ್ ಲ್ಯಾಪ್​ಟಾಪ್, ಮ್ಯಾಕ್ ಟಿವಿ ಇತ್ಯಾದಿ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಇಲ್ಲಿ ಸೇಲ್ಸ್ ಜೊತೆಗೆ ಆಫ್ಟರ್ ಸೇಲ್ಸ್ ಸರ್ವಿಸ್ ಕೂಡ ಇರುತ್ತದೆ. ಆದರೂ ಕೂಡ ಆ್ಯಪಲ್ ಸ್ಟೋರ್ ಉದ್ಘಾಟನೆಗೆ ಈ ಪರಿ ಬ್ಯುಲ್ಡಪ್ ಬೇಕಾ ಎಂದು ಕೆಲವರಿಗೆ ಅನಿಸದೇ ಇರದು. ಮುಂಬೈನಲ್ಲಿರುವ ಆ್ಯಪಲ್ ಬಿಕೆಸಿ ಸ್ಟೋರ್​ಗೆ ಹೋಲಿಸಿದರೆ ದೆಹಲಿಯ ಸಾಕೇತ್​ನಲ್ಲಿರುವ ಆ್ಯಪಲ್ ಸ್ಟೋರ್ ಅರ್ಧದಷ್ಟು ಮಾತ್ರ ಇದೆ. ಆದರೆ, ಬಾಡಿಗೆ ಹೆಚ್ಚು. ಸಾಕೇತ್​ನಲ್ಲಿರುವ ಸ್ಟೋರ್ ಗಾತ್ರದಲ್ಲಿ ಚಿಕ್ಕದಾದರೂ ವಿನ್ಯಾಸ ಇತ್ಯಾದಿ ಎಲ್ಲವೂ ಬಹುತೇಕ ಇದೇ ರೀತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 20ರಂದು ದೆಹಲಿಯ ಅ್ಯಪಲ್ ಸ್ಟೋರ್ ಉದ್ಘಾಟನೆಗೆ ಅಣಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Wed, 19 April 23

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ