AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಆ್ಯಪಲ್‌ ಸಿಇಒ ಟಿಮ್ ಕುಕ್

ಮುಂಬೈನಲ್ಲಿ ಆಪಲ್‌ನ ಮೊದಲ ಇಂಡಿಯಾ ಸ್ಟೋರ್‌ನ ಅದ್ಧೂರಿ ಉದ್ಘಾಟನೆಯಂತೆಯೇ, ನಾಳೆ ಸಾಕೇತ್‌ನ ಸೆಲೆಕ್ಟ್ ಸಿಟಿ ಮಾಲ್‌ನಲ್ಲಿ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಟಿಮ್ ಕುಕ್ ಗ್ರಾಹಕರನ್ನು ಸ್ವಾಗತಿಸಲಿದ್ದಾರೆ.

Narendra Modi: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಆ್ಯಪಲ್‌ ಸಿಇಒ ಟಿಮ್ ಕುಕ್
ಟಿಮ್ ಕುಕ್- ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
| Edited By: |

Updated on:Apr 19, 2023 | 9:18 PM

Share

ನವದೆಹಲಿ: ಆ್ಯಪಲ್‌ನ (Apple) ಎರಡನೇ ಮಳಿಗೆಯನ್ನು ದೆಹಲಿಯಲ್ಲಿ ಪ್ರಾರಂಭಿಸುವ ಮುನ್ನ, ಸಿಇಒ ಟಿಮ್ ಕುಕ್ (Tim Cook) ಅವರು ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದರು. ಕಂಪನಿಯು ಪಾಸಿಟಿವ್ ಇಂಪ್ಯಾಕ್ಟ್ ಟೆಕ್ನಾಲಜಿ ಎಂಬ ನಿಮ್ಮ ದೃಷ್ಟಿಕೋನಕ್ಕೆ ಅನುಗುಣವಾಗಿ ದೇಶಾದ್ಯಂತ ಹೂಡಿಕೆ ಮಾಡಲು ಬದ್ಧವಾಗಿದೆ ಎಂದು ಒತ್ತಿ ಹೇಳಿದರು. ಟಿಮ್ ಕುಕ್, ನಿಮ್ಮನ್ನು ಭೇಟಿಯಾಗಿದ್ದರಿಂದ ಖುಷಿಯಾಗಿದೆ.  ವೈವಿಧ್ಯಮಯ ವಿಷಯಗಳ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲು ಮತ್ತು ಭಾರತದಲ್ಲಿ ನಡೆಯುತ್ತಿರುವ ತಂತ್ರಜ್ಞಾನ-ಚಾಲಿತ ರೂಪಾಂತರಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಆ್ಯಪಲ್‌ ಸಿಇಒ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಆತ್ಮೀಯ ಸ್ವಾಗತಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ತಂತ್ರಜ್ಞಾನವು ಭಾರತದ ಭವಿಷ್ಯದ ಮೇಲೆ ಮಾಡಬಹುದಾದ ಸಕಾರಾತ್ಮಕ ಪರಿಣಾಮದ ಬಗ್ಗೆ ನೀವು ಹೊಂದಿರುವ ದೃಷ್ಟಿಕೋನವನ್ನು ನಾವು ಹಂಚಿಕೊಳ್ಳುತ್ತೇವೆ. ಶಿಕ್ಷಣ ಮತ್ತು ಡೆವಲಪರ್‌ಗಳಿಂದ ತೊಡಗಿ ಉತ್ಪಾದನೆ ಮತ್ತು ಪರಿಸರದವರೆಗೆ, ದೇಶಾದ್ಯಂತ ಹೂಡಿಕೆ ಮಾಡಲು ಬದ್ಧರಾಗಿದ್ದೇವೆ ಎಂದು ಟಿಮ್ ಕುಕ್ ಟ್ವೀಟ್ ಮಾಡಿದ್ದಾರೆ.

ಆ್ಯಪಲ್ ಸಿಇಒ ಅವರು ಪ್ರಧಾನಿ ಭೇಟಿಗೂ ಮುನ್ನ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: Apple Store: ಒಂದು ಆ್ಯಪಲ್ ಸ್ಟೋರ್ ಉದ್ಘಾಟನೆಗೆ ಇಷ್ಟೊಂದು ಬಿಲ್ಡಪ್ಪಾ? ಭಾರತಕ್ಕೆ ಬಂದಿರುವ ಸಿಇಒ ಟಿಮ್ ಕುಕ್ ತಲೆಯಲ್ಲಿ ಬೇರಿನ್ನೇನಾದರೂ ಇದೆಯಾ?

ಟಿಮ್ ಕುಕ್ ಅವರನ್ನು ಭೇಟಿಯಾದೆ. ಉತ್ಪಾದನೆ, ಎಲೆಕ್ಟ್ರಾನಿಕ್ಸ್ ರಫ್ತು ವಿಚಾರದಲ್ಲಿ ಭಾರತದಲ್ಲಿ ಆ್ಯಪಲ್​ನ ಪಾತ್ರದ ಬಗ್ಗೆ ಆಳವಾಗಿ ಚರ್ಚಿಸಲಾಗಿದೆ. ಅಪ್ಲಿಕೇಶನ್, ಆರ್ಥಿಕತೆ, ಕೌಶಲ, ಸುಸ್ಥಿರತೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗ ಸೃಷ್ಟಿ ವಿಚಾರವಾಗಿ ಚರ್ಚಿಸಿದೆವು. ದೀರ್ಘಾವಧಿಯ ಮತ್ತು ಬಲವಾದ ಸಂಬಂಧ ಹೊಂದುವ ಬಗ್ಗೆ ಬಲವಾದ ಪ್ರತಿಪಾದನೆ ಮಾಡಿದೆವು ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.

ಮುಂಬೈನಲ್ಲಿ ಆಪಲ್‌ನ ಮೊದಲ ಇಂಡಿಯಾ ಸ್ಟೋರ್‌ನ ಅದ್ಧೂರಿ ಉದ್ಘಾಟನೆಯಂತೆಯೇ, ನಾಳೆ ಸಾಕೇತ್‌ನ ಸೆಲೆಕ್ಟ್ ಸಿಟಿ ಮಾಲ್‌ನಲ್ಲಿ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಟಿಮ್ ಕುಕ್ ಗ್ರಾಹಕರನ್ನು ಸ್ವಾಗತಿಸಲಿದ್ದಾರೆ.

ಆ್ಯಪಲ್ ಸ್ಟೋರ್​ನಲ್ಲಿ ಏನೇನು ಸಿಗುತ್ತದೆ?

ಈ ಆ್ಯಪಲ್ ಸ್ಟೋರ್ ಬೇರೆ ಸ್ಮಾರ್ಟ್​ಫೋನ್​ಗಳ ಸ್ಟೋರ್​ಗಿಂತ ಬಹಳ ವಿಭಿನ್ನ ಮತ್ತು ವೈಭವಯುತವಾಗಿದೆ. ಇಲ್ಲಿ ಆ್ಯಪಲ್​ನ ಐಫೋನ್, ಐಪ್ಯಾಡ್, ಐಪಾಡ್, ಮ್ಯಾಕ್ ಕಂಪ್ಯೂಟರ್, ಮ್ಯಾಕ್ ಲ್ಯಾಪ್​ಟಾಪ್, ಮ್ಯಾಕ್ ಟಿವಿ ಇತ್ಯಾದಿ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಇಲ್ಲಿ ಸೇಲ್ಸ್ ಜೊತೆಗೆ ಆಫ್ಟರ್ ಸೇಲ್ಸ್ ಸರ್ವಿಸ್ ಕೂಡ ಇರುತ್ತದೆ. ಆದರೂ ಕೂಡ ಆ್ಯಪಲ್ ಸ್ಟೋರ್ ಉದ್ಘಾಟನೆಗೆ ಈ ಪರಿ ಬ್ಯುಲ್ಡಪ್ ಬೇಕಾ ಎಂದು ಕೆಲವರಿಗೆ ಅನಿಸದೇ ಇರದು. ಮುಂಬೈನಲ್ಲಿರುವ ಆ್ಯಪಲ್ ಬಿಕೆಸಿ ಸ್ಟೋರ್​ಗೆ ಹೋಲಿಸಿದರೆ ದೆಹಲಿಯ ಸಾಕೇತ್​ನಲ್ಲಿರುವ ಆ್ಯಪಲ್ ಸ್ಟೋರ್ ಅರ್ಧದಷ್ಟು ಮಾತ್ರ ಇದೆ. ಆದರೆ, ಬಾಡಿಗೆ ಹೆಚ್ಚು. ಸಾಕೇತ್​ನಲ್ಲಿರುವ ಸ್ಟೋರ್ ಗಾತ್ರದಲ್ಲಿ ಚಿಕ್ಕದಾದರೂ ವಿನ್ಯಾಸ ಇತ್ಯಾದಿ ಎಲ್ಲವೂ ಬಹುತೇಕ ಇದೇ ರೀತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 20ರಂದು ದೆಹಲಿಯ ಅ್ಯಪಲ್ ಸ್ಟೋರ್ ಉದ್ಘಾಟನೆಗೆ ಅಣಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Wed, 19 April 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?