AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anuradha Paudwal: ಖ್ಯಾತ ಗಾಯಕಿ ಅನುರಾಧ ಪೌಡ್ವಾಲ್ ಬಿಜೆಪಿಗೆ ಸೇರ್ಪಡೆ

ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರಿದ್ದಾರೆ.  ಹಿಂದಿ ಚಿತ್ರರಂಗದ ಪ್ರಸಿದ್ಧ ಗಾಯಕಿಯೂ ಆಗಿರುವ ಅನುರಾಧಾ ಪೌಡ್ವಾಲ್,ಭಕ್ತಿಗೀತೆ, ಭಜನಾ ಗಾಯನ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರಿರುವ ಅನುರಾಧಾ ಅವರು ಸ್ಟಾರ್ ಪ್ರಚಾರಕರಾಗುವ ಸಾಧ್ಯತೆ ಇದೆ.

Anuradha Paudwal: ಖ್ಯಾತ ಗಾಯಕಿ ಅನುರಾಧ ಪೌಡ್ವಾಲ್ ಬಿಜೆಪಿಗೆ ಸೇರ್ಪಡೆ
ಅನುರಾಧಾ ಪೌಡ್ವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 16, 2024 | 1:58 PM

Share

ದೆಹಲಿ ಮಾರ್ಚ್ 16: ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ (Anuradha Paudwal) ಇಂದು (ಶನಿವಾರ) ಬಿಜೆಪಿಗೆ (BJP) ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ (Lok Sabha Election) ದಿನಾಂಕ ಘೋಷಣೆಯಾಗುವ ಮುನ್ನವೇ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರಿರುವುದರಿಂದ ಪಕ್ಷವು ಚುನಾವಣೆಯ ದೊಡ್ಡ ಜವಾಬ್ದಾರಿಯನ್ನು ನೀಡಬಹುದು ಎಂದು ತಜ್ಞರು ಹೇಳುತ್ತಾರೆ. ಬಿಜೆಪಿ ಪಕ್ಷದ ಸ್ಟಾರ್ ಚುನಾವಣಾ ಪ್ರಚಾರಕ್ಕೂ ಅನುರಾಧಾ ಬರಬಹುದು ಎಂದು ನಿರೀಕ್ಷಿಸಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿದಂತೆ ಅದರ ಹಿರಿಯ ನಾಯಕರ ಸಮ್ಮುಖದಲ್ಲಿ ಗಾಯಕಿ ಬಿಜೆಪಿ ಸೇರಿದ್ದಾರೆ.

ಹಿಂದಿ ಚಿತ್ರರಂಗದ ಪ್ರಸಿದ್ಧ ಗಾಯಕಿಯೂ ಆಗಿರುವ ಅನುರಾಧಾ ಪೌಡ್ವಾಲ್ ,ಭಕ್ತಿಗೀತೆ, ಭಜನಾ ಗಾಯನ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅಕ್ಟೋಬರ್ 27, 1954 ರಂದು ಮುಂಬೈನಲ್ಲಿ ಜನಿಸಿದ ಅನುರಾಧಾ, 1973 ರಲ್ಲಿ ಅಮಿತಾಬ್ ಬಚ್ಚನ್ ಮತ್ತು ಜಯಪ್ರದಾ ಅಭಿನಯದ ‘ಅಭಿಮಾನ್’ ಚಿತ್ರದ ಮೂಲಕ ತಮ್ಮ ಗಾಯನ ವೃತ್ತಿಜೀವನವನ್ನು ಪ್ರಾರಂಭಿಸಿದರು. ‘ಆಶಿಕಿ’, ‘ದಿಲ್ ಹೈ ಕೀ ಮಾನ್ತಾ  ನಹಿ’ ಮತ್ತು ‘ಬೇಟಾ’ ಚಿತ್ರಗಳಲ್ಲಿನ ಗಾಯನಕ್ಕಾಗಿ ಅನುರಾಧಾ ಪೌಡ್ವಾಲ್ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ದಕ್ಕಿತ್ತು. 80-90ರ  ದಶಕದಲ್ಲಿ ಅನುರಾಧಾ ಪೌಡ್ವಾಲ್ ಹಾಡಿದ ಬಹುತೇಕ ಹಾಡುಗಳು ಹಿಟ್ ಆಗಿದ್ದವು.

ಅನುರಾಧಾ ಪೌಡ್ವಾಲ್ ಬಿಜೆಪಿಗೆ

ಐದು ದಶಕಗಳ ಕಾಲದ ವೃತ್ತಿಜೀವನದಲ್ಲಿ, ಅನುರಾಧಾ ಪೌಡ್ವಾಲ್ ಗುಜರಾತಿ, ಹಿಂದಿ, ಕನ್ನಡ, ಮರಾಠಿ, ಸಂಸ್ಕೃತ, ಬಂಗಾಳಿ, ತಮಿಳು, ತೆಲುಗು, ಒರಿಯಾ, ಅಸ್ಸಾಮಿ, ಪಂಜಾಬಿ, ಭೋಜ್‌ಪುರಿ, ನೇಪಾಳಿ ಮತ್ತು ಸೇರಿದಂತೆ ಭಾಷೆಗಳಲ್ಲಿ 9,000 ಕ್ಕೂ ಹೆಚ್ಚು ಹಾಡುಗಳನ್ನು ಮತ್ತು 1,500 ಕ್ಕೂ ಹೆಚ್ಚು ಭಜನೆಗಳನ್ನು ರಚಿಸಿದ್ದಾರೆ.

“ಸನಾತನ ಧರ್ಮದೊಂದಿಗೆ ಗಾಢವಾದ ಸಂಪರ್ಕ” ಹೊಂದಿರುವ ಸರ್ಕಾರವನ್ನು ಸೇರಲು ನನಗೆ ಸಂತೋಷವಾಗಿದೆ ಎಂದು ಪೌಡ್ವಾಲ್ ಹೇಳಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು, ಮೋದಿ ನೇತೃತ್ವದ ಪಕ್ಷಕ್ಕೆ ಸೇರಲು ನನಗೆ ಸಂತೋಷವಾಗಿದೆ ಎಂದು ಹೇಳಿದರು. ಸನಾತನ (ಧರ್ಮ) ದೊಂದಿಗೆ ಗಾಢವಾದ ಸಂಬಂಧ ಹೊಂದಿರುವ ಸರ್ಕಾರಕ್ಕೆ ನಾನು ಸೇರ್ಪಡೆಯಾಗುತ್ತಿರುವುದು ನನಗೆ ಖುಷಿ ತಂದಿದೆ.ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಇದು ಕಾನೂನು ಬಾಹಿರ ಕ್ರಮ’: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿದ ನಂತರ ಕೆ ಕವಿತಾ ಪ್ರತಿಕ್ರಿಯೆ

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಪ್ರಸಿದ್ಧ ಹಿನ್ನೆಲೆ ಗಾಯಕಿಯಾಗಿದ್ದಾರೆ ಅನುರಾಧಾ ಪೌಡ್ವಾಲ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Sat, 16 March 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ