AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದಾಬಾದ್​ನಲ್ಲಿ ವಸತಿಗಳು ಕೈಗೆಟಕುವ ದರದಲ್ಲಿ ಲಭ್ಯ..ಮುಂಬೈ ದುಬಾರಿ ನಗರ

ಮುಂಬೈನಲ್ಲಿ ವಸತಿ ದರದ ಅನುಪಾತ ಶೇ.61ರಷ್ಟಿದ್ದು, ದೇಶದಲ್ಲಿಯೇ ಅತ್ಯಂತ ದುಬಾರಿ ವಸತಿ ಮಾರುಕಟ್ಟೆ ಹೊಂದಿರುವ ನಗರವಾಗಿದೆ. ಮುಂಬೈನಲ್ಲಿ ಈ ಪ್ರಮಾಣ 2010ರಲ್ಲಿ ಶೇ. 93 ಇತ್ತು.

ಅಹ್ಮದಾಬಾದ್​ನಲ್ಲಿ ವಸತಿಗಳು ಕೈಗೆಟಕುವ ದರದಲ್ಲಿ ಲಭ್ಯ..ಮುಂಬೈ ದುಬಾರಿ ನಗರ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 30, 2020 | 9:39 PM

Share

ದೆಹಲಿ: ಅಹ್ಮದಾಬಾದ್​ನಲ್ಲಿ ದೇಶದಲ್ಲಿಯೇ ಅತ್ಯಂತ ಒಳ್ಳೆಯ ಕೈಗೆಟಕುವ ದರದಲ್ಲಿ ನಿವೇಶನಗಳು ಲಭ್ಯವಾಗುತ್ತವೆ..ಹಾಗೇ ಮುಂಬೈನಲ್ಲಿ ಅತಿದುಬಾರಿಯಾಗಿವೆ ಎಂದು ಅಂತಾರಾಷ್ಟ್ರೀಯ ಆಸ್ತಿ ಸಲಹೆಗಾರ ಕಂಪನಿ Knight Frank India ವರದಿ ನೀಡಿದೆ.

ವಸತಿ ಮಾರುಕಟ್ಟೆಗಳ 2020ರ ದರದ ಸೂಚ್ಯಂಕವನ್ನು Knight Frank India ಇಂದು ಬಿಡುಗಡೆ ಮಾಡಿದೆ. ಅದರ ಅನ್ವಯ, ಅಹ್ಮದಾಬಾದ್​ನಲ್ಲಿ ವಸತಿಗಳು ಶೇ.24ರ ಅನುಪಾತದಲ್ಲಿ ಸಿಗುತ್ತವೆ.. ಅದಾದ ಬಳಿಕ ಚೆನ್ನೈ ಮತ್ತು ಪುಣೆಗಳಲ್ಲಿ ಶೇ.26ರಷ್ಟಿದೆ. ಶೇ.50ಕ್ಕಿಂತಲೂ ಹೆಚ್ಚು ಅನುಪಾತದ ಪ್ರಮಾಣ ಇದ್ದರೆ, ಬ್ಯಾಂಕ್​ಗಳು, ಹಣಕಾಸು ಸಂಸ್ಥೆಗಳಿಂದ ಗೃಹಸಾಲ ಪಡೆಯುವುದು ಕಷ್ಟವಾಗುತ್ತದೆ. ಈ ಕಾರಣದಿಂದ ಮನೆಗಳನ್ನು ಖರೀದಿಸಲು ಬ್ಯಾಂಕ್​, ಹಣಕಾಸು ಸಂಸ್ಥೆಗಳಿಂದ ಸಾಲ ಮಾಡುವುದು ತೀರ ಕಷ್ಟವಾಗುತ್ತದೆ. ಹೀಗಾಗಿ ಅದು ದುಬಾರಿಯಾಗಿ ಪರಿಣಮಿಸುತ್ತದೆ ಎಂದು ಕಂಪನಿ ಹೇಳಿದೆ.

ಹಾಗೇ ಮುಂಬೈನಲ್ಲಿ ವಸತಿ ದರದ ಅನುಪಾತ ಶೇ.61ರಷ್ಟಿದ್ದು, ದೇಶದಲ್ಲಿಯೇ ಅತ್ಯಂತ ದುಬಾರಿ ವಸತಿ ಮಾರುಕಟ್ಟೆ ಹೊಂದಿರುವ ನಗರವಾಗಿದೆ. ಮುಂಬೈನಲ್ಲಿ ಈ ಪ್ರಮಾಣ 2010ರಲ್ಲಿ ಶೇ. 93 ಇತ್ತು. ಅದೀಗ ಗಣನೀಯವಾಗಿ ಕಡಿಮೆಯಾಗಿದ್ದರೂ ಇನ್ನೂ ದುಬಾರಿ ಸಿಟಿಯಾಗಿಯೇ ಮುಂದುವರಿಯುತ್ತಿದೆ ಎಂದು ವರದಿಯಲ್ಲಿ ತಿಳಿಸಿದೆ. ಹಾಗೇ ಬೆಂಗಳೂರಿನಲ್ಲಿ ರೇಷಿಯೋ ಶೇ. 28ರಷ್ಟಿದ್ದು, ದಶಕಗಳ ಹಿಂದೆ ಈ ಪ್ರಮಾಣ ಶೇ.48ರಷ್ಟಿತ್ತು ಎಂದು ಕಂಪನಿಯ ವರದಿ ತಿಳಿಸಿದೆ.

ಕೊವಿಡ್​ ಇದ್ದರೂ ಭಾರತದಲ್ಲಿ ಅತ್ಯಧಿಕ ಬುಕ್ಕಿಂಗ್​ ಕಂಡ ಒಯೋ; ಹೊಸದಾಗಿ 85 ಲಕ್ಷ ಗ್ರಾಹಕರು ಸೇರ್ಪಡೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ