AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಪತ್ನಿಯನ್ನು ದರ ದರನೆ ಎಳೆದೊಯ್ದು ಎಂಟು ಬಾರಿ ಚಾಕುವಿನಿಂದ ಇರಿದ ಪತಿ

ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್​ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ, ನಂತರ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ರಸ್ತೆಯಲ್ಲಿ ಪತ್ನಿಯನ್ನು ದರ ದರನೆ ಎಳೆದೊಯ್ದು ಎಂಟು ಬಾರಿ ಚಾಕುವಿನಿಂದ ಇರಿದ ಪತಿ
ಕ್ರೈಂ
ನಯನಾ ರಾಜೀವ್
|

Updated on: Nov 05, 2025 | 8:10 AM

Share

ನಿಕೋಲ್, ನವೆಂಬರ್ 05: ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ, ನಂತರ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ನಿಕೋಲ್ ಪೊಲೀಸರ ಪ್ರಕಾರ, ಸಂತ್ರಸ್ತೆ ಕೃಷ್ಣನಗರದ ವಿಷ್ಣು ಪಾರ್ಕ್‌ನ ಮಾಯಾಂಕ್ ಪಟೇಲ್ ಅವರನ್ನು ಸುಮಾರು ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಆರಂಭದಲ್ಲಿ, ಆಕೆಯ ವೈವಾಹಿಕ ಜೀವನವು ಶಾಂತಿಯುತವಾಗಿತ್ತು, ಆದರೆ ಕೆಲವೇ ತಿಂಗಳುಗಳಲ್ಲಿ, ಆಕೆಯ ಪತಿ ಮತ್ತು ಅತ್ತೆ-ಮಾವಂದಿರು ಮನೆಯ ಕ್ಷುಲ್ಲಕ ವಿಷಯಗಳಿಗೆ ಕಿರುಕುಳ ಮತ್ತು ಹಲ್ಲೆ ಮಾಡಲು ಪ್ರಾರಂಭಿಸಿದ್ದರು ಎಂದು ಆಕೆ ತಿಳಿಸಿದ್ದಾರೆ.

ಮಯಾಂಕ್ ಅವರ ಕಿರಿಯ ಸಹೋದರ ಯಾವುದೋ ಕಾರಣಗಳಿಂದಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು. ಅದಕ್ಕೂ ಈಕೆಯೇ ಕಾರಣ ಎಂದು ಮನೆಯಲ್ಲಿ ಎಲ್ಲರೂ ದೂರಿದ್ದರು.ಪದೇ ಪದೇ ನಡೆದ ವಾದಗಳು ಮತ್ತು ಹಲ್ಲೆಗಳ ನಂತರ, ಮಹಿಳೆಯನ್ನು ತನ್ನ ಮನೆಯಿಂದ ಹೊರಗೆ ಹಾಕಲಾಯಿತು ಮತ್ತು ಆಕೆ ತನ್ನ ಹೆತ್ತವರೊಂದಿಗೆ ಇದ್ದರು.

ಮತ್ತಷ್ಟು ಓದಿ:  ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

ಸೋಮವಾರ ಸಂಜೆ, ಮಹಿಳೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಖೋಡಿಯಾರ್‌ನಗರ ದೂಧ್‌ಸಾಗರ್ ಸೊಸೈಟಿ ಬಳಿ ಬಂದಾಗ, ಮಾಯಾಂಕ್ ಆಕೆಯ ಎದುರು ಬಂದು ನಿಂತಿದ್ದ. ತನ್ನ ಸಹೋದರ ಆತ್ಮಹತ್ಯೆ ಮಾಡಿಕೊಳ್ಳಲು ಅವಳೇ ಕಾರಣ ಎಂದು ಎಲ್ಲರೆದುರು ಕೂಗಾಡಿದ್ದಾನೆ. ಆಕೆ ಸಹಾಯಕ್ಕಾಗಿ ಕೂಗುತ್ತಿರುವಾಗ ರಸ್ತೆಯಲ್ಲಿ ಆಕೆಯನ್ನು ಎಳೆದುಕೊಂಡು ಹೋಗಲು ಪ್ರಾರಂಭಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಕೆಲವು ಕ್ಷಣಗಳ ನಂತರ, ಮಾಯಾಂಕ್ ಹರಿತವಾದ ಚಾಕುವಿನಿಂದ ಮಹಿಳೆಗೆ ಎಂಟು ಬಾರಿ ಇರಿದಿದ್ದಾನೆ.ಆಕೆಯ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ. ಆಕೆಯ ಕಿರುಚಾಟ ಕೇಳಿ, ಅಲ್ಲಿದ್ದವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸಂತ್ರಸ್ತೆಯ ಸಹಾಯಕ್ಕೆ ಧಾವಿಸಿದ್ದರು. ಅವರು ಗಾಯಗೊಂಡ ಮಹಿಳೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ನಿಕೋಲ್ ಪೊಲೀಸರು ಆಕೆಯ ಪತಿ ಮಾಯಾಂಕ್ ಪಟೇಲ್ ಮತ್ತು ಅತ್ತೆ ಭಾವನಾ ಪಟೇಲ್ ವಿರುದ್ಧ ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?