
ಅಹಮದಾಬಾದ್, ಜೂನ್ 13: ಗುಜರಾತ್ನ (Gujarat Plane Crash) ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ (Air India Plane Crash) ಮೃತಪಟ್ಟವರನ್ನು ಗುರುತಿಸಲು ಅಧಿಕಾರಿಗಳು ಇಂದು ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಮೃತರ ಕುಟುಂಬಗಳು ಸಿವಿಲ್ ಆಸ್ಪತ್ರೆಯಲ್ಲಿಯೇ ಕಾಯುತ್ತಿದ್ದಾರೆ. ಡಿಎನ್ಎ ಪರೀಕ್ಷೆಯ ನಂತರವೇ ಶವಗಳನ್ನು ಹಸ್ತಾಂತರಿಸಲಾಗುವುದು ಎಂದು ಹೇಳಿರುವುದರಿಂದ ತಮ್ಮ ಕುಟುಂಬದವರ ಡಿಎನ್ಎ ಪರೀಕ್ಷೆಗಾಗಿ ಸಂಬಂಧಿಕರು ಕಾಯುತ್ತಿದ್ದಾರೆ. ಆ ವಿಮಾನ ಎಷ್ಟು ಪ್ರಮಾಣದಲ್ಲಿ ಸುಟ್ಟುಹೋಗಿದೆಯೆಂದರೆ ಕೆಲವು ಶವಗಳು ಸಂಪೂರ್ಣವಾಗಿ ಬೂದಿಯಾಗಿವೆ. ಆದರೂ ಅವಶೇಷಗಳಲ್ಲಿ ಸಿಕ್ಕ ಮೂಳೆಗಳನ್ನು ಕಲೆಹಾಕಿ, ಅದನ್ನು ಈಗಾಗಲೇ ಸಂಗ್ರಹಿಸಲಾದ ಕುಟುಂಬಸ್ಥರ ಟಿಎನ್ಎ ಜೊತೆ ಹೋಲಿಸಲಾಗುತ್ತಿದೆ.
ಸದ್ಯದ ಮಟ್ಟಿಗೆ 110 ಪ್ರಯಾಣಿಕರ ಡಿಎನ್ಎ ಮ್ಯಾಚ್ ಆಗಿದೆ ಎನ್ನಲಾಗುತ್ತಿದೆ. ಅವರ ಶವಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸಿಎನ್ಎನ್-ನ್ಯೂಸ್ 18 ವರದಿಯ ಪ್ರಕಾರ ಇಲ್ಲಿಯವರೆಗೆ 200 ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಗುರುತಿನ ಪ್ರಕ್ರಿಯೆಯ ನಂತರ ಅಧಿಕಾರಿಗಳು ಶವಗಳನ್ನು ಹಸ್ತಾಂತರಿಸಲು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ: Plane Crash: ಕೊನೆಗೂ ಸಿಕ್ಕಿತು ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಡಿವಿಆರ್; ಇದರಿಂದ ಏನು ಪ್ರಯೋಜನ?
ಜೂನ್ 12ರಂದು ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ AI-171 ವಿಮಾನ, ಬೋಯಿಂಗ್ 787-8 ಡ್ರೀಮ್ಲೈನರ್, ಅಹಮದಾಬಾದ್ನಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಯಿತು. ಈ ವಿಮಾನವು ಬಿ.ಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ನ ಕಟ್ಟಡಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿದೆ.
ಇದನ್ನೂ ಓದಿ: ಗಣಪತಿಯೇ ನನ್ನ ಕಾಪಾಡಿದ!; 10 ನಿಮಿಷ ತಡವಾಗಿ ಏರ್ಪೋರ್ಟ್ಗೆ ಬಂದಿದ್ದಕ್ಕೆ ಉಳಿಯಿತು ಯುವತಿಯ ಪ್ರಾಣ
ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡಗಳು ದಿನದ 24 ಗಂಟೆಯೂ ಕೆಲಸ ಮಾಡುತ್ತಿವೆ. ಏಕೆಂದರೆ ಅವಶೇಷಗಳಿಂದ ಹೊರತೆಗೆಯಲಾದ ಹೆಚ್ಚಿನ ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ. ಮೃತಪಟ್ಟವರಲ್ಲಿ ವೈದ್ಯಕೀಯ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳೂ ಸೇರಿದ್ದಾರೆ. ಇನ್ನೂ ಕೆಲವರು ಕಾಣೆಯಾಗಿರುವುದರಿಂದ ಆ ಹಾಸ್ಟೆಲ್ನಲ್ಲಿ ಎಷ್ಟು ಸಾವು ಸಂಭವಿಸಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಾಗುತ್ತಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:28 pm, Fri, 13 June 25