AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ahmedabad plane crash: ಲಕ್ಕಿ ನಂಬರೇ ಅನ್​ಲಕ್ಕಿಯಾಯ್ತು! 1206 ಸಂಖ್ಯೆಯನ್ನೇ ನಂಬಿದ್ದ ವಿಜಯ್ ರೂಪಾನಿ

ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್​​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ. ದುರದೃಷ್ಟವಶಾತ್, ಅವರು ಅದೃಷ್ಟವೆಂದು ನಂಬಿದ್ದ ಸಂಖ್ಯೆ ಅವರ ಪ್ರಾಣಕ್ಕೇ ಎರವಾಗಿದೆ. 1206 ಸಂಖ್ಯೆಯನ್ನು ಅವರು ಅದೃಷ್ಟವೆಂದು ಭಾವಿಸಿದ್ದರು. ಅವರ ಮೊದಲ ಸ್ಕೂಟರ್ ಹಾಗೂ ಕಾರಿನ ನೋಂದಣಿ ಸಂಖ್ಯೆ ಕೂಡ 1206 ರಿಂದ ಆರಂಭವಾಗುವಂಥವಾಗಿದ್ದವು. ಆದರೆ ಅದೇ ಸಂಖ್ಯೆಯ ದಿನಾಂಕದಂದು (ಜೂನ್ 12, 2025) ಅವರು ನಿಧನರಾಗಿದ್ದಾರೆ.

Ahmedabad plane crash: ಲಕ್ಕಿ ನಂಬರೇ ಅನ್​ಲಕ್ಕಿಯಾಯ್ತು! 1206 ಸಂಖ್ಯೆಯನ್ನೇ ನಂಬಿದ್ದ ವಿಜಯ್ ರೂಪಾನಿ
ವಿಜಯ್ ರೂಪಾನಿ ಮತ್ತು ಅಹಮದಾಬಾದ್ ವಿಮಾನ ದುರಂತ
ಗಣಪತಿ ಶರ್ಮಾ
|

Updated on: Jun 13, 2025 | 9:02 AM

Share

ಅಹಮದಾಬಾದ್, ಜೂನ್ 13: ಅಹಮದಾಬಾದ್ ವಿಮಾನ ಪತನ (Ahmedabad plane crash) ದುರಂತ ಇಡೀ ದೇಶವನ್ನೇ ಆಘಾತಕ್ಕೊಳಗಾಗಿಸಿದೆ. ಈ ವಿಮಾನ ಅಪಘಾತದಲ್ಲಿ 265 ಜನ ಮೃತಪಟ್ಟಿದ್ದು, ಇದರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (Vijay Rupani) ಕೂಡ ಸೇರಿದ್ದಾರೆ. ಅವರು ಪತ್ನಿ ಅಂಜಲಿ ಮತ್ತು ಮಗಳನ್ನು ಭೇಟಿಯಾಗಲು ಲಂಡನ್​ಗೆ ತೆರಳುತ್ತಿದ್ದರು. ವಿಜಯ್ ರೂಪಾನಿ ಅವರ ಸಾವಿನ ದಿನಾಂಕದ ಬಗ್ಗೆ ಇದೀಗ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂದಿದೆ. ಜೀವನದುದ್ದಕ್ಕೂ ಅದೃಷ್ಟ ಎಂದೇ ಅವರು ಭಾವಿಸಿಕೊಂಡು ಬಂದಿದ್ದ ಆ ಸಂಖ್ಯೆಯೇ ಅವರಿಗೆ ಮುಳುವಾಗಿದೆ. ಅಷ್ಟೇ ಅಲ್ಲ, ಅವರ ಸಾವಿನ ದಿನಾಂಕವಾಗಿ ಮಾರ್ಪಟ್ಟಿದೆ!

ವಿಜಯ್ ರೂಪಾನಿಗೆ 1206 ಎಂಬುದು ಕೇವಲ ಒಂದು ಸಂಖ್ಯೆಯಾಗಿರಲಿಲ್ಲ. ಬದಲಿಗೆ, ನಂಬಿಕೆಯ ಸಂಕೇತವಾಗಿತ್ತು. ಅದನ್ನು ಅವರು ಅದೃಷ್ಟವೆಂದೇ ಭಾವಿಸಿದ್ದರು. ವಿಜಯ್ ರೂಪಾನಿ ಈ ಸಂಖ್ಯೆಯನ್ನು ಎಷ್ಟರ ಮಟ್ಟಿಗೆ ಅದೃಷ್ಟವೆಂದು ಪರಿಗಣಿಸಿದ್ದರು ಎಂದರೆ, ತಾವು ಖರೀದಿ ಮಾಡಿದ ಮೊದಲ ಸ್ಕೂಟರ್‌ನಿಂದ ಕಾರಿನವರೆಗೆ ಎಲ್ಲಾ ವಾಹನಗಳ ಸಂಖ್ಯೆ 1206 ರಿಂದಲೇ ಪ್ರಾರಂಭವಾಗುವಂತಿತ್ತು. ಆದರೆ ಅದೇ ಸಂಖ್ಯೆ ಅವರಿಗೆ ಅಶುಭಕರವಾಗಿ ಪರಿಣಮಿಸಿತು. 1206 (ದಿನಾಂಕ 12-6-25) ರಂದು ಅವರು ಪ್ರಾಣವನ್ನೇ ಕಳೆದುಕೊಂಡರು.

ರೂಪಾನಿ ಅವರ ಅದೃಷ್ಟ ಸಂಖ್ಯೆ 1206 ಅವರಿಗೆ ಮಾತ್ರವಲ್ಲದೆ ಅವರ ಕುಟುಂಬಕ್ಕೂ ದುರದೃಷ್ಟಕರವೆಂಬುದು ಜೂನ್ 12, ಅಂದರೆ 12-06 ರಂದು ಸಾಬೀತಾಯಿತು. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಿಜಯ್ ರೂಪಾನಿ ಅವರ ಸ್ಕೂಟರ್ ಮತ್ತು ಮೊದಲ ಕಾರು 1206 ನೋಂದಣಿ ಸಂಖ್ಯೆಯನ್ನು ಹೊಂದಿವೆ. ಈ ಕಾರು ಮತ್ತು ಸ್ಕೂಟರ್ ಈಗಲೂ ಅವರ ಮನೆಯ ಪಾರ್ಕಿಂಗ್ ಜಾಗದಲ್ಲಿವೆ.

ಇದನ್ನೂ ಓದಿ
Image
ಡಿಎನ್​ಎ ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ; ಅಮಿತ್ ಶಾ
Image
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
Image
Plane Crash: ಗುಜರಾತ್​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು
Image
ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಮಾಜಿ ಸಿಎಂ ರೂಪಾನಿ ಇದ್ರು

ಏರ್ ಇಂಡಿಯಾ ವಿಮಾನ ಪತನ: 265 ಮಂದಿ ಸಾವು

ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್​​ಗೆ ಹೊರಟ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನವು ವೈದ್ಯಕೀಯ ಕಾಲೇಜು ಕ್ಯಾಂಪಸ್‌ಗೆ ಅಪ್ಪಳಿಸಿತು. ಈ ಅಪಘಾತದಲ್ಲಿ 265 ಜನರು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಮೃತರಲ್ಲಿ ಸೇರಿದ್ದಾರೆ. ಬೋಯಿಂಗ್ 787 ಡ್ರೀಮ್‌ಲೈನರ್ (AI171) ನ ಸೀಟ್ 11A ನಲ್ಲಿ ಕುಳಿತಿದ್ದ ರಮೇಶ್ ಎಂಬ ಒಬ್ಬ ಪ್ರಯಾಣಿಕ ಮಾತ್ರ ಬದುಕುಳಿದಿದ್ದಾರೆ.

ಇದನ್ನೂ ಓದಿ: ಗುಜರಾತ್​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು

ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಏರ್ ಇಂಡಿಯಾ ಪ್ರಕಾರ, ವಿಮಾನದಲ್ಲಿದ್ದ 230 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ನಾಗರಿಕರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ