AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್​ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್

ಭಾರತಕ್ಕೆ ಇದೊಂದು ಕರಾಳ ದಿನವಾಗಿದೆ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 242 ಜನರನ್ನು ಹೊತ್ತು ಲಂಡನ್​​​​​​​​ನತ್ತ ಹಾರಿತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಂದರೆ 1.38 ಕ್ಕೆ ಅಪಘಾತಕ್ಕೀಡಾಯಿತು. ಆದರೆ ಇದಕ್ಕೆ ಕೆಲವೊಂದು ಕಾರಣಗಳನ್ನು ತಜ್ಞರು ತಿಳಿಸಿದ್ದಾರೆ. ಅವುಗಳು ಯಾವುವು ಇಲ್ಲಿದೆ ನೋಡಿ.

ಅಹಮದಾಬಾದ್​ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್
ವಿಮಾನ ಪತನ
ಅಕ್ಷಯ್​ ಪಲ್ಲಮಜಲು​​
|

Updated on:Jun 13, 2025 | 10:24 AM

Share

ಗುರುವಾರದಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171, (Air India Plane Crash) ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 672 ಅಡಿ ಎತ್ತರದಿಂದ ಮೆಡಿಕಲ್​​​​​​​​ ಹಾಸ್ಟೆಲ್​​​ ಮೇಲೆ ಬಂದು ಅಪ್ಪಳಿಸಿದೆ. ಈ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡಿದೆ. ಒಂದು ವಿಮಾನ ನಿಯಂತ್ರಣ ಕಳೆದುಕೊಂಡ ನಂತರ ಪೈಲಟ್‌​​​​ ವಿಮಾನವನ್ನು ನಿಯಂತ್ರಣ ಮಾಡಲು ವಿಮಾನದ ಒಳಗೆ ಇರುವ ಕೆಲವೊಂದು ತಂತ್ರಗಳನ್ನು ಬಳಸುತ್ತಾರೆ. ಆದರೆ ಏರ್ ಇಂಡಿಯಾ ವಿಮಾನ AI-171 ಈ ಎಲ್ಲ ತಂತ್ರಗಳು ಕೈಕೊಟ್ಟಿದೆ. ಕೊನೆಯ ಕ್ಷಣದಲ್ಲಿ ಕಾಕ್‌ಪಿಟ್​​​ನಲ್ಲಿ ನಡೆದಿರುವ ಬಗ್ಗೆ ಮಾಜಿ ಹಿರಿಯ ಪೈಲಟ್ ಕ್ಯಾಪ್ಟನ್ ಸೌರಭ್ ಭಟ್ನಾಗರ್ ಎನ್​​​​ಡಿಟಿವಿ ತಿಳಿಸಿದ್ದಾರೆ.

ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು, 10 ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ 242 ಜನರನ್ನು ಹೊತ್ತು ಲಂಡನ್​​​​​​​​ನತ್ತ ಹಾರಿತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಂದರೆ 1.38 ಕ್ಕೆ ಅಪಘಾತಕ್ಕೀಡಾಯಿತು. ವೈರಲ್​​ ಆಗಿರುವ ವಿಡಿಯೋಗಳನ್ನು ಒಮ್ಮೆ ನೋಡಿದ್ರೆ ಈ ವಿಮಾನ ಟೇಕ್ ಆಫ್ ಆಗಲು ಈ ವಿಮಾನ  ಹೆಣಗಾಡುತ್ತಿರುವುದನ್ನು ಕಾಣಬಹುದು. ನಂತರ ಅದು ಲಿಫ್ಟ್ ಆಗಿ ನಿಯಂತ್ರಣ ಕಳೆದುಕೊಂಡು ಕಟ್ಟಡಕ್ಕೆ ಅಪ್ಪಳಿಸುತ್ತದೆ.

ತಜ್ಞರು ಹೇಳುವ ಪ್ರಕಾರ, ಸುರಕ್ಷತಾ ದಾಖಲೆಯನ್ನು ಹೊಂದಿದ ಬೋಯಿಂಗ್ 787-8 ಡ್ರೀಮ್‌ಲೈನರ್ ಮೇಲಕ್ಕೆ ಹಾರುತ್ತಿದ್ದಂತೆ ಒತ್ತಡವನ್ನು ಅನುಭವಿಸಿತು. ಪೈಲಟ್‌ಗಳು ಈ ಸಮಯದಲ್ಲಿ ವಿಮಾನದ ಲಿಫ್ಟ್ ಗೇರ್ ಮತ್ತು ಎತ್ತರವನ್ನು ಪಡೆಯಲು ನೊಗ ಪಂಪರ್​​​ನ್ನು ಎಳೆಯುತ್ತಾರೆ. ಆದರೆ ಇದು ಯಾವುದು ಕೂಡ ಆ ಸಮಯದಲ್ಲಿ ಕೆಲಸಕ್ಕೆ ಬಂದಿಲ್ಲ. ಈ ಸಮಯದಲ್ಲಿ ಲ್ಯಾಂಡಿಂಗ್ ಗೇರ್ ಕೂಡ ಕೈಕೊಟ್ಟಿರಬಹುದು. ಇಂತಹ ಅಪಾಯದ ಸಮಯದಲ್ಲಿ ಪೈಲಟ್‌ ಮೇಡೇ ಎಂಬ ಕರೆಯನ್ನು ನೀಡುತ್ತಾರೆ. ಟೇಕ್ ಆಫ್ ಆದ ನಂತರ ಈ ಕರೆಯನ್ನು ನೀಡಲಾಯಿತು. 174 ನಾಟ್‌ಗಳು ವಿಮಾನದ ಗರಿಷ್ಠ ವೇಗವಾಗಿರುತ್ತದೆ. ಆದರೆ ಈ ವಿಮಾನದಲ್ಲಿ ಅದಕ್ಕಿಂತಲ್ಲೂ ವೇಗವಾಗಿತ್ತು. ಆದರೆ ಈ ವೇಳೆ ಇಂಜಿನ್​​​ ಕೂಡ ಸಾಕಷ್ಟು ಶಕ್ತಿಯನ್ನು ಉತ್ಪಾದಿಸಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಟೇಕ್-ಆಫ್ ಪ್ರಕ್ರಿಯೆ ಸರಿಯಾಗಿತ್ತು ಎಂಬುದನ್ನು ನಾವು ನಂಬುತ್ತೇವೆ. ಆದರೆ ಗೇರ್ ತೆಗೆದುಕೊಳ್ಳುವ ಮೊದಲು ವಿಮಾನ ಕೆಳಮುಖಕ್ಕೆ ಇಳಿದಿದೆ. ಎಂಜಿನ್ ಶಕ್ತಿಯನ್ನು ಕಳೆದುಕೊಂಡರೆ ಅಥವಾ ವಿಮಾನವು ಲಿಫ್ಟ್ ಗೇರ್​​​  ಚಲಿಸುವುದನ್ನು ನಿಲ್ಲಿಸಿದರೆ ಮಾತ್ರ ಇಂತಹ ಅಪಾಯಗಳು ಸಂಭವಿಸುತ್ತದೆ. ಒಟ್ಟಾರೆಯಾಗಿ ತನಿಖೆಯ ನಂತರವೇ ನಿಖರವಾದ ಕಾರಣ ತಿಳಿಯುವುದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 am, Fri, 13 June 25

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ