AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್: ಆಟವಾಡುತ್ತಾ ಸಣ್ಣ ಎಲ್​ಇಡಿ ಬಲ್ಬ್​ ನುಂಗಿದ ಮಗು

ಮಧ್ಯಪ್ರದೇಶದ ರತ್ಲಾಮ್ ಮೂಲದ 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್​ಇಡಿ ಬಲ್ಬ್​ ನುಂಗಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಇದೀಗ ಮಗುವನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್​ನೊಂದಿಗೆ ಆಟವಾಡುತ್ತಿತ್ತು, ಅದರಲ್ಲಿರುವ ಆಂಟೆನಾದಲ್ಲಿ ಎಲ್​ಇಡಿ ಬಲ್ಬ್​ ಇತ್ತು, ಆ ಬಲ್ಬ್​ ಅನ್ನು ಬಾಯಿಗೆ ಹಾಕಿಕೊಂಡಿತ್ತು.

ಅಹಮದಾಬಾದ್: ಆಟವಾಡುತ್ತಾ ಸಣ್ಣ ಎಲ್​ಇಡಿ ಬಲ್ಬ್​ ನುಂಗಿದ ಮಗು
ಮಗುImage Credit source: Yahoo
ನಯನಾ ರಾಜೀವ್
|

Updated on: Aug 27, 2023 | 10:33 AM

Share

ಮಧ್ಯಪ್ರದೇಶದ ರತ್ಲಾಮ್ ಮೂಲದ 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್​ಇಡಿ ಬಲ್ಬ್​ ನುಂಗಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಇದೀಗ ಮಗುವನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್​ನೊಂದಿಗೆ ಆಟವಾಡುತ್ತಿತ್ತು, ಅದರಲ್ಲಿರುವ ಆಂಟೆನಾದಲ್ಲಿ ಎಲ್​ಇಡಿ ಬಲ್ಬ್​ ಇತ್ತು, ಆ ಬಲ್ಬ್​ ಅನ್ನು ಬಾಯಿಗೆ ಹಾಕಿಕೊಂಡಿತ್ತು.

ನಂತರ ಉಸಿರಾಟದ ತೊಂದರೆ ಅನುಭವಿಸಿತು, ಆಗ ಪೋಷಕರು ಮಗುವಿಗೆ ಏನೋ ಆಗಿದೆ ಎಂದು ಭಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಎಕ್ಸ್​ ರೇ ಮಾಡಿದ ಬಳಿಕ, ಮಗು ಎಲ್​ಇಡಿ ಬಲ್ಬ್​ ನುಂಗಿರುವುದು ಗೊತ್ತಾಗಿದೆ, ಶ್ವಾಸಕೋಶದಲ್ಲಿ ಆ ವಸ್ತು ಪತ್ತೆಯಾಗಿತ್ತು. ತಕ್ಷಣ ಮಗುವಿನ ಪೋಷಕರು ತಮ್ಮ ಸ್ನೇಹಿತರಿಗೆ ಮಾಹಿತಿ ನೀಡಿದರು, ತಕ್ಷಣ ಶಸ್ತ್ರ ಚಿಕಿತ್ಸೆ ನಡೆಸಿ ಮಗುವಿನ ಶ್ವಾಸಕೋಶದಿಂದ ಬಲ್ಬ್​ ಅನ್ನು ಹೊರ ತೆಗೆಯಲಾಯಿತು.

ಮತ್ತಷ್ಟು ಓದಿ: 8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆದ ಬೆಂಗಳೂರಿನ ವೈದ್ಯರು

ಬ್ರಾಂಕೋಸ್ಕೋಪ್ ಬಳಸಿ ವಸ್ತುವನ್ನು ಹೊರತೆಗೆಯಲು ಪ್ರಯತ್ನಿಸಿದರು, ಆರಂಭಿಕ ಹಂತದಲ್ಲಿ ಆ ವಸ್ತುವು ಶ್ವಾಸಕೋಶದಲ್ಲಿ ಕಾಣಿಸಿತಾದರೂ ಅನನ್ನು ಸುರಕ್ಷಿತವಾಗಿ ತೆಗೆಯಲು ಸಾಧ್ಯವಾಗಿಲ್ಲ. ನಾಲ್ಕು ದಿನಗಳ ಬಳಿಕ ಎರಡನೇ ಪ್ರಯತ್ನ ನಡೆಸಲಾಯಿತು, ಅಂತಿಮವಾಗಿ ಬಲ್ಬ್ ಹೊರತೆಗೆಯುವುದರಲ್ಲಿ ವೈದ್ಯರು ಯಶಸ್ವಿಯಾದರು.

ಗಣನೀಯ ಊತ ಮತ್ತು ಅತಿಯಾದ ರಕ್ತಸ್ರಾವದಿಂದ ಆರಂಭಿಕ ಪ್ರಯತ್ನ ವಿಫಲವಾಗಿತ್ತು. ಹರ್ಯಾಣದ ನುಹ್​ನಲ್ಲಿ ನಾಲ್ಕು ವರ್ಷದ ಬಾಲಕನಿಗೆ ಈದ್​ಗಾಗಿ ನೀಡಲಾಗಿದ್ದ ಹೊಸ ಶೂನಲ್ಲಿದ್ದ ಸೀಟಿಯನ್ನು ನುಂಗಿ ಸಮಸ್ಯೆ ಂಆಡಿಕೊಂಡಿದ್ದ, ಬಳಿಕ ಶಸ್ತ್ರ ಚಿಕಿತ್ಸೆ ಬಳಿಕ ಸೀಟಿಯನ್ನು ಹೊರಹಾಕಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು