AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

126 ಪ್ರಯಾಣಿಕರೊಂದಿಗೆ ಕಾಬೂಲ್​​ನಿಂದ ಹೊರಟಿದೆ ಏರ್ ಇಂಡಿಯಾ ವಿಮಾನ

Afghanistan: ಇಂದು ಮುಂಜಾನೆ ಕಾಬೂಲ್‌ಗೆ ಒಂದು ಚಾರ್ಟರ್ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಬೂಲ್ ವಾಯುಪ್ರದೇಶದಲ್ಲಿ ಮಿಲಿಟರಿ ಚಟುವಟಿಕೆ ಹೆಚ್ಚಾಗುತ್ತಿದ್ದಂತೆ ನಾಗರಿಕ ವಿಮಾನಗಳನ್ನು ನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ.

126 ಪ್ರಯಾಣಿಕರೊಂದಿಗೆ ಕಾಬೂಲ್​​ನಿಂದ ಹೊರಟಿದೆ ಏರ್ ಇಂಡಿಯಾ ವಿಮಾನ
ಏರ್ ಇಂಡಿಯಾ ವಿಮಾನ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 15, 2021 | 8:05 PM

Share

ದೆಹಲಿ: 126 ಪ್ರಯಾಣಿಕರನ್ನು AI-244 ಏರ್ ಇಂಡಿಯಾದ ವಿಮಾನವು ಭಾನುವಾರ ಕಲಹ ಪೀಡಿತ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಿಂದ ಕರೆದುಕೊಂಡು ಬರುತ್ತಿದೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ. ಈ ವಿಮಾನ ಇಂದು ರಾತ್ರಿ ನವದೆಹಲಿಗೆ ಬರುವ ನಿರೀಕ್ಷೆಯಿದೆ. ತಾಲಿಬಾನ್ ಭಯೋತ್ಪಾದಕರು ಅಫ್ಗಾನ್ ಮೇಲೆ ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ವಾರಕ್ಕೆ ಮೂರು ಬಾರಿ ಕಾಬೂಲ್‌ಗೆ ಸಂಚರಿಸುತ್ತಿದ್ದ ವಿಮಾನಯಾನವು ಅನಿಶ್ಚಿತವಾಗಿದೆ.

ಈ ಮೊದಲು ಇಂದು ಬೆಳಿಗ್ಗೆ ದೆಹಲಿಯಿಂದ ಹೊರಟ ನಂತರ ಏರ್ ಇಂಡಿಯಾ -243 ಕಾಬೂಲ್‌ನಲ್ಲಿ ಒಂದು ಗಂಟೆ ತಡವಾಗಿ ಸುರಕ್ಷಿತವಾಗಿ ಇಳಿಯಿತು ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. 2.2 ಗಂಟೆಗಳ ವಿಮಾನವು ಇಳಿಯಲು ವಿಳಂಬ ಮಾಡಿದೆ. ನಗರದ ಹೊರವಲಯಕ್ಕೆ ತಲುಪಿದರೂ ಕಾಬೂಲ್‌ನ ವಾಯು ಸಂಚಾರ ನಿಯಂತ್ರಣ (ಎಟಿಸಿ) ಸಹಾಯ ಮಾಡಲು ಲಭ್ಯವಿರಲಿಲ್ಲ ಎಂದು ವರದಿ ಹೇಳಿದೆ.

ಇಂದು ಮುಂಜಾನೆ ಕಾಬೂಲ್‌ಗೆ ಒಂದು ಚಾರ್ಟರ್ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಬೂಲ್ ವಾಯುಪ್ರದೇಶದಲ್ಲಿ ಮಿಲಿಟರಿ ಚಟುವಟಿಕೆ ಹೆಚ್ಚಾಗುತ್ತಿದ್ದಂತೆ ನಾಗರಿಕ ವಿಮಾನಗಳನ್ನು ನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ.

ಅಫ್ಗಾನಿಸ್ತಾನದ ವಾಯುಪ್ರದೇಶವನ್ನು ತಪ್ಪಿಸುವ ಸಲಹೆಯ ಕುರಿತು ಎಎನ್ಐ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಭಾರತವು ಭದ್ರತಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನೋಡುತ್ತಿದೆ ಮತ್ತು ಅಫ್ಗಾನಿಸ್ತಾನದ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಆದರೆ ಅಂತಹ ಯಾವುದೇ ಸಲಹೆ ಇಲ್ಲ” ಎಂದು ಹೇಳಿದರು.

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ಪ್ರವೇಶಿಸಿದರು. ಅಮೆರಿಕ ತನ್ನ ರಾಯಭಾರ ಕಚೇರಿಯಿಂದ ರಾಜತಾಂತ್ರಿಕರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಿತು ಮತ್ತು ಸರ್ಕಾರದ ಸಚಿವರು ಅಧಿಕಾರವನ್ನು ಮಧ್ಯಂತರ ಆಡಳಿತಕ್ಕೆ ನೀಡಲಾಗುವುದು ಎಂದು ಹೇಳಿದರು. ಬಂಡುಕೋರರು “ಎಲ್ಲಾ ಕಡೆಯಿಂದ” ನಗರಕ್ಕೆ ಧಾವಿಸುತ್ತಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ ಎಂದು ಹಿರಿಯ ಆಂತರಿಕ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಕಾಬೂಲ್ ನ ಶಾಂತಿಯುತ ಶರಣಾಗತಿಗೆ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಭಯೋತ್ಪಾದಕ ಗುಂಪಿನ ವಕ್ತಾರರು ತಿಳಿಸಿದ್ದಾರೆ.

“ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಎಲ್ಲಾ ಪ್ರವೇಶದ್ವಾರಗಳಲ್ಲಿ ಶಾಂತಿಯುತ ಮತ್ತು ತೃಪ್ತಿದಾಯಕ ಅಧಿಕಾರದ ವರ್ಗಾವಣೆಯನ್ನು ಒಪ್ಪಿಕೊಳ್ಳುವವರೆಗೂ ಕಾಯಬೇಕು” ಎಂದು ಹೇಳಿಕೆಯಲ್ಲಿ ರಾಯಿಟರ್ಸ್ ಹೇಳಿದೆ. ಸೆಪ್ಟೆಂಬರ್ 11 ದಾಳಿಯ ನಂತರ 20 ವರ್ಷಗಳ ಹಿಂದೆ ಅಮೆರಿಕದಿಂದ ಕಾಬೂಲ್‌ನಿಂದ ಹೊರಹಾಕಲ್ಪಟ್ಟ ತಾಲಿಬಾನ್‌ಗಳು ರಾಜಧಾನಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಫ್ಗಾನಿಸ್ತಾನದ ಸೇನಾ ರಕ್ಷಣಾ ವ್ಯವಸ್ಥೆಯು ಕುಸಿದ ಕಾರಣ ಕಳೆದ ತಿಂಗಳು ಅಮೆರಿಕ ನೇತೃತ್ವದ ಪಡೆಗಳು ತಮ್ಮ ಉಳಿದ ಸೈನ್ಯವನ್ನು ಹಿಂತೆಗೆದುಕೊಂಡ ನಂತರ ತಾಲಿಬಾನ್ ಇಲ್ಲಿ ಮೇಲುಗೈ ಸಾಧಿಸಿದೆ.

ಇದನ್ನೂ ಓದಿ: ಒಮ್ಮೆ ರಷ್ಯಾ, ಮತ್ತೊಮ್ಮೆ ಅಮೆರಿಕ: ದ್ರೋಹ-ವಿಶ್ವಾಸಗಳ ವ್ಯಾಖ್ಯಾನವನ್ನೇ ಬದಲಿಸಬಲ್ಲ ತಂತ್ರಗಾರನಿಗೆ ಅಫ್ಗನ್ ಅಧ್ಯಕ್ಷ ಗಾದಿ

ಇದನ್ನೂ ಓದಿ: ‘ದೇಶ ವಿಭಜನೆ ವೇಳೆ ನಾವು ದೂರವಾದೆವು, ಆದರೆ ಪ್ರೀತಿ ನಮ್ಮನ್ನು ಒಂದಾಗಿಸಿತು’: ಇದು ಗಡಿದಾಟಿದ ‘ಅಮರ ಪ್ರೇಮ’

(AI-244 Air India Flight With 126 Passenger Takes Off From capital of strife hit Afghanistan Kabul Sunday)

Published On - 8:05 pm, Sun, 15 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ