ಬೆಂಗಳೂರು: ಹಡಗು ನಿರ್ಮಾಣಕ್ಕೆ AI ಸಹಾಯ, ಒಪ್ಪಂದ ಮಾಡಿಕೊಂಡ ಐಐಎಸ್‌ಸಿ, ಜಿಎಸ್‌ಎಲ್

ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ಹಡಗು ನಿರ್ಮಾಣಕ್ಕೆ ಸಹಾಯ ಮಾಡಲು ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ಎಂಒಯುಗೆ ಸಹಿ ಹಾಕಿದೆ.

ಬೆಂಗಳೂರು: ಹಡಗು ನಿರ್ಮಾಣಕ್ಕೆ AI ಸಹಾಯ, ಒಪ್ಪಂದ ಮಾಡಿಕೊಂಡ ಐಐಎಸ್‌ಸಿ, ಜಿಎಸ್‌ಎಲ್
ಸಾಂದರ್ಭಿಕ ಚಿತ್ರ

Updated on: Aug 04, 2023 | 10:44 AM

ಬೆಂಗಳೂರು, ಆ.4: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮತ್ತು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ (ಜಿಎಸ್‌ಎಲ್) ಸಹಯೋಗದಲ್ಲಿ ಹಡಗು ನಿರ್ಮಾಣಕ್ಕೆ ಸಹಾಯ ಮಾಡಲು ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ಎಂಒಯುಗೆ (Memorandum of understanding) ಸಹಿ ಹಾಕಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಕಾರ, ಈ ಸಹಯೋಗದ ಮೂಲಕ ಹಡಗು ನಿರ್ಮಾಣ ಉದ್ಯಮದಲ್ಲಿ ಬರುವ ಹಲವಾರು ಸವಾಲುಗಳನ್ನು ನಿಭಾಯಿಸಲು ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯು ಈ ತಂತ್ರವನ್ನು ತರುತ್ತಿದೆ. ಜೊತೆಗೆ ಹಡಗು ನಿರ್ಮಾಣದ ಸಮಯವನ್ನು ಕಡಿಮೆ ಮಾಡಲು ಈ ಕಾರ್ಯವನ್ನು ಅನುಸರಿಸಲಾಗಿದೆ ಎಂದು ವರದಿ ಹೇಳಿದೆ. ಇನ್ನು ಈ ಪಾಲುದಾರಿಕೆಯು ಭಾರತದ ಹಡಗು ನಿರ್ಮಾಣದ ಉತ್ಪಾದನಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ ವಿಶೇಷವಾಗಿ ರಕ್ಷಣಾ ವಲಯದಲ್ಲಿ ಇಂತಹ ತಂತ್ರಜ್ಞಾನಗಳ ಬಳಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಫೌಂಡೇಶನ್ ಫಾರ್ ಸೈನ್ಸ್ ಇನ್ನೋವೇಶನ್ ಹಾಗೂ ಡೆವಲಪ್‌ಮೆಂಟ್, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಸೇರಿ, ಶಿಪ್ ಬಿಲ್ಡಿಂಗ್ ಮತ್ತು ಡಿಫೆನ್ಸ್ ಅಪ್ಲಿಕೇಶನ್‌ ಕ್ಷೇತ್ರದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಮತ್ತು ಅನುಷ್ಠಾನಗೊಳಿಸಲು ಜಂಟಿಯಾಗಿ MOU ಗೆ ಸಹಿ ಹಾಕಲಾಗಿದೆ ಎಂದು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್

ರಕ್ಷಣಾ ವಲಯದ ಹಡಗು ನಿರ್ಮಾಣದಲ್ಲಿ AI ಬಳಕೆಯ ಮೂಲಕ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ ಸುರಕ್ಷತೆಯನ್ನು ಕೂಡ ಸುಧಾರಿಸುತ್ತದೆ, ಇದರ ಜತೆಗೆ ನಿರ್ಮಾಣ ಸಮಯವನ್ನು ಕಡಿಮೆ ಮಾಡುವುದು ಮತ್ತು ಹಡಗು ನಿರ್ಮಾಣ ಪ್ರಕ್ರಿಯೆಯನ್ನು ಸುಗಮಗೊಳಿಸಬಹುದು. ಇದೀಗ AI ಸಿಸ್ಟಮ್‌ಗಳನ್ನು ಹಡಗುಗಳಲ್ಲಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಇಂತಹ ತಂತ್ರಜ್ಞಾನಗಳನ್ನು ಬಳಸಿಕೊಂಡು ಅತಿ ವೇಗವಾಗಿ ಕೆಲಸ ಮಾಡುವ ಸಾಹಯವಾಗಬಹುದು ಎಂದು ವರದಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Fri, 4 August 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us