Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭಾಷಣದಲ್ಲಿ ಮೊಟ್ಟ ಮೊದಲ ಭಾರಿಗೆ ಎಐ ಆಧಾರಿತ ಅನುವಾದ ಸಾಧನ ಬಳಕೆ

ವಾರಣಾಸಿಯ ನಮೋ ಘಾಟ್‌ನಲ್ಲಿ ಕನ್ಯಾಕುಮಾರಿ ಮತ್ತು ವಾರಣಾಸಿ ಮಧ್ಯೆ ಸಂಚರಿಸಲಿರು ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ವೇಳೆ ಕೃತಕ ಬುದ್ಧಿಮತ್ತೆ (ಎಐ) ಸಾಧನವನ್ನು ಬಳಕೆ ಮಾಡುವ ಮೂಲಕ ತಮ್ಮ ಭಾಷಣವನ್ನು ನೈಜ-ಸಮಯದಲ್ಲಿ ತಮಿಳು ಭಾಷೆಗೆ ಅನುವಾದ ಮಾಡಲಾಗಿದೆ.

ಪ್ರಧಾನಿ ಮೋದಿ ಭಾಷಣದಲ್ಲಿ ಮೊಟ್ಟ ಮೊದಲ ಭಾರಿಗೆ ಎಐ ಆಧಾರಿತ ಅನುವಾದ ಸಾಧನ ಬಳಕೆ
ಪ್ರಧಾನಿ ಮೋದಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Dec 17, 2023 | 9:59 PM

ವಾರಣಾಸಿ, ಡಿಸೆಂಬರ್​ 17: ವಾರಣಾಸಿಯ ನಮೋ ಘಾಟ್‌ನಲ್ಲಿ ಕನ್ಯಾಕುಮಾರಿ ಮತ್ತು ವಾರಣಾಸಿ ಮಧ್ಯೆ ಸಂಚರಿಸಲಿರು ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ್ದಾರೆ. ಇದು ಕಾಶಿ ತಮಿಳು ಸಂಗಮಂನ ಎರಡನೇ ಆವೃತ್ತಿಯಾಗಿದೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಹೊಸ ಪ್ರಯೋಗವನ್ನು ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಸಾಧನವನ್ನು ಬಳಕೆ ಮಾಡುವ ಮೂಲಕ ತಮ್ಮ ಭಾಷಣವನ್ನು ನೈಜ-ಸಮಯದಲ್ಲಿ ತಮಿಳು ಭಾಷೆಗೆ ಅನುವಾದ ಮಾಡಲಾಗಿದೆ.

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಹಿಂದಿಯಲ್ಲಿ ಮಾತನಾಡಿದ್ದು, ‘ಭಾಷಿಣಿ’ ಮೂಲಕ ಮಾಡಿದ ಭಾಷಣದ  ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಆಧಾರಿತ ತಮಿಳು ಅನುವಾದವನ್ನು ಕೇಳುವಂತೆ ಪ್ರಧಾನಿ ಮೋದಿ ಸಭಿಕರಲ್ಲಿ ಉಲ್ಲೇಖಿಸಿದ್ದಾರೆ.

ಕೃತಕ ಬುದ್ಧಿಮತ್ತೆಯ ಮೂಲಕ ಇಲ್ಲಿ ಹೊಸ ತಂತ್ರಜ್ಞಾನದ ಬಳಕೆ ನಡೆದಿದೆ. ಕೃತಕ ಬುದ್ಧಿಮತ್ತೆ ಇದು ಹೊಸ ಆರಂಭಕವಾಗಿದ್ದು, ಆಶಾದಾಯಕವಾಗಿದೆ. ನಾನು ನಿಮ್ಮನ್ನು ತಲುಪಲು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

ಭಾಷಿಣಿ ಎಂದರೇನು?

‘ಭಾಷಿಣಿ’ ಎಂಬುದು ಎಐ ಆಧಾರಿತ ಭಾಷಾಂತರ ವ್ಯವಸ್ಥೆಯಾಗಿದ್ದು, ಇತರೆ ಭಾರತೀಯ ಭಾಷೆಗಳನ್ನು ಮಾತನಾಡುವವರೊಂದಿಗೆ ಮಾತನಾಡುವಾಗ ಜನರು ತಮ್ಮ ಸ್ವಂತ ಭಾಷೆಯಲ್ಲಿ ಕೇಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ; ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ

ಭಾರತೀಯ ಭಾಷೆಗಳಲ್ಲಿ ಅನುಕೂಲಕರವಾದ ಇಂಟರ್ನೆಟ್ ಮತ್ತು ಡಿಜಿಟಲ್ ಸೇವಾ ಪ್ರವೇಶವನ್ನು ಸುಲಭಗೊಳಿಸುವುದು, ಧ್ವನಿ ಆಧಾರಿತ ಪ್ರವೇಶವನ್ನು ಸಂಯೋಜಿಸುವುದು ಮತ್ತು ಈ ಭಾಷೆಗಳಲ್ಲಿ ವಿಷಯದ ಉತ್ಪಾದನೆಯನ್ನು ಉತ್ತೇಜಿಸುವುದು ಇದರ ಮುಖ್ಯ ಗುರಿಯಾಗಿದೆ.

ಇದನ್ನೂ ಓದಿ: Modi and Ambulance: ವಾರಾಣಸಿಯಲ್ಲಿ ರೋಡ್​ಶೋ ವೇಳೆ ಮೆರವಣಿಗೆ ವಾಹನ ನಿಲ್ಲಿಸಿ ಆ್ಯಂಬುಲೆನ್ಸ್​ಗೆ ದಾರಿ ಕೊಟ್ಟ ಪ್ರಧಾನಿ ಮೋದಿ

ಈ ಆನ್‌ಲೈನ್ ಪ್ಲಾಟ್‌ಫಾರ್ಮ್ ಪ್ರತ್ಯೇಕ ‘ಭಾಸದಾನ್’ ವಿಭಾಗವನ್ನು ಸಹ ಹೊಂದಿದೆ. ಇದು ವ್ಯಕ್ತಿಗಳು ಬಹು ಕ್ರೌಡ್‌ಸೋರ್ಸಿಂಗ್ ಉಪಕ್ರಮಗಳಿಗೆ ಕೊಡುಗೆ ನೀಡಲು ಅನುವು ಮಾಡಿಕೊಡುತ್ತದೆ ಮತ್ತು ಇದನ್ನು ಆಯಾ ಆಂಡ್ರಾಯ್ಡ್  ಮತ್ತು ಐಓಎಸ್​ ಅಪ್ಲಿಕೇಶನ್‌ಗಳಲ್ಲಿ ಸಹ ಬಳಕೆ ಮಾಡಬಹುದಾಗಿದೆ.

ಏಕ ಭಾರತ, ಶ್ರೇಷ್ಠ ಭಾರತಕ್ಕೆ ಬಲ

ಕನ್ಯಾಕುಮಾರಿ ಮತ್ತು ವಾರಣಾಸಿ ಮಧ್ಯೆ ಸಂಚರಿಸಲಿರು ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ಗೆ ಚಾಲನೆ ನೀಡಿದ ಬಳಿಕ ತಿರುಕ್ಕುರಲ್, ಮಣಿಮೇಕಲೈ ಮತ್ತು ಇತರೆ ಶ್ರೇಷ್ಠ ತಮಿಳು ಸಾಹಿತ್ಯದ ಬಹು ಭಾಷೆ ಮತ್ತು ಬ್ರೈಲ್ ಅನುವಾದಗಳನ್ನು ಬಿಡುಗಡೆ ಮಾಡಿದ್ದಾರೆ.

ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ ಭಾರತದ ಪರಂಪರೆಯನ್ನು ಸಶಕ್ತಗೊಳಿಸುತ್ತದೆ. ಏಕ ಭಾರತ, ಶ್ರೇಷ್ಠ ಭಾರತವನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ರಾಜ್ಯ ಸಚಿವರುಗಳಾದ ಡಾ. ಎಲ್ ಮುರುಗನ್ ಇತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:57 pm, Sun, 17 December 23

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!