AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ

2021ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಸೂಚನೆ ದಟ್ಟವಾಗುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಬದಲಾವಣೆಗಳಾಗುವ ಸಂಭವ ದಿನೇ ದಿನೇ ಹೆಚ್ಚುತ್ತಿದೆ.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ
ತಮಿಳುನಾಡು ಉಪ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ (ಎಡ) ಮುಖ್ಯಮಂತ್ರಿ ಕೆ.ಪಳನಿಸ್ವಾಮಿ (ಬಲ)
guruganesh bhat
|

Updated on:Dec 28, 2020 | 1:20 PM

Share

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾವು ಪಡೆಯತೊಡಗಿದೆ. ಸದ್ಯದ ಆಡಳಿತಾರೂಢ ಎಐಎಡಿಎಂಕೆ ಬಿಜೆಪಿ ಜೊತೆಗಿನ ಸಖ್ಯದಿಂದ ಕೊಂಚ ದೂರ ಜಾರತೊಡಗಿದೆ. ಸಾರ್ವಜನಿಕ ಪ್ರಚಾರ ಸಭೆಯೊಂದರಲ್ಲಿ ಎಐಎಡಿಎಂಕೆಯ ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಎಐಎಡಿಎಂಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಕೆ. ಪಳನಿಸ್ವಾಮಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ. ಅಲ್ಲದೇ ಇತರ ಯಾವ ಪಕ್ಷದ ಜೊತೆಗೂ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದು ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿದ್ದಾರೆ. ಎಐಎಡಿಎಂಕೆಗೆ ಇತರ ಪಕ್ಷಗಳ ಜೊತೆ ಮೈತ್ರಿಯ ಅವಶ್ಯಕತೆಯಿಲ್ಲ. ಮೈತ್ರಿ ಮಾಡಿಕೊಂಡರೂ ತಮ್ಮ ಪಕ್ಷವೇ ನಾಯಕತ್ವ ವಹಿಸಲಿದೆ ಎಂಬುದಾಗಿ ಸಂಸದ ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ.

ಪೆರಿಯಾರ್ ಚಿಂತನೆಗಳಿಂದ ಹುಟ್ಟಿಕೊಂಡ ತಮಿಳುನಾಡು ರಾಜಕೀಯ ಚಿಂತನೆಗಳು ಭಾರತದ ಇತರ ರಾಜಕೀಯ ಯೋಚನೆಗಳಿಗಿಂತ ಭಿನ್ನವಾಗಿದೆ. ರಾಷ್ಟ್ರ ಮಟ್ಟದ ರಾಜಕಾರಣಿಗಳು ರಾಜ್ಯಗಳ ರಾಜಕೀಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಮಿಳುನಾಡುನ ವಿಧಾನಸಭಾ ಚುನಾವಣೆ ಸುಳ್ಳು ಮಾಡಲಿದೆ ಎಂದು ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿಕೆಗೆ ಬಿಜೆಪಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಎಐಎಡಿಎಂಕೆ ಪಕ್ಷವೇ ಮೈತ್ರಿಕೂಟದ ಮುಂಚೂಣಿ ನಾಯಕ ಎಂಬುದನ್ನು ಬಿಜೆಪಿ ಈಗಾಗಲೇ ಒಪ್ಪಿಕೊಂಡಿದೆ. 2021ರ ಮೇವರೆಗೆ ತಮಿಳುನಾಡು ರಾಜಕೀಯದಲ್ಲಿ ಏನೆಲ್ಲ ಬದಲಾವಣೆಗಳು ಘಟಿಸಲಿವೆ ಎಂಬುದನ್ನು ಕಾದುನೋಡಬೇಕಿದೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 1:16 pm, Mon, 28 December 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ