AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ

2021ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಸೂಚನೆ ದಟ್ಟವಾಗುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಬದಲಾವಣೆಗಳಾಗುವ ಸಂಭವ ದಿನೇ ದಿನೇ ಹೆಚ್ಚುತ್ತಿದೆ.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ
ತಮಿಳುನಾಡು ಉಪ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ (ಎಡ) ಮುಖ್ಯಮಂತ್ರಿ ಕೆ.ಪಳನಿಸ್ವಾಮಿ (ಬಲ)
guruganesh bhat
|

Updated on:Dec 28, 2020 | 1:20 PM

Share

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾವು ಪಡೆಯತೊಡಗಿದೆ. ಸದ್ಯದ ಆಡಳಿತಾರೂಢ ಎಐಎಡಿಎಂಕೆ ಬಿಜೆಪಿ ಜೊತೆಗಿನ ಸಖ್ಯದಿಂದ ಕೊಂಚ ದೂರ ಜಾರತೊಡಗಿದೆ. ಸಾರ್ವಜನಿಕ ಪ್ರಚಾರ ಸಭೆಯೊಂದರಲ್ಲಿ ಎಐಎಡಿಎಂಕೆಯ ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಎಐಎಡಿಎಂಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಕೆ. ಪಳನಿಸ್ವಾಮಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ. ಅಲ್ಲದೇ ಇತರ ಯಾವ ಪಕ್ಷದ ಜೊತೆಗೂ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದು ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿದ್ದಾರೆ. ಎಐಎಡಿಎಂಕೆಗೆ ಇತರ ಪಕ್ಷಗಳ ಜೊತೆ ಮೈತ್ರಿಯ ಅವಶ್ಯಕತೆಯಿಲ್ಲ. ಮೈತ್ರಿ ಮಾಡಿಕೊಂಡರೂ ತಮ್ಮ ಪಕ್ಷವೇ ನಾಯಕತ್ವ ವಹಿಸಲಿದೆ ಎಂಬುದಾಗಿ ಸಂಸದ ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ.

ಪೆರಿಯಾರ್ ಚಿಂತನೆಗಳಿಂದ ಹುಟ್ಟಿಕೊಂಡ ತಮಿಳುನಾಡು ರಾಜಕೀಯ ಚಿಂತನೆಗಳು ಭಾರತದ ಇತರ ರಾಜಕೀಯ ಯೋಚನೆಗಳಿಗಿಂತ ಭಿನ್ನವಾಗಿದೆ. ರಾಷ್ಟ್ರ ಮಟ್ಟದ ರಾಜಕಾರಣಿಗಳು ರಾಜ್ಯಗಳ ರಾಜಕೀಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಮಿಳುನಾಡುನ ವಿಧಾನಸಭಾ ಚುನಾವಣೆ ಸುಳ್ಳು ಮಾಡಲಿದೆ ಎಂದು ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿಕೆಗೆ ಬಿಜೆಪಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಎಐಎಡಿಎಂಕೆ ಪಕ್ಷವೇ ಮೈತ್ರಿಕೂಟದ ಮುಂಚೂಣಿ ನಾಯಕ ಎಂಬುದನ್ನು ಬಿಜೆಪಿ ಈಗಾಗಲೇ ಒಪ್ಪಿಕೊಂಡಿದೆ. 2021ರ ಮೇವರೆಗೆ ತಮಿಳುನಾಡು ರಾಜಕೀಯದಲ್ಲಿ ಏನೆಲ್ಲ ಬದಲಾವಣೆಗಳು ಘಟಿಸಲಿವೆ ಎಂಬುದನ್ನು ಕಾದುನೋಡಬೇಕಿದೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 1:16 pm, Mon, 28 December 20

Follow Us
guruganesh bhat
guruganesh bhat
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​