Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ

2021ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಸೂಚನೆ ದಟ್ಟವಾಗುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಬದಲಾವಣೆಗಳಾಗುವ ಸಂಭವ ದಿನೇ ದಿನೇ ಹೆಚ್ಚುತ್ತಿದೆ.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ
ತಮಿಳುನಾಡು ಉಪ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ (ಎಡ) ಮುಖ್ಯಮಂತ್ರಿ ಕೆ.ಪಳನಿಸ್ವಾಮಿ (ಬಲ)
Follow us
guruganesh bhat
|

Updated on:Dec 28, 2020 | 1:20 PM

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾವು ಪಡೆಯತೊಡಗಿದೆ. ಸದ್ಯದ ಆಡಳಿತಾರೂಢ ಎಐಎಡಿಎಂಕೆ ಬಿಜೆಪಿ ಜೊತೆಗಿನ ಸಖ್ಯದಿಂದ ಕೊಂಚ ದೂರ ಜಾರತೊಡಗಿದೆ. ಸಾರ್ವಜನಿಕ ಪ್ರಚಾರ ಸಭೆಯೊಂದರಲ್ಲಿ ಎಐಎಡಿಎಂಕೆಯ ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಎಐಎಡಿಎಂಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಕೆ. ಪಳನಿಸ್ವಾಮಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ. ಅಲ್ಲದೇ ಇತರ ಯಾವ ಪಕ್ಷದ ಜೊತೆಗೂ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದು ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿದ್ದಾರೆ. ಎಐಎಡಿಎಂಕೆಗೆ ಇತರ ಪಕ್ಷಗಳ ಜೊತೆ ಮೈತ್ರಿಯ ಅವಶ್ಯಕತೆಯಿಲ್ಲ. ಮೈತ್ರಿ ಮಾಡಿಕೊಂಡರೂ ತಮ್ಮ ಪಕ್ಷವೇ ನಾಯಕತ್ವ ವಹಿಸಲಿದೆ ಎಂಬುದಾಗಿ ಸಂಸದ ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ.

ಪೆರಿಯಾರ್ ಚಿಂತನೆಗಳಿಂದ ಹುಟ್ಟಿಕೊಂಡ ತಮಿಳುನಾಡು ರಾಜಕೀಯ ಚಿಂತನೆಗಳು ಭಾರತದ ಇತರ ರಾಜಕೀಯ ಯೋಚನೆಗಳಿಗಿಂತ ಭಿನ್ನವಾಗಿದೆ. ರಾಷ್ಟ್ರ ಮಟ್ಟದ ರಾಜಕಾರಣಿಗಳು ರಾಜ್ಯಗಳ ರಾಜಕೀಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಮಿಳುನಾಡುನ ವಿಧಾನಸಭಾ ಚುನಾವಣೆ ಸುಳ್ಳು ಮಾಡಲಿದೆ ಎಂದು ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿಕೆಗೆ ಬಿಜೆಪಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಎಐಎಡಿಎಂಕೆ ಪಕ್ಷವೇ ಮೈತ್ರಿಕೂಟದ ಮುಂಚೂಣಿ ನಾಯಕ ಎಂಬುದನ್ನು ಬಿಜೆಪಿ ಈಗಾಗಲೇ ಒಪ್ಪಿಕೊಂಡಿದೆ. 2021ರ ಮೇವರೆಗೆ ತಮಿಳುನಾಡು ರಾಜಕೀಯದಲ್ಲಿ ಏನೆಲ್ಲ ಬದಲಾವಣೆಗಳು ಘಟಿಸಲಿವೆ ಎಂಬುದನ್ನು ಕಾದುನೋಡಬೇಕಿದೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 1:16 pm, Mon, 28 December 20

‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್