AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ

2021ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಸೂಚನೆ ದಟ್ಟವಾಗುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಬದಲಾವಣೆಗಳಾಗುವ ಸಂಭವ ದಿನೇ ದಿನೇ ಹೆಚ್ಚುತ್ತಿದೆ.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ
ತಮಿಳುನಾಡು ಉಪ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ (ಎಡ) ಮುಖ್ಯಮಂತ್ರಿ ಕೆ.ಪಳನಿಸ್ವಾಮಿ (ಬಲ)
guruganesh bhat
|

Updated on:Dec 28, 2020 | 1:20 PM

Share

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾವು ಪಡೆಯತೊಡಗಿದೆ. ಸದ್ಯದ ಆಡಳಿತಾರೂಢ ಎಐಎಡಿಎಂಕೆ ಬಿಜೆಪಿ ಜೊತೆಗಿನ ಸಖ್ಯದಿಂದ ಕೊಂಚ ದೂರ ಜಾರತೊಡಗಿದೆ. ಸಾರ್ವಜನಿಕ ಪ್ರಚಾರ ಸಭೆಯೊಂದರಲ್ಲಿ ಎಐಎಡಿಎಂಕೆಯ ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಎಐಎಡಿಎಂಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಕೆ. ಪಳನಿಸ್ವಾಮಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ. ಅಲ್ಲದೇ ಇತರ ಯಾವ ಪಕ್ಷದ ಜೊತೆಗೂ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದು ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿದ್ದಾರೆ. ಎಐಎಡಿಎಂಕೆಗೆ ಇತರ ಪಕ್ಷಗಳ ಜೊತೆ ಮೈತ್ರಿಯ ಅವಶ್ಯಕತೆಯಿಲ್ಲ. ಮೈತ್ರಿ ಮಾಡಿಕೊಂಡರೂ ತಮ್ಮ ಪಕ್ಷವೇ ನಾಯಕತ್ವ ವಹಿಸಲಿದೆ ಎಂಬುದಾಗಿ ಸಂಸದ ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ.

ಪೆರಿಯಾರ್ ಚಿಂತನೆಗಳಿಂದ ಹುಟ್ಟಿಕೊಂಡ ತಮಿಳುನಾಡು ರಾಜಕೀಯ ಚಿಂತನೆಗಳು ಭಾರತದ ಇತರ ರಾಜಕೀಯ ಯೋಚನೆಗಳಿಗಿಂತ ಭಿನ್ನವಾಗಿದೆ. ರಾಷ್ಟ್ರ ಮಟ್ಟದ ರಾಜಕಾರಣಿಗಳು ರಾಜ್ಯಗಳ ರಾಜಕೀಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಮಿಳುನಾಡುನ ವಿಧಾನಸಭಾ ಚುನಾವಣೆ ಸುಳ್ಳು ಮಾಡಲಿದೆ ಎಂದು ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿಕೆಗೆ ಬಿಜೆಪಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಎಐಎಡಿಎಂಕೆ ಪಕ್ಷವೇ ಮೈತ್ರಿಕೂಟದ ಮುಂಚೂಣಿ ನಾಯಕ ಎಂಬುದನ್ನು ಬಿಜೆಪಿ ಈಗಾಗಲೇ ಒಪ್ಪಿಕೊಂಡಿದೆ. 2021ರ ಮೇವರೆಗೆ ತಮಿಳುನಾಡು ರಾಜಕೀಯದಲ್ಲಿ ಏನೆಲ್ಲ ಬದಲಾವಣೆಗಳು ಘಟಿಸಲಿವೆ ಎಂಬುದನ್ನು ಕಾದುನೋಡಬೇಕಿದೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 1:16 pm, Mon, 28 December 20

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!