Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿರುದ್ಧ ಟೀಕೆ ಮಾಡಿದ ಮುಸ್ಲಿಂ ನಾಯಕ ಎ ಅನ್ವರ್ ರಾಜಾರನ್ನು ಪಕ್ಷದಿಂದ ಹೊರಹಾಕಿದ ಎಐಎಡಿಎಂಕೆ

A Anwhar Raajhaa 2014-19ರಲ್ಲಿ ಲೋಕಸಭೆಗೆ ರಾಮನಾಥಪುರವನ್ನು ಪ್ರತಿನಿಧಿಸಿದ್ದ ರಾಜಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಲಾಗಿದೆ.

ಬಿಜೆಪಿ ವಿರುದ್ಧ ಟೀಕೆ ಮಾಡಿದ ಮುಸ್ಲಿಂ ನಾಯಕ ಎ ಅನ್ವರ್ ರಾಜಾರನ್ನು ಪಕ್ಷದಿಂದ ಹೊರಹಾಕಿದ ಎಐಎಡಿಎಂಕೆ
ಎ. ಅನ್ವರ್ ರಾಜಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 01, 2021 | 6:37 PM

ಚೆನ್ನೈ: ಎಐಎಡಿಎಂಕೆ (AIADMK) ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಮತ್ತು ಮಾಜಿ ಕಾರ್ಮಿಕ ಸಚಿವ ಎ. ಅನ್ವರ್ ರಾಜಾ (Anwhar Raajhaa) ಅವರನ್ನು ಮಂಗಳವಾರ ರಾತ್ರಿ ಪಕ್ಷದಿಂದ ಹೊರಹಾಕಿದೆ. “ಪಕ್ಷ ವಿರೋಧಿ ಚಟುವಟಿಕೆ” ಆರೋಪ ಅನ್ವರ್ ಅವರ ಮೇಲಿದೆ. 2014-19ರಲ್ಲಿ ಲೋಕಸಭೆಗೆ ರಾಮನಾಥಪುರವನ್ನು ಪ್ರತಿನಿಧಿಸಿದ್ದ ರಾಜಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಲಾಗಿದೆ ಎಂದು ಪಕ್ಷದ ಸಂಯೋಜಕ ಒ.ಪನ್ನೀರಸೆಲ್ವಂ (O. Panneerselvam) ಮತ್ತು ಸಹ ಸಂಯೋಜಕ ಎಡಪ್ಪಾಡಿ ಕೆ.ಪಳನಿಸ್ವಾಮಿ (Edappadi K. Palaniswami) ಪ್ರಕಟಣೆಯಲ್ಲಿ ಹೇಳಿದ್ದಾರೆ.  ಹೇಳಿಕೆಯಲ್ಲಿ ಉಲ್ಲೇಖಿಸಲಾದ ಕಾರಣಗಳಲ್ಲಿ ಮಾಜಿ ಸಂಸದರು ನಾಯಕತ್ವದ “ನಿರ್ಧಾರಕ್ಕೆ ವಿರುದ್ಧವಾಗಿ” ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರಾದ ರಾಜಾ, ಎಐಎಡಿಎಂಕೆಯ ಪ್ರಮುಖ ಮಿತ್ರ ಪಕ್ಷವಾದ ಬಿಜೆಪಿಯ ಟೀಕಾಕಾರರಾಗಿ ಹೆಸರುವಾಸಿಯಾಗಿದ್ದರು. 2018 ರಲ್ಲಿ,ಅವರು ತ್ರಿವಳಿ ತಲಾಖ್ ಶಾಸನದ ಬಗ್ಗೆ ಬಹಿರಂಗವಾಗಿ ದನಿ ಎತ್ತಿದರು ಮತ್ತು ಲೋಕಸಭೆಯು ಮಸೂದೆಯನ್ನು ಅಂಗೀಕರಿಸುವ ಸಮಯದಲ್ಲಿ ವಾಕ್ ಔಟ್ ಮಾಡುವ ಅವರ ಪಕ್ಷದ ನಿರ್ಧಾರಕ್ಕೆ ಅವರು ಜವಾಬ್ದಾರರಾಗಿದ್ದರು. ಅವರು ಪಕ್ಷದ ಮಾಜಿ ಹಂಗಾಮಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಮರಳಿ ಸೇರಿಸಲು ಸಾರ್ವಜನಿಕವಾಗಿ ಒತ್ತಾಯಿಸುತ್ತಿದ್ದಾರೆ. ಅಕ್ಟೋಬರ್ ಅಂತ್ಯದಲ್ಲಿ ಅವರು ಈ ವಿಷಯದ ಬಗ್ಗೆ ಚರ್ಚೆಗೆ ಕರೆದಿದ್ದ ಪನ್ನೀರಸೆಲ್ವಂ ಅವರ ಬೆಂಬಲಕ್ಕೆ ಬಂದರು.

ಭಾನುವಾರ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ, ಶಶಿಕಲಾ ಇನ್ನು ಮುಂದೆ ಹೊಣೆಗಾರಿಕೆಯ ಅಂಶವಲ್ಲ ಎಂದು ಹೇಳಿದ್ದರು. ಪಳನಿಸ್ವಾಮಿಯವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ನಂತರ ಅವರು ಇತ್ತೀಚೆಗೆ ವಿವಾದಕ್ಕೊಳಗಾಗಿದ್ದರು.

ಕಳೆದ ವಾರ ಜಿಲ್ಲಾ ಘಟಕಗಳ ಹಿರಿಯ ಪದಾಧಿಕಾರಿಗಳು ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ ಈ ವಿಷಯ ಬಂದಾಗ ಮತ್ತು ಕೆಲವು ಭಾಗವಹಿಸುವವರು ಅವರನ್ನು ತೀವ್ರವಾಗಿ ಟೀಕಿಸಿದಾಗ, ಅವರು ಎಐಎಡಿಎಂಕೆ ಸಹ-ಸಂಯೋಜಕರಲ್ಲಿ ಕ್ಷಮೆಯಾಚಿಸಿದರು. 2019 ರ ಲೋಕಸಭೆ ಮತ್ತು 2021 ರ ಅಸೆಂಬ್ಲಿ ಚುನಾವಣೆಗಳಲ್ಲಿ ರಾಜಾ ಅವರಿಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಿರಲಿಲ್ಲ.

ಇದನ್ನೂ ಓದಿ: Elgar Parishad case ಎಲ್ಗಾರ್ ಪರಿಷತ್ ಪ್ರಕರಣ: ಸುಧಾ ಭಾರದ್ವಾಜ್​​ಗೆ ಜಾಮೀನು; ಎಂಟು ಸಹ ಆರೋಪಿಗಳಿಗೆ ಜಾಮೀನು ನಿರಾಕರಣೆ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ