AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ V K Sasikala: ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು
ವಿ.ಕೆ.ಶಶಿಕಲಾ
TV9 Web
| Updated By: Lakshmi Hegde|

Updated on: Dec 19, 2021 | 9:17 PM

Share

ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ (VK Sasikala) ಅವರು ಎಐಎಡಿಎಂಕೆ (AIADMK) ಯಿಂದ ಉಚ್ಚಾಟನೆಗೊಂಡಿದ್ದರೂ, ಅವರಿನ್ನೂ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯೆಂದೇ ತಮ್ಮನ್ನು ತಾವು ಹೇಳಿಕೊಂಡಿದ್ದಾರೆ. ಪಕ್ಷದ ಟ್ಯಾಗ್​ನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಪಕ್ಷ ಮಾಜಿ ಸಚಿವ ಜಯಕುಮಾರ್​ ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಶಶಿಕಲಾ ಎಐಎಡಿಎಂಕೆಯಲ್ಲಿ ಇಲ್ಲ. ಪಕ್ಷದಲ್ಲಿ ಅವರಿಗೆ ಯಾವುದೇ ಹುದ್ದೆಯೂ ಇಲ್ಲ ಎಂದು ಎಐಎಡಿಎಂಕೆ ಜಂಟಿ ಸಂಯೋಜಕ ಕೆ.ಪಳನಿಸ್ವಾಮಿ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಕೂಡ ಶಶಿಕಲಾ ತಮ್ಮ ಪತ್ರಿಕಾ ಪ್ರಕಟಣೆ, ಇನ್ನಿತರ ಸ್ಟೇಟ್​ಮೆಂಟ್​​ಗಳನ್ನು ಬಿಡುಗಡೆ ಮಾಡುವಾಗ ಎಐಎಡಿಎಂಕೆ ಪ್ರಧಾನಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ಸಂಸ್ಥಾಪಕ ಎಂ.ಜಿ ರಾಮಚಂದ್ರನ್​ ಅವರ ಸ್ಮಾರಕ ಮನೆಯಲ್ಲಿ ಇದೇ ಟ್ಯಾಗ್​​ನಲ್ಲಿ ಒಂದು ಫಲಕವನ್ನೂ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಜಯಕುಮಾರ್​ ಅವರು ಇದೀಗ ನಗರ ಪೊಲೀಸ್ ಆಯುಕ್ತ ಶಂಕರ್​ ಜೈವಾಲ್​ ಅವರಿಗೆ ನೇರವಾಗಿ ದೂರು ನೀಡಿದ್ದಾರೆ. ಶಶಿಕಲಾ ವಿರುದ್ಧ ಎಫ್​ಐಆರ್​ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಮಹಾಬಲಂ ಪೊಲೀಸ್​ ಠಾಣೆ ಅಧಿಕಾರಿಗೆ ಸೂಚಿಸಿ ಎಂದು ಆಯುಕ್ತರ ಬಳಿ ಮನವಿ ಮಾಡಿದ್ದಾರೆ. ಡಿಸೆಂಬರ್​ 24ರಂದು ಎಂಜಿಆರ್​ ಪುಣ್ಯತಿಥಿ ನಿಮಿತ್ತ ಅವರ ಸ್ಮಾರಕ ಮನೆಗೆ ಶಶಿಕಲಾ ಭೇಟಿಯಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೇ ಜಯಕುಮಾರ್ ಇಂಥದ್ದೊಂದು ದೂರು ನೀಡಿದ್ದಾರೆ.

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ. ತಾವು ಇನ್ನೂ ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಶಶಿಕಲಾ ಚೆನ್ನೈನ ಟಿ.ನಗರದಲ್ಲಿರುವ ಎಂಜಿಆರ್ ಸ್ಮಾರಕದ ಬಳಿ ಎಐಎಡಿಎಂಕೆ ಪಕ್ಷದ ಧ್ವಜ ಹಾರಿಸಿದ್ದರು. ಆಗಲೂ ಸಹ ಮಾಜಿ ಸಚಿವ  ಜಯಕುಮಾರ್​ ಖಡಕ್​ ವಾರ್ನಿಂಗ್​ ಕೊಟ್ಟಿದ್ದರು. ನಿಮಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದ ಮೇಲೆ ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ ಎಂದಿದ್ದರು.

ಇದನ್ನೂ ಓದಿ: ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

ಯುವಕರು ಸಾಯುತ್ತಿದ್ದರೂ ರಾಜಣ್ಣ ಹಾಸನಕ್ಕೆ ಹೋಗಿಲ್ಲ: ವಿಜಯೇಂದ್ರ
ಯುವಕರು ಸಾಯುತ್ತಿದ್ದರೂ ರಾಜಣ್ಣ ಹಾಸನಕ್ಕೆ ಹೋಗಿಲ್ಲ: ವಿಜಯೇಂದ್ರ
ಜಲಾಶಯದ ಸುತ್ತಮುತ್ತ ಪೊಲೀಸರನ್ನು ನಿಯೋಜಿಸದಿರೋದು ತಪ್ಪು
ಜಲಾಶಯದ ಸುತ್ತಮುತ್ತ ಪೊಲೀಸರನ್ನು ನಿಯೋಜಿಸದಿರೋದು ತಪ್ಪು
ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್
ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ