AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ V K Sasikala: ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು
ವಿ.ಕೆ.ಶಶಿಕಲಾ
Follow us
TV9 Web
| Updated By: Lakshmi Hegde

Updated on: Dec 19, 2021 | 9:17 PM

ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ (VK Sasikala) ಅವರು ಎಐಎಡಿಎಂಕೆ (AIADMK) ಯಿಂದ ಉಚ್ಚಾಟನೆಗೊಂಡಿದ್ದರೂ, ಅವರಿನ್ನೂ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯೆಂದೇ ತಮ್ಮನ್ನು ತಾವು ಹೇಳಿಕೊಂಡಿದ್ದಾರೆ. ಪಕ್ಷದ ಟ್ಯಾಗ್​ನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಪಕ್ಷ ಮಾಜಿ ಸಚಿವ ಜಯಕುಮಾರ್​ ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಶಶಿಕಲಾ ಎಐಎಡಿಎಂಕೆಯಲ್ಲಿ ಇಲ್ಲ. ಪಕ್ಷದಲ್ಲಿ ಅವರಿಗೆ ಯಾವುದೇ ಹುದ್ದೆಯೂ ಇಲ್ಲ ಎಂದು ಎಐಎಡಿಎಂಕೆ ಜಂಟಿ ಸಂಯೋಜಕ ಕೆ.ಪಳನಿಸ್ವಾಮಿ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಕೂಡ ಶಶಿಕಲಾ ತಮ್ಮ ಪತ್ರಿಕಾ ಪ್ರಕಟಣೆ, ಇನ್ನಿತರ ಸ್ಟೇಟ್​ಮೆಂಟ್​​ಗಳನ್ನು ಬಿಡುಗಡೆ ಮಾಡುವಾಗ ಎಐಎಡಿಎಂಕೆ ಪ್ರಧಾನಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ಸಂಸ್ಥಾಪಕ ಎಂ.ಜಿ ರಾಮಚಂದ್ರನ್​ ಅವರ ಸ್ಮಾರಕ ಮನೆಯಲ್ಲಿ ಇದೇ ಟ್ಯಾಗ್​​ನಲ್ಲಿ ಒಂದು ಫಲಕವನ್ನೂ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಜಯಕುಮಾರ್​ ಅವರು ಇದೀಗ ನಗರ ಪೊಲೀಸ್ ಆಯುಕ್ತ ಶಂಕರ್​ ಜೈವಾಲ್​ ಅವರಿಗೆ ನೇರವಾಗಿ ದೂರು ನೀಡಿದ್ದಾರೆ. ಶಶಿಕಲಾ ವಿರುದ್ಧ ಎಫ್​ಐಆರ್​ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಮಹಾಬಲಂ ಪೊಲೀಸ್​ ಠಾಣೆ ಅಧಿಕಾರಿಗೆ ಸೂಚಿಸಿ ಎಂದು ಆಯುಕ್ತರ ಬಳಿ ಮನವಿ ಮಾಡಿದ್ದಾರೆ. ಡಿಸೆಂಬರ್​ 24ರಂದು ಎಂಜಿಆರ್​ ಪುಣ್ಯತಿಥಿ ನಿಮಿತ್ತ ಅವರ ಸ್ಮಾರಕ ಮನೆಗೆ ಶಶಿಕಲಾ ಭೇಟಿಯಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೇ ಜಯಕುಮಾರ್ ಇಂಥದ್ದೊಂದು ದೂರು ನೀಡಿದ್ದಾರೆ.

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ. ತಾವು ಇನ್ನೂ ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಶಶಿಕಲಾ ಚೆನ್ನೈನ ಟಿ.ನಗರದಲ್ಲಿರುವ ಎಂಜಿಆರ್ ಸ್ಮಾರಕದ ಬಳಿ ಎಐಎಡಿಎಂಕೆ ಪಕ್ಷದ ಧ್ವಜ ಹಾರಿಸಿದ್ದರು. ಆಗಲೂ ಸಹ ಮಾಜಿ ಸಚಿವ  ಜಯಕುಮಾರ್​ ಖಡಕ್​ ವಾರ್ನಿಂಗ್​ ಕೊಟ್ಟಿದ್ದರು. ನಿಮಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದ ಮೇಲೆ ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ ಎಂದಿದ್ದರು.

ಇದನ್ನೂ ಓದಿ: ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್