AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ V K Sasikala: ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು
ವಿ.ಕೆ.ಶಶಿಕಲಾ
TV9 Web
| Edited By: |

Updated on: Dec 19, 2021 | 9:17 PM

Share

ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ (VK Sasikala) ಅವರು ಎಐಎಡಿಎಂಕೆ (AIADMK) ಯಿಂದ ಉಚ್ಚಾಟನೆಗೊಂಡಿದ್ದರೂ, ಅವರಿನ್ನೂ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯೆಂದೇ ತಮ್ಮನ್ನು ತಾವು ಹೇಳಿಕೊಂಡಿದ್ದಾರೆ. ಪಕ್ಷದ ಟ್ಯಾಗ್​ನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಪಕ್ಷ ಮಾಜಿ ಸಚಿವ ಜಯಕುಮಾರ್​ ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಶಶಿಕಲಾ ಎಐಎಡಿಎಂಕೆಯಲ್ಲಿ ಇಲ್ಲ. ಪಕ್ಷದಲ್ಲಿ ಅವರಿಗೆ ಯಾವುದೇ ಹುದ್ದೆಯೂ ಇಲ್ಲ ಎಂದು ಎಐಎಡಿಎಂಕೆ ಜಂಟಿ ಸಂಯೋಜಕ ಕೆ.ಪಳನಿಸ್ವಾಮಿ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಕೂಡ ಶಶಿಕಲಾ ತಮ್ಮ ಪತ್ರಿಕಾ ಪ್ರಕಟಣೆ, ಇನ್ನಿತರ ಸ್ಟೇಟ್​ಮೆಂಟ್​​ಗಳನ್ನು ಬಿಡುಗಡೆ ಮಾಡುವಾಗ ಎಐಎಡಿಎಂಕೆ ಪ್ರಧಾನಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ಸಂಸ್ಥಾಪಕ ಎಂ.ಜಿ ರಾಮಚಂದ್ರನ್​ ಅವರ ಸ್ಮಾರಕ ಮನೆಯಲ್ಲಿ ಇದೇ ಟ್ಯಾಗ್​​ನಲ್ಲಿ ಒಂದು ಫಲಕವನ್ನೂ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಜಯಕುಮಾರ್​ ಅವರು ಇದೀಗ ನಗರ ಪೊಲೀಸ್ ಆಯುಕ್ತ ಶಂಕರ್​ ಜೈವಾಲ್​ ಅವರಿಗೆ ನೇರವಾಗಿ ದೂರು ನೀಡಿದ್ದಾರೆ. ಶಶಿಕಲಾ ವಿರುದ್ಧ ಎಫ್​ಐಆರ್​ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಮಹಾಬಲಂ ಪೊಲೀಸ್​ ಠಾಣೆ ಅಧಿಕಾರಿಗೆ ಸೂಚಿಸಿ ಎಂದು ಆಯುಕ್ತರ ಬಳಿ ಮನವಿ ಮಾಡಿದ್ದಾರೆ. ಡಿಸೆಂಬರ್​ 24ರಂದು ಎಂಜಿಆರ್​ ಪುಣ್ಯತಿಥಿ ನಿಮಿತ್ತ ಅವರ ಸ್ಮಾರಕ ಮನೆಗೆ ಶಶಿಕಲಾ ಭೇಟಿಯಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೇ ಜಯಕುಮಾರ್ ಇಂಥದ್ದೊಂದು ದೂರು ನೀಡಿದ್ದಾರೆ.

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ. ತಾವು ಇನ್ನೂ ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಶಶಿಕಲಾ ಚೆನ್ನೈನ ಟಿ.ನಗರದಲ್ಲಿರುವ ಎಂಜಿಆರ್ ಸ್ಮಾರಕದ ಬಳಿ ಎಐಎಡಿಎಂಕೆ ಪಕ್ಷದ ಧ್ವಜ ಹಾರಿಸಿದ್ದರು. ಆಗಲೂ ಸಹ ಮಾಜಿ ಸಚಿವ  ಜಯಕುಮಾರ್​ ಖಡಕ್​ ವಾರ್ನಿಂಗ್​ ಕೊಟ್ಟಿದ್ದರು. ನಿಮಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದ ಮೇಲೆ ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ ಎಂದಿದ್ದರು.

ಇದನ್ನೂ ಓದಿ: ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು