AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ V K Sasikala: ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ.

ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು
ವಿ.ಕೆ.ಶಶಿಕಲಾ
TV9 Web
| Edited By: |

Updated on: Dec 19, 2021 | 9:17 PM

Share

ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ (VK Sasikala) ಅವರು ಎಐಎಡಿಎಂಕೆ (AIADMK) ಯಿಂದ ಉಚ್ಚಾಟನೆಗೊಂಡಿದ್ದರೂ, ಅವರಿನ್ನೂ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯೆಂದೇ ತಮ್ಮನ್ನು ತಾವು ಹೇಳಿಕೊಂಡಿದ್ದಾರೆ. ಪಕ್ಷದ ಟ್ಯಾಗ್​ನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಪಕ್ಷ ಮಾಜಿ ಸಚಿವ ಜಯಕುಮಾರ್​ ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಶಶಿಕಲಾ ಎಐಎಡಿಎಂಕೆಯಲ್ಲಿ ಇಲ್ಲ. ಪಕ್ಷದಲ್ಲಿ ಅವರಿಗೆ ಯಾವುದೇ ಹುದ್ದೆಯೂ ಇಲ್ಲ ಎಂದು ಎಐಎಡಿಎಂಕೆ ಜಂಟಿ ಸಂಯೋಜಕ ಕೆ.ಪಳನಿಸ್ವಾಮಿ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಕೂಡ ಶಶಿಕಲಾ ತಮ್ಮ ಪತ್ರಿಕಾ ಪ್ರಕಟಣೆ, ಇನ್ನಿತರ ಸ್ಟೇಟ್​ಮೆಂಟ್​​ಗಳನ್ನು ಬಿಡುಗಡೆ ಮಾಡುವಾಗ ಎಐಎಡಿಎಂಕೆ ಪ್ರಧಾನಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ಸಂಸ್ಥಾಪಕ ಎಂ.ಜಿ ರಾಮಚಂದ್ರನ್​ ಅವರ ಸ್ಮಾರಕ ಮನೆಯಲ್ಲಿ ಇದೇ ಟ್ಯಾಗ್​​ನಲ್ಲಿ ಒಂದು ಫಲಕವನ್ನೂ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಜಯಕುಮಾರ್​ ಅವರು ಇದೀಗ ನಗರ ಪೊಲೀಸ್ ಆಯುಕ್ತ ಶಂಕರ್​ ಜೈವಾಲ್​ ಅವರಿಗೆ ನೇರವಾಗಿ ದೂರು ನೀಡಿದ್ದಾರೆ. ಶಶಿಕಲಾ ವಿರುದ್ಧ ಎಫ್​ಐಆರ್​ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಮಹಾಬಲಂ ಪೊಲೀಸ್​ ಠಾಣೆ ಅಧಿಕಾರಿಗೆ ಸೂಚಿಸಿ ಎಂದು ಆಯುಕ್ತರ ಬಳಿ ಮನವಿ ಮಾಡಿದ್ದಾರೆ. ಡಿಸೆಂಬರ್​ 24ರಂದು ಎಂಜಿಆರ್​ ಪುಣ್ಯತಿಥಿ ನಿಮಿತ್ತ ಅವರ ಸ್ಮಾರಕ ಮನೆಗೆ ಶಶಿಕಲಾ ಭೇಟಿಯಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೇ ಜಯಕುಮಾರ್ ಇಂಥದ್ದೊಂದು ದೂರು ನೀಡಿದ್ದಾರೆ.

ವಿ.ಕೆ.ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ತಾವು ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿಯೇ ಹೇಳಿದ್ದರೂ, ಅವರ ನಡೆ ಸಂಪೂರ್ಣ ತದ್ವಿರುದ್ಧವಾಗಿದೆ. ತಾವು ಇನ್ನೂ ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ಎಂದೇ ಹೇಳಿಕೊಳ್ಳುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಶಶಿಕಲಾ ಚೆನ್ನೈನ ಟಿ.ನಗರದಲ್ಲಿರುವ ಎಂಜಿಆರ್ ಸ್ಮಾರಕದ ಬಳಿ ಎಐಎಡಿಎಂಕೆ ಪಕ್ಷದ ಧ್ವಜ ಹಾರಿಸಿದ್ದರು. ಆಗಲೂ ಸಹ ಮಾಜಿ ಸಚಿವ  ಜಯಕುಮಾರ್​ ಖಡಕ್​ ವಾರ್ನಿಂಗ್​ ಕೊಟ್ಟಿದ್ದರು. ನಿಮಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದ ಮೇಲೆ ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ ಎಂದಿದ್ದರು.

ಇದನ್ನೂ ಓದಿ: ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು