AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

E Madhusudhanan Death: ಎಐಎಡಿಎಂಕೆ ಹಿರಿಯ ನಾಯಕ, ಪ್ರೆಸಿಡಿಯಂ ಅಧ್ಯಕ್ಷ ಇ. ಮಧುಸೂದನನ್ ನಿಧನ

2007ರಿಂದಲೂ ಮಧುಸೂದನನ್​ ಅವರು ಪಕ್ಷದ ಪ್ರೆಸಿಡಿಯಮ್​ ಅಧ್ಯಕ್ಷರಾಗಿದ್ದರು. ಎಐಎಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್​ ಅವರ ಉತ್ಕಟ ಅಭಿಮಾನಿಯಾಗಿದ್ದರು.

E Madhusudhanan Death: ಎಐಎಡಿಎಂಕೆ ಹಿರಿಯ ನಾಯಕ, ಪ್ರೆಸಿಡಿಯಂ ಅಧ್ಯಕ್ಷ ಇ. ಮಧುಸೂದನನ್ ನಿಧನ
ಇ.ಮಧುಸೂದನನ್​
TV9 Web
| Edited By: |

Updated on: Aug 06, 2021 | 11:58 AM

Share

ಚೆನ್ನೈ: ಎಐಎಡಿಎಂಕೆ ಹಿರಿಯ ನಾಯಕ (AIADMK Senior Leader), ಮಾಜಿ ಸಚಿವರ ಪಕ್ಷಗಳ ಪ್ರೆಸಿಡಿಯಂ ಅಧ್ಯಕ್ಷರೂ ಆಗಿದ್ದ ಇ. ಮಧುಸೂದನನ್ (E Madhusudhanan)​ ಅವರು ಇಂದು ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 81ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ಸಮಸ್ಯೆಯಿಂದ ಅವರು ಜುಲೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವರ್ಷ ಏಪ್ರಿಲ್​ನಲ್ಲಿ ಮಧುಸೂಧನನ್ ಅವರ ಪತ್ನಿ ಸಿ.ಜೀವಾ ಕೊವಿಡ್ 19 (Covid 19) ಸೋಂಕಿನಿಂದ ತೀರಿಕೊಂಡಿದ್ದರು. ಈ ದಂಪತಿಗೆ ಮಕ್ಕಳಿಲ್ಲ.

ಎಐಎಡಿಎಂಕೆ ಸಂಘಟಕ ಒ.ಪನೀರಸೆಲ್ವಂ ಮತ್ತು ಜಂಟಿ ಸಂಘಟಕ ಇ.ಕೆ.ಪಳನಿಸ್ವಾಮಿ ಅವರು ಮಧುಸೂದನನ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಾಗೇ, ಪಕ್ಷದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಹಾಗೇ, ಪಕ್ಷದ ಬಾವುಟವನ್ನು ಅರ್ಧ ಎತ್ತರಕ್ಕೆ ಹಾರಿಸಲಾಗುವುದು ಎಂದೂ ಹೇಳಿದ್ದಾರೆ.

2007ರಿಂದಲೂ ಮಧುಸೂದನನ್​ ಅವರು ಪಕ್ಷದ ಪ್ರೆಸಿಡಿಯಮ್​ ಅಧ್ಯಕ್ಷರಾಗಿದ್ದರು. ಎಐಎಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್​ ಅವರ ಉತ್ಕಟ ಅಭಿಮಾನಿಯಾಗಿದ್ದರು. ಹಾಗೇ, ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ತುಂಬ ನಿಷ್ಠಾವಂತರಾಗಿದ್ದರು. 1991-96ರವರೆಗೆ ಕೈಮಗ್ಗ ಮತ್ತು ಜವಳಿ ಖಾತೆ ಸಚಿವರಾಗಿದ್ದರು. ಅದಕ್ಕೂ ಮೊದಲು 1984ರಲ್ಲಿ ಇವರನ್ನು ಎಂಜಿಆರ್​ ಮದ್ರಾಸ್ ವಿಧಾನಪರಿಷತ್​​ಗೆ ನಾಮನಿರ್ದೇಶನ ಮಾಡಿದ್ದರು. ಅದಾದ ನಂತರ ಡಾ. ರಾಧಾಕೃಷ್ಣನಗರದಲ್ಲಿ ಗೆದ್ದು ಶಾಸಕರಾದ ಅವರು 1991ರಲ್ಲಿ ಜಯಲಲಿತಾ ಕ್ಯಾಬಿನೆಟ್​ ಸೇರಿದ್ದರು. ಇದೀಗ ಪಕ್ಷ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ.

ಇದನ್ನೂ ಓದಿ: Anna Bhagya Scheme Rice: ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ

LPG Cashback Offer: ಪೇಟಿಎಂ ಮೂಲಕ ಎಲ್​ಪಿಜಿ ಸಿಲಿಂಡರ್​ ಬುಕ್​ ಮಾಡಿ 2700 ರೂ. ತನಕ ಕ್ಯಾಶ್​ಬ್ಯಾಕ್ ಪಡೆಯಿರಿ

AIADMK Presidium Chairman E Madhusudhanan and Senior Leader E Madhusudhanan Died

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು