AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

E Madhusudhanan Death: ಎಐಎಡಿಎಂಕೆ ಹಿರಿಯ ನಾಯಕ, ಪ್ರೆಸಿಡಿಯಂ ಅಧ್ಯಕ್ಷ ಇ. ಮಧುಸೂದನನ್ ನಿಧನ

2007ರಿಂದಲೂ ಮಧುಸೂದನನ್​ ಅವರು ಪಕ್ಷದ ಪ್ರೆಸಿಡಿಯಮ್​ ಅಧ್ಯಕ್ಷರಾಗಿದ್ದರು. ಎಐಎಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್​ ಅವರ ಉತ್ಕಟ ಅಭಿಮಾನಿಯಾಗಿದ್ದರು.

E Madhusudhanan Death: ಎಐಎಡಿಎಂಕೆ ಹಿರಿಯ ನಾಯಕ, ಪ್ರೆಸಿಡಿಯಂ ಅಧ್ಯಕ್ಷ ಇ. ಮಧುಸೂದನನ್ ನಿಧನ
ಇ.ಮಧುಸೂದನನ್​
TV9 Web
| Edited By: |

Updated on: Aug 06, 2021 | 11:58 AM

Share

ಚೆನ್ನೈ: ಎಐಎಡಿಎಂಕೆ ಹಿರಿಯ ನಾಯಕ (AIADMK Senior Leader), ಮಾಜಿ ಸಚಿವರ ಪಕ್ಷಗಳ ಪ್ರೆಸಿಡಿಯಂ ಅಧ್ಯಕ್ಷರೂ ಆಗಿದ್ದ ಇ. ಮಧುಸೂದನನ್ (E Madhusudhanan)​ ಅವರು ಇಂದು ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 81ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ಸಮಸ್ಯೆಯಿಂದ ಅವರು ಜುಲೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವರ್ಷ ಏಪ್ರಿಲ್​ನಲ್ಲಿ ಮಧುಸೂಧನನ್ ಅವರ ಪತ್ನಿ ಸಿ.ಜೀವಾ ಕೊವಿಡ್ 19 (Covid 19) ಸೋಂಕಿನಿಂದ ತೀರಿಕೊಂಡಿದ್ದರು. ಈ ದಂಪತಿಗೆ ಮಕ್ಕಳಿಲ್ಲ.

ಎಐಎಡಿಎಂಕೆ ಸಂಘಟಕ ಒ.ಪನೀರಸೆಲ್ವಂ ಮತ್ತು ಜಂಟಿ ಸಂಘಟಕ ಇ.ಕೆ.ಪಳನಿಸ್ವಾಮಿ ಅವರು ಮಧುಸೂದನನ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಾಗೇ, ಪಕ್ಷದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಹಾಗೇ, ಪಕ್ಷದ ಬಾವುಟವನ್ನು ಅರ್ಧ ಎತ್ತರಕ್ಕೆ ಹಾರಿಸಲಾಗುವುದು ಎಂದೂ ಹೇಳಿದ್ದಾರೆ.

2007ರಿಂದಲೂ ಮಧುಸೂದನನ್​ ಅವರು ಪಕ್ಷದ ಪ್ರೆಸಿಡಿಯಮ್​ ಅಧ್ಯಕ್ಷರಾಗಿದ್ದರು. ಎಐಎಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್​ ಅವರ ಉತ್ಕಟ ಅಭಿಮಾನಿಯಾಗಿದ್ದರು. ಹಾಗೇ, ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ತುಂಬ ನಿಷ್ಠಾವಂತರಾಗಿದ್ದರು. 1991-96ರವರೆಗೆ ಕೈಮಗ್ಗ ಮತ್ತು ಜವಳಿ ಖಾತೆ ಸಚಿವರಾಗಿದ್ದರು. ಅದಕ್ಕೂ ಮೊದಲು 1984ರಲ್ಲಿ ಇವರನ್ನು ಎಂಜಿಆರ್​ ಮದ್ರಾಸ್ ವಿಧಾನಪರಿಷತ್​​ಗೆ ನಾಮನಿರ್ದೇಶನ ಮಾಡಿದ್ದರು. ಅದಾದ ನಂತರ ಡಾ. ರಾಧಾಕೃಷ್ಣನಗರದಲ್ಲಿ ಗೆದ್ದು ಶಾಸಕರಾದ ಅವರು 1991ರಲ್ಲಿ ಜಯಲಲಿತಾ ಕ್ಯಾಬಿನೆಟ್​ ಸೇರಿದ್ದರು. ಇದೀಗ ಪಕ್ಷ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ.

ಇದನ್ನೂ ಓದಿ: Anna Bhagya Scheme Rice: ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ

LPG Cashback Offer: ಪೇಟಿಎಂ ಮೂಲಕ ಎಲ್​ಪಿಜಿ ಸಿಲಿಂಡರ್​ ಬುಕ್​ ಮಾಡಿ 2700 ರೂ. ತನಕ ಕ್ಯಾಶ್​ಬ್ಯಾಕ್ ಪಡೆಯಿರಿ

AIADMK Presidium Chairman E Madhusudhanan and Senior Leader E Madhusudhanan Died

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್