AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಎಐಎಡಿಎಂಕೆ ಕಾರ್ಯಕರ್ತರ ನಡುವೆ ಮಾರಾಮಾರಿ; ಕಚೇರಿಯ ಬಾಗಿಲು ಒಡೆದು, ರಸ್ತೆಯಲ್ಲೇ ಹೊಡೆದಾಟ

ಇ. ಪಳನಿಸ್ವಾಮಿ ನೇತೃತ್ವದಲ್ಲಿ ಇಂದು ಎಐಎಡಿಎಂಕೆ ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಯಲಿದ್ದು, ಓ. ಪನೀರ್‌ಸೆಲ್ವಂ ಬೆಂಬಲಿಗರು ಎಐಎಡಿಎಂಕೆ ಕಚೇರಿಯ ಬಾಗಿಲು ಒಡೆದಿದ್ದಾರೆ.

ಚೆನ್ನೈನಲ್ಲಿ ಎಐಎಡಿಎಂಕೆ ಕಾರ್ಯಕರ್ತರ ನಡುವೆ ಮಾರಾಮಾರಿ; ಕಚೇರಿಯ ಬಾಗಿಲು ಒಡೆದು, ರಸ್ತೆಯಲ್ಲೇ ಹೊಡೆದಾಟ
ಪಳನಿಸ್ವಾಮಿ- ಪನ್ನೀರ್​ಸೆಲ್ವಂ
TV9 Web
| Edited By: |

Updated on:Jul 11, 2022 | 10:10 AM

Share

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಎಐಎಡಿಎಂಕೆ (AIADMK) ಕಾರ್ಯಕರ್ತರ ನಡುವೆ ಗಲಾಟೆ ಭುಗಿಲೆದ್ದಿದೆ. ಇಪಿಎಸ್ (EPS),​ ಒಪಿಎಸ್ (OPS) ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಚೆನ್ನೈನ ಎಐಎಡಿಎಂಕೆ ಕಚೇರಿ ಎದುರು ಇಂದು ಮುಂಜಾನೆ ಹೈಡ್ರಾಮಾ ನಡೆದಿದೆ. ಎರಡೂ ಕಡೆಯ ಕಾರ್ಯಕರ್ತರು ಉದ್ರಿಕ್ತಗೊಂಡು ರಸ್ತೆಯಲ್ಲಿಯೇ ಹೊಡೆದಾಡಿಕೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾಯಕತ್ವದ ವಿಚಾರಕ್ಕೆ ಕಲ್ಲು, ದೊಣ್ಣೆಗಳಿಂದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಇ. ಪಳನಿಸ್ವಾಮಿ ನೇತೃತ್ವದಲ್ಲಿ ಇಂದು ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಯಲಿದ್ದು, ಓ. ಪನೀರ್‌ಸೆಲ್ವಂ ಬೆಂಬಲಿಗರು ಎಐಎಡಿಎಂಕೆ ಕಚೇರಿಯ ಬಾಗಿಲು ಒಡೆದಿದ್ದಾರೆ. ಇಂದು ನಡೆಯಲಿರುವ ಜನರಲ್ ಕೌನ್ಸಿಲ್ ಸಭೆಗೂ ಮುನ್ನ ಎಐಎಡಿಎಂಕೆ ನಾಯಕರಾದ ಇ. ಪಳನಿಸ್ವಾಮಿ ಮತ್ತು ಓ. ಪನ್ನೀರಸೆಲ್ವಂ ಅವರ ಬೆಂಬಲಿಗರ ನಡುವೆ ಪಕ್ಷದ ಪ್ರಧಾನ ಕಚೇರಿಯ ಬಳಿ ಘರ್ಷಣೆ ಉಂಟಾಗಿದೆ.

ಇಂದು ನಡೆಯಲಿರುವ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹಂಗಾಮಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನವೀಕರಿಸಲು ಮತ್ತು ಜಂಟಿ ಸಂಯೋಜಕ ಹುದ್ದೆಗಳನ್ನು ರದ್ದುಗೊಳಿಸಲು ಪ್ರಸ್ತಾಪಿಸುವ ಸಭೆಯನ್ನು ಸ್ಥಗಿತಗೊಳಿಸುವಂತೆ ಓ ಪನ್ನೀರಸೆಲ್ವಂ ಮಾಡಿದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಇದನ್ನೂ ಓದಿ: ಎಐಎಡಿಎಂಕೆ ನೇತೃತ್ವಕ್ಕೆ ಹಗ್ಗಜಗ್ಗಾಟ; ಪಳನಿಸ್ವಾಮಿಗೆ ಬೆಂಬಲ, ಸಭೆಯಿಂದ ಹೊರನಡೆದ ಪನ್ನೀರ್​ಸೆಲ್ವಂ

ಇಂದು ನಡೆಯಲಿರುವ ಜನರಲ್ ಕೌನ್ಸಿಲ್ ಸಭೆಯಲ್ಲಿ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಪ್ರಬಲ ಬಣ ಅವರನ್ನು ಸಂಘಟನೆಯ ಏಕೈಕ ನಾಯಕನನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಎರಡೂ ನಾಯಕರ ಬೆಂಬಲಿಗರು ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತಿರುವ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ಟಿವಿ ದೃಶ್ಯಗಳು ವೈರಲ್ ಆಗಿವೆ.

ಇದೇ ವೇಳೆ ಕೆಲವರು ಪಕ್ಷದ ಕಛೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿತು. ಪಕ್ಷದ ಸಂಸ್ಥಾಪಕ, ದಿವಂಗತ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ ಹೆಸರಿನ ಎಐಎಡಿಎಂಕೆ ಕಚೇರಿ, ಎಂಜಿಆರ್ ಮಾಳಿಗೈಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪನ್ನೀರಸೆಲ್ವಂ ಅವರು ಆರ್. ವೈತಿಲಿಂಗಂ ಮತ್ತು ಮನೋಜ್ ಪಾಂಡಿಯನ್ ಸೇರಿದಂತೆ ಹಲವರು ಪಕ್ಷದ ಕಚೇರಿಗೆ ಆಗಮಿಸಿದ್ದಾರೆ.

Published On - 9:51 am, Mon, 11 July 22

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು