AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC ಅಧ್ಯಕ್ಷ ಚುನಾವಣೆ: ತ್ರಿಪಾಠಿ ನಾಮಪತ್ರ ರಿಜೆಕ್ಟ್, ಖರ್ಗೆ- ಶಶಿ ತರೂರ್ ನಡುವೆ ಫೈಟ್​

AICC ಅಧ್ಯಕ್ಷ ಸ್ಥಾನಕ್ಕೆ ತ್ರಿಪಾಠಿ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರವಾಗಿದೆ. ಈ ಹಿನ್ನೆಲೆಯಲ್ಲಿ ಕಣದಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿ ಏರ್ಪಡಲಿದೆ.

AICC ಅಧ್ಯಕ್ಷ ಚುನಾವಣೆ: ತ್ರಿಪಾಠಿ ನಾಮಪತ್ರ ರಿಜೆಕ್ಟ್, ಖರ್ಗೆ- ಶಶಿ ತರೂರ್ ನಡುವೆ ಫೈಟ್​
Madhusudan Mistry
TV9 Web
| Edited By: |

Updated on:Oct 01, 2022 | 4:06 PM

Share

ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ AICC ಅಧ್ಯಕ್ಷ ಚುನಾವಣೆಯ ಅಖಾಡಕ್ಕಿಳಿದಿದ್ದ K.N.ತ್ರಿಪಾಠಿ ನಾಮಪತ್ರ(Nomination) ತಿರಸ್ಕೃತವಾಗಿದೆ. ಇದರಿಂದ  ಜಾರ್ಖಂಡ್ ಕಾಂಗ್ರೆಸ್ ನಾಯಕತ್ರಿಪಾಠಿಗೆ ಭಾರೀ ನಿರಾಸೆಯಾಗಿದೆ.

ನಿಗದಿಪಡಿಸಿದ ಮಾನದಂಡ ಪೂರೈಸದ ಕಾರಣ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್​ ಮಿಸ್ತ್ರಿ (Madhusudan Mistry)ಅವರು ಇಂದು(ಅ.01)  K.N.ತ್ರಿಪಾಠಿ ನಾಮಪತ್ರ ತಿರಸ್ಕೃತ ಮಾಡಿದ್ದಾರೆ. ಇದರಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಪೈಪೋಟಿ ನಡೆಯಲಿದೆ.

ಇದನ್ನೂ ಓದಿ: Mallikarjuna Kharge: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ರಾಜಸ್ಥಾನ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಹಾಗೂ ಪಕ್ಷದ ಮತ್ತೋರ್ವ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅಧ್ಯಕ್ಷ ಹುದ್ದೆ ಚುನಾವಣಾ ರೇಸ್ ನಿಂದ ಹಿಂದೆ ಸರಿದಿದಿದ್ದರು. ಇದೀಗ ತ್ರಿಪಾಠಿ ಅವರ ನಾಮಪತ್ರ ರಿಜೆಕ್ಟ್ ಆಗಿದ್ದರಿಂದ ಈಗ ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಇದ್ದಾರೆ.

ಇಬ್ಬರು ನಾಯಕರಲ್ಲಿ ಯಾರಿಗೇ ಗದ್ದುಗೆ ಗಿಟ್ಟಿದರೂ, ದಕ್ಷಿಣ ಭಾರತದ ನಾಯಕರಿಗೆ ಎಐಸಿಸಿ ಅತ್ಯುನ್ನತ ಹುದ್ದೆ ಸಿಗಲಿದೆ. ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅಥವಾ ಕೇರಳದ ಶಶಿ ತರೂರ್ ಕೈ ಪಾರ್ಟಿಯ ಮುಂದಿನ ಸಾರಥಿ ಆಗಲಿದ್ದಾರೆ.

ಆದ್ರೆ, ಈ ಹಿಂದೆ ಕಾಂಗ್ರೆಸ್ ಕುಟುಂಬ ನಾಯಕತ್ವ ಪ್ರಶ್ನಿಸಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಜಿ23 ನಾಯಕರೂ ಕೂಡ ಖರ್ಗೆ ಅವರಿಗೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗುವ ಎಲ್ಲಾ ಸಾಧ್ಯತೆಳಿವೆ ಎನ್ನಲಾಗಿದೆ. ಇದೇ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಂತಿಮವಾಗಿ ಗಲುವು ಯಾರ ಪಾಲಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Sat, 1 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ