AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ
ಮಲ್ಲಿಕಾರ್ಜುನ ಖರ್ಗೆ
ನಯನಾ ರಾಜೀವ್
|

Updated on: Mar 21, 2023 | 8:24 AM

Share

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಸತ್ಯವನ್ನು ಮಾತನಾಡುವುದಕ್ಕಾಗಿ ಬಿಜೆಪಿಯು ಅವರಿಗೆ ಕಿರುಕುಳ ನೀಡುತ್ತಿದೆ ಅಂತಹ ವಿಷಯಗಳಿಗೆ ನಾವು ಹೆದರುವುದಿಲ್ಲ ಎಲ್ಲಕ್ಕೂ ಸಿದ್ಧ ಎಂದರು.

ಮೋದಿಯವರು ಬೆಳಗಾವಿಗೆ ಬಂದಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಎಂದು ಹೇಳಿದ್ದರು ಅದಕ್ಕೆ ತಿರುಗೇಟು ನೀಡಿರುವ ಖರ್ಗೆ ಸರಿ ನನ್ನ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಆದರೆ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಎಲ್ಲಿದೆ ಎಂದು ಪ್ರಶ್ನಿಸಿದ್ದರು.

ಇದು ಪ್ರಜಾಪ್ರಭುತ್ವ ರಾಷ್ಟ್ರ  ಈ ದೇಶದಲ್ಲಿ ಪ್ರಜಾಪ್ರಭುತ್ವ ಸರಿಯಾಗಿ ನಡೆಯುತ್ತಿಲ್ಲ ಎಂದು ಹೇಳುವುದರಲ್ಲಿ ತಪ್ಪೇನಿದೆ’ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಇನ್ನೂ ಜಾತೀಯತೆ ಇದೆ.ನಮಗೆ ಸತ್ಯವನ್ನು ಮಾತನಾಡಲು ಬಿಡುವುದಿಲ್ಲ ಎಂದಿದ್ದಾರೆ.

ನಿಮ್ಮ ಇಡಿ, ಸಿಬಿಐ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ, ನಾವು ಅವರಿಗೆ ಹೆದರುವುದಿಲ್ಲ. ರಾಹುಲ್ ಗಾಂಧಿ ಎಂದಿಗೂ ಹೆದರುವುದಿಲ್ಲ, ಅವರು ಸತ್ಯವನ್ನು ಮಾತನಾಡುತ್ತಾರೆ ಮತ್ತು ಅಂತಹ ವ್ಯಕ್ತಿಗೆ ತೊಂದರೆಯಾಗುತ್ತಿದೆ. ಜೈಲಿಗೆ ಕಳುಹಿಸಿದರೂ ಹೋಗಲು ಸಿದ್ಧರಿದ್ದೇವೆ ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ರೈತರು, ಯುವಕರು, ಮಹಿಳೆಯರು ಮತ್ತು ಸಮಾಜದ ಪ್ರತಿಯೊಂದು ಸ್ತರದ ಜನರನ್ನು ಭೇಟಿಯಾದರು.

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ