AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ
ಮಲ್ಲಿಕಾರ್ಜುನ ಖರ್ಗೆ
ನಯನಾ ರಾಜೀವ್
|

Updated on: Mar 21, 2023 | 8:24 AM

Share

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಸತ್ಯವನ್ನು ಮಾತನಾಡುವುದಕ್ಕಾಗಿ ಬಿಜೆಪಿಯು ಅವರಿಗೆ ಕಿರುಕುಳ ನೀಡುತ್ತಿದೆ ಅಂತಹ ವಿಷಯಗಳಿಗೆ ನಾವು ಹೆದರುವುದಿಲ್ಲ ಎಲ್ಲಕ್ಕೂ ಸಿದ್ಧ ಎಂದರು.

ಮೋದಿಯವರು ಬೆಳಗಾವಿಗೆ ಬಂದಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಎಂದು ಹೇಳಿದ್ದರು ಅದಕ್ಕೆ ತಿರುಗೇಟು ನೀಡಿರುವ ಖರ್ಗೆ ಸರಿ ನನ್ನ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಆದರೆ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಎಲ್ಲಿದೆ ಎಂದು ಪ್ರಶ್ನಿಸಿದ್ದರು.

ಇದು ಪ್ರಜಾಪ್ರಭುತ್ವ ರಾಷ್ಟ್ರ  ಈ ದೇಶದಲ್ಲಿ ಪ್ರಜಾಪ್ರಭುತ್ವ ಸರಿಯಾಗಿ ನಡೆಯುತ್ತಿಲ್ಲ ಎಂದು ಹೇಳುವುದರಲ್ಲಿ ತಪ್ಪೇನಿದೆ’ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಇನ್ನೂ ಜಾತೀಯತೆ ಇದೆ.ನಮಗೆ ಸತ್ಯವನ್ನು ಮಾತನಾಡಲು ಬಿಡುವುದಿಲ್ಲ ಎಂದಿದ್ದಾರೆ.

ನಿಮ್ಮ ಇಡಿ, ಸಿಬಿಐ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ, ನಾವು ಅವರಿಗೆ ಹೆದರುವುದಿಲ್ಲ. ರಾಹುಲ್ ಗಾಂಧಿ ಎಂದಿಗೂ ಹೆದರುವುದಿಲ್ಲ, ಅವರು ಸತ್ಯವನ್ನು ಮಾತನಾಡುತ್ತಾರೆ ಮತ್ತು ಅಂತಹ ವ್ಯಕ್ತಿಗೆ ತೊಂದರೆಯಾಗುತ್ತಿದೆ. ಜೈಲಿಗೆ ಕಳುಹಿಸಿದರೂ ಹೋಗಲು ಸಿದ್ಧರಿದ್ದೇವೆ ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ರೈತರು, ಯುವಕರು, ಮಹಿಳೆಯರು ಮತ್ತು ಸಮಾಜದ ಪ್ರತಿಯೊಂದು ಸ್ತರದ ಜನರನ್ನು ಭೇಟಿಯಾದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!