AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Sonia Gandhi: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು
ಸೋನಿಯಾ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 02, 2022 | 1:05 PM

Share

ದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಕೊರೊನಾ ಸೋಂಕು (Coronavirus) ದೃಢಪಟ್ಟಿದೆ. ನ್ಯಾಷನಲ್ ಹೆರಾಲ್ಡ್ (National Herald) ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಅವರು ಜಾರಿ ನಿರ್ದೇಶನಾಲಯದ (Enforcement Directorate) ವಿಚಾರಣೆ ಎದುರಿಸಬೇಕಿತ್ತು.

ಸೋನಿಯಾ ಗಾಂಧಿ ಅವರಲ್ಲಿ ನಿನ್ನೆ (ಜೂನ್ 1) ಕೊರೊನಾದ ಲಕ್ಷಣಗಳು ಕಂಡು ಬಂದವು. ಹೀಗಾಗಿ ಅವರು ಸ್ವಯಂ ಪ್ರತ್ಯೇಕವಾಸಕ್ಕೆ (ಐಸೋಲೇಷನ್​) ಮುಂದಾದರು. ಕಳೆದ ವಾರ ಸರಣಿ ಸಭೆಗಳನ್ನು ನಡೆಸಿದ್ದ ಸೋನಿಯಾರಿಗೆ ತುಸು ಬಳಲಿಕೆಯೂ ಕಾಣಿಸಿಕೊಂಡಿತ್ತು.

‘ನಿನ್ನೆ ಸಂಜೆ ಕೆಲವರಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಸೋನಿಯಾ ಅವರಿಗೂ ಸಣ್ಣಗೆ ಜ್ವರ ಬಂದಿತ್ತು. ಕೊವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಐಸೊಲೇಷನ್​ಗೆ ಮುಂದಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಗುಣಮುಖರಾಗುತ್ತಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.

ಇಡಿ ವಿಚಾರಣೆಗೆ ಹಾಜರಾಗಲು ಸೂಚನೆ

ನ್ಯಾಷನಲ್ ಹೆರಾಲ್ಡ್ (National Herald) ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (Enforcement Directorate – ED) ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ (Rahul Gandhi) ಸಮಯ ಕೇಳಿದ್ದಾರೆ. ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ಕಾರಣ ಹೆಚ್ಚಿನ ಸಮಯ ಬೇಕು ಎಂದು ರಾಹುಲ್ ಗಾಂಧಿ ಕೋರಿದ್ದಾರೆ. ಜೂನ್ 8ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಇಂದು (ಜೂನ್ 2) ವಿಚಾರಣೆಗೆ ಹಾಜರಾಗಬೇಕು ಎಂದು ಇಡಿ ಸಮನ್ಸ್ ಜಾರಿ ಮಾಡಿತ್ತು.

‘ನಮ್ಮ ಇಬ್ಬರೂ ನಾಯಕರು ಇಡಿ ವಿಚಾರಣೆ ಎದುರಿಸಲಿದ್ದಾರೆ. ಇಂಥ ಬೆದರಿಕೆ ತಂತ್ರಗಳಿಂದ ನಮ್ಮನ್ನು ಮಣಿಸಲು ಆಗುವುದಿಲ್ಲ’ ಎಂದು ಕಾಂಗ್ರೆಸ್​ನ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದರು. ನಂತರ ಮತ್ತೋರ್ವ ವಕ್ತಾರ ರಣದೀಪ್ ಸುರ್ಜೆವಾಲಾ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು. ‘ರಾಜಕೀಯ ಪ್ರೇರಿತ ಪ್ರಕರಣ. ಸರ್ಕಾರವು ತನ್ನ ಅಧೀನದಲ್ಲಿರುವ ಏಜೆನ್ಸಿಗಳನ್ನು ಮನಸ್ಸಿಗೆ ಬಂದಂತೆ ಬಳಸಿಕೊಳ್ಳುತ್ತಿದೆ’ ಎಂದು ಹೇಳಿದ್ದರು.

ಪ್ರಕರಣದ ವಿವರ ನೀಡಿದ್ದ ರಣದೀಪ್ ಸುರ್ಜೆವಾಲಾ, ‘ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸುತ್ತಿತ್ತು. ಹಲವು ವರ್ಷಗಳ ಅವಧಿಗೆ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ₹ 90 ಕೋಟಿಯಷ್ಟು ಹಣವನ್ನು ನೀಡಿತ್ತು. ನಷ್ಟದ ಮೊತ್ತ ಹೆಚ್ಚಾದ ಹಿನ್ನೆಲೆಯಲ್ಲಿ ಅದನ್ನು ಷೇರುಗಳಾಗಿ ಪರಿವರ್ತಿಸಿ, ಯಂಗ್ ಇಂಡಿಯಾ ಹೆಸರಿನ ಕಂಪನಿಗೆ ವರ್ಗಾಯಿಸಲಾಯಿತು. ಇದು ಜಗತ್ತಿನೆಲ್ಲೆಡೆ ನಡೆಯುವ ಪ್ರಕ್ರಿಯೆ’ ಎಂದು ಸುರ್ಜೆವಾಲಾ ವಿವರಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

Published On - 12:52 pm, Thu, 2 June 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ