AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Plus Variant ಹಿಂದಿನ ರೂಪಾಂತರಿಗೆ ಹೋಲಿಸಿದರೆ ಡೆಲ್ಟಾ ಪ್ಲಸ್ ವೈರಸ್ ಹೆಚ್ಚು ಸಾಂಕ್ರಾಮಿಕ: ಡಾ.ರಣದೀಪ್ ಗುಲೇರಿಯಾ

Covid Delta Plus: ಪ್ರಸ್ತುತ, ನಾವು ಕೊವಿಡ್‌ನ ಡೆಲ್ಟಾ ಪ್ಲಸ್ ರೂಪಾಂತರದ ಸುಮಾರು 42 ಪ್ರಕರಣಗಳನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ಡೆಲ್ಟಾ ಪ್ಲಸ್ ರೂಪಾಂತರವು ಭಾರತದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳುವುದು ಕಷ್ಟ.

Delta Plus Variant ಹಿಂದಿನ ರೂಪಾಂತರಿಗೆ ಹೋಲಿಸಿದರೆ ಡೆಲ್ಟಾ ಪ್ಲಸ್ ವೈರಸ್ ಹೆಚ್ಚು ಸಾಂಕ್ರಾಮಿಕ: ಡಾ.ರಣದೀಪ್ ಗುಲೇರಿಯಾ
ಡಾ. ರಣದೀಪ್ ಗುಲೇರಿಯಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 24, 2021 | 11:23 AM

Share

ದೆಹಲಿ: ಡೆಲ್ಟಾ ಪ್ಲಸ್ ಕಾಳಜಿಯ ರೂಪಾಂತರವಾಗಿ ಮಾರ್ಪಟ್ಟಿದೆಯೇ ಎಂಬುದರ ಬಗ್ಗೆ ಏಮ್ಸ್ ಮುಖ್ಯಸ್ಥ ಡಾ.ರಣದೀಪ್ ಗುಲೇರಿಯಾ ಮಾತನಾಡಿದ್ದು, ಸರಿಯಾದ ಕೋವಿಡ್ ಪ್ರೋಟೋಕಾಲ್‌ಗಳ ಮೂಲಕ ಹೊಸ ರೂಪಾಂತರದ ಹರಡುವಿಕೆಯನ್ನು ಪರಿಶೀಲಿಸಬಹುದು ಎಂದು ಹೇಳಿದರು. ಡೆಲ್ಟಾ ಪ್ಲಸ್ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ಜತೆ ಮಾತನಾಡಿದ ಗುಲೇರಿಯಾ “ಕುತೂಹಕಾರಿ ರೂಪಾಂತರಿ ಮತ್ತು ಕಾಳಜಿಯ ರೂಪಾಂತರಿ ನಡುವಿನ ವ್ಯತ್ಯಾಸವನ್ನು ನಾವು ಅರ್ಥಮಾಡಿಕೊಳ್ಳಬೇಕು. ವೈರಸ್ ರೂಪಾಂತರಗೊಳ್ಳುವುದನ್ನು ಮುಂದುವರಿಸುತ್ತದೆ, ಇದು ತಿಂಗಳಿಗೆ ಎರಡು ಬಾರಿ ರೂಪಾಂತರಗೊಳ್ಳುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಅದು ರೂಪಾಂತರಗೊಂಡಾಗಲೆಲ್ಲಾ ಅದು ಚಿಂತೆಗೀಡಾಗುವ ವಿಷಯವಲ್ಲ. ಹಿಂದಿನ ರೂಪಾಂತರಿಗೆ ಹೋಲಿಸಿದರೆ ಈ ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ. ವೈರಸ್ನಿಂದಾಗಿ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು ಮತ್ತು ಹೆಚ್ಚು ಜನರ ಸಾವಿಗೆ ಕಾರಣವಾದರೆ, ಅದು ಕಾಳಜಿಯ ರೂಪಾಂತರವಾಗುತ್ತದೆ.

ಪ್ರಸ್ತುತ, ನಾವು ಕೊವಿಡ್‌ನ ಡೆಲ್ಟಾ ಪ್ಲಸ್ ರೂಪಾಂತರದ ಸುಮಾರು 42 ಪ್ರಕರಣಗಳನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ಡೆಲ್ಟಾ ಪ್ಲಸ್ ರೂಪಾಂತರವು ಭಾರತದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳುವುದು ಕಷ್ಟ. ಆದರೆ ನೋಂದಾಯಿತ ಪ್ರಕರಣಗಳಲ್ಲಿನ ಯಾವುದೇ ಉಲ್ಬಣವನ್ನು ನಾವು ಸೂಕ್ಷ್ಮವಾಗಿ ಗಮನಿಸಬೇಕು. ನಾವು ಆಕ್ರಮಣಶೀಲವಾಗಿ ಪರೀಕ್ಷಿಸುವ, ಟ್ರ್ಯಾಕ್ ಮಾಡುವ ಮತ್ತು ಕಂಟೈನ್ಮೆಂಟ್ ತಂತ್ರಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Delta Plus Variant ಕೊರೊನಾ ಲಸಿಕೆಗಿದೆಯಂತೆ ಡೆಲ್ಟಾ ಪ್ಲಸ್ ಓಡಿಸುವ ಶಕ್ತಿ.. ಲಸಿಕೆ ಪಡೆದ್ರೆ ಸೋಂಕಿನಿಂದ ಮುಕ್ತ

ಇದನ್ನೂ ಓದಿ:  Coronavirus cases in India: ದೇಶದಲ್ಲಿ 54,336 ಹೊಸ ಕೊವಿಡ್ ಪ್ರಕರಣ ಪತ್ತೆ, 1321 ಮಂದಿ ಸಾವು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!