AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AIIMS Cyber Attack: ಏಮ್ಸ್​ನ ಇ-ಆಸ್ಪತ್ರೆಯ ಡೇಟಾ​​ ಮರು​ಸ್ಥಾಪನೆ; 8ನೇ ದಿನವೂ ಸರ್ವರ್ ಡೌನ್

ಸತತ 8ನೇ ದಿನವೂ ದೆಹಲಿಯ ಏಮ್ಸ್ ಸರ್ವರ್ ಕೆಟ್ಟು ನಿಂತಿದೆ. ಇ-ಹಾಸ್ಪಿಟಲ್ ಡೇಟಾವನ್ನು ಮರುಸ್ಥಾಪಿಸಲಾಗಿದ್ದರೂ, ಸೇವೆಗಳನ್ನು ಮರುಸ್ಥಾಪಿಸುವ ಮೊದಲು ನೆಟ್‌ವರ್ಕ್ ಅನ್ನು ಇನ್ನೂ ಸ್ಯಾನಿಟೈಸ್ ಮಾಡಲಾಗುತ್ತಿದೆ.

AIIMS Cyber Attack: ಏಮ್ಸ್​ನ ಇ-ಆಸ್ಪತ್ರೆಯ ಡೇಟಾ​​ ಮರು​ಸ್ಥಾಪನೆ; 8ನೇ ದಿನವೂ ಸರ್ವರ್ ಡೌನ್
ದೆಹಲಿಯ ಏಮ್ಸ್
TV9 Web
| Edited By: |

Updated on:Nov 30, 2022 | 9:46 AM

Share

ನವದೆಹಲಿ: ದೆಹಲಿಯ ಏಮ್ಸ್​​ನ (AIIMS) ಇ-ಆಸ್ಪತ್ರೆಯ ಡೇಟಾ ಸರ್ವರ್​​ ಅನ್ನು ಪುನರ್​ಸ್ಥಾಪನೆ ಮಾಡಲಾಗಿದೆ. ಡೇಟಾ ಕಳವು ಆಗದಂತೆ ಸೈಬರ್​​ (Delhi Cyber Attack) ಸಿಬ್ಬಂದಿ ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ. ದೆಹಲಿಯ ಏಮ್ಸ್​​ನ ಇ-ಆಸ್ಪತ್ರೆಯ ಡೇಟಾ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಏಮ್ಸ್​​ನ ಇ-ಆಸ್ಪತ್ರೆ ಡೇಟಾ ಸರ್ವರ್ ಹ್ಯಾಕ್ ಆಗಿದೆ. ಸತತ 8ನೇ ದಿನವೂ ಏಮ್ಸ್‌ ಸರ್ವರ್‌ ಡೌನ್‌ ಆಗಿದ್ದು, ಡೇಟಾ ಪರಿಶೀಲನೆ ವೇಳೆ ವಿದೇಶದ ವಿಳಾಸ ಪತ್ತೆಯಾಗಿದೆ.

ಸತತ 8ನೇ ದಿನವೂ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್) ದೆಹಲಿಯ ಸರ್ವರ್ ಕೆಟ್ಟು ನಿಂತಿದೆ. ಇ-ಹಾಸ್ಪಿಟಲ್ ಡೇಟಾವನ್ನು ಮರುಸ್ಥಾಪಿಸಲಾಗಿದ್ದರೂ, ಸೇವೆಗಳನ್ನು ಮರುಸ್ಥಾಪಿಸುವ ಮೊದಲು ನೆಟ್‌ವರ್ಕ್ ಅನ್ನು ಇನ್ನೂ ಸ್ಯಾನಿಟೈಸ್ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಸೈಬರ್ ದಾಳಿಯನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೊರರೋಗಿ, ಒಳರೋಗಿ, ಪ್ರಯೋಗಾಲಯಗಳು ಸೇರಿದಂತೆ ಎಲ್ಲಾ ಆಸ್ಪತ್ರೆ ಸೇವೆಗಳು ಸದ್ಯಕ್ಕೆ ಮ್ಯಾನ್ಯುವಲ್ ಮೋಡ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: Lalu Prasad Yadav: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್​ ಆಸ್ಪತ್ರೆಗೆ ಶಿಫ್ಟ್​

ಇ-ಹಾಸ್ಪಿಟಲ್ ಡೇಟಾವನ್ನು ಸರ್ವರ್‌ಗಳಲ್ಲಿ ಮರುಸ್ಥಾಪಿಸಲಾಗಿದೆ. ಸೇವೆಗಳನ್ನು ಮರುಸ್ಥಾಪಿಸುವ ಮೊದಲು ನೆಟ್‌ವರ್ಕ್ ಅನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಡೇಟಾದ ಪ್ರಮಾಣ ಮತ್ತು ಆಸ್ಪತ್ರೆಯ ಸೇವೆಗಳಿಗೆ ಹೆಚ್ಚಿನ ಸಂಖ್ಯೆಯ ಸರ್ವರ್‌ಗಳು/ಕಂಪ್ಯೂಟರ್‌ಗಳ ಕಾರಣ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಸೈಬರ್ ಭದ್ರತೆಗಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಏಮ್ಸ್​ ಹೇಳಿಕೆ ನೀಡಿದೆ.

ಇದನ್ನೂ ಓದಿ: AIIMS: ಕರ್ನಾಟಕದಲ್ಲಿ ಏಮ್ಸ್​ ಸ್ಥಾಪಿಸಲು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ ಒಪ್ಪಿಗೆ

ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ತನಿಖೆಗೆ ಕೈಜೋಡಿಸಿದೆ. ಇಂಡಿಯಾ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್, ದೆಹಲಿ ಪೊಲೀಸ್, ಇಂಟೆಲಿಜೆನ್ಸ್ ಬ್ಯೂರೋ, ಸಿಬಿಐ ಮತ್ತು ಗೃಹ ಸಚಿವಾಲಯದ ಪ್ರತಿನಿಧಿಗಳು ಈಗಾಗಲೇ ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತನಿಖಾ ಸಂಸ್ಥೆಗಳ ಶಿಫಾರಸುಗಳ ನಂತರ ದೆಹಲಿಯ ಏಮ್ಸ್‌ನಲ್ಲಿ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 am, Wed, 30 November 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!