AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಕೊವಾಕ್ಸಿನ್ ಪ್ರಯೋಗಕ್ಕೆ ಮುಂದಾದ ಏಮ್ಸ್

Covaxin: ದೆಹಲಿಗೆ ಮುಂಚಿತವಾಗಿ ಏಮ್ಸ್ ಪಾಟ್ನಾ ಜೂನ್ 3 ರಿಂದ 12-18 ವರ್ಷದ ಮಕ್ಕಳ ಮೇಲೆ ಕೊವಾಕ್ಸಿನ್‌ ಲಸಿಕೆ ಪ್ರಯೋಗಗಳನ್ನು ಪ್ರಾರಂಭಿಸಿತ್ತು.

6 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಕೊವಾಕ್ಸಿನ್ ಪ್ರಯೋಗಕ್ಕೆ ಮುಂದಾದ ಏಮ್ಸ್
ಕೊವ್ಯಾಕ್ಸಿನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 14, 2021 | 5:35 PM

ದೆಹಲಿ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) 6ರಿಂದ12 ವರ್ಷದೊಳಗಿನ ಮಕ್ಕಳ ಮೇಲೆ ಭಾರತ್ ಬಯೋಟೆಕ್ನ ಕೊವಾಕ್ಸಿನ್ ಕ್ಲಿನಿಕಲ್ ಪ್ರಯೋಗಗಳಿಗಾಗಿ ಮಂಗಳವಾರ ಸ್ಕ್ರೀನಿಂಗ್ ಆರಂಭಿಸಲಿದೆ. “6-12 ವರ್ಷ ವಯಸ್ಸಿನ ಮಕ್ಕಳಲ್ಲಿ ಕೊವಾಕ್ಸಿನ್ ಕ್ಲಿನಿಕಲ್ ಪ್ರಯೋಗಕ್ಕಾಗಿ ಆಯ್ಕೆ ಪ್ರಕ್ರಿಯೆಯು ಮಂಗಳವಾರದಿಂದ ಪ್ರಾರಂಭವಾಗಲಿದೆ” ಎಂದು ಏಮ್ಸ್ ದೆಹಲಿಯ ಸಮುದಾಯ ಔಷಧ ಕೇಂದ್ರದ ಪ್ರೊಫೆಸರ್ ಡಾ.ಸಂಜಯ್ ರೈ ಸೋಮವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 12-18 ವರ್ಷಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಆಯ್ಕೆ ಈಗಾಗಲೇ ಮುಗಿದಿದೆ ಮತ್ತು ಈ ವಯಸ್ಸಿನ ಮಕ್ಕಳಿಗೆ ಲಸಿಕೆಯ ಒಂದೇ ಡೋಸ್ ನೀಡಲಾಗುತ್ತದೆ. 6-12 ವರ್ಷ ವಯಸ್ಸಿನ ಮಕ್ಕಳ ಮೇಲೆ ಪ್ರಯೋಗ ಮುಗಿದ ನಂತರ ಏಮ್ಸ್ ನವದೆಹಲಿ 2 ರಿಂದ 6 ವರ್ಷದ ಮಕ್ಕಳಿಗೆ ಪ್ರಯೋಗಗಳನ್ನು ಪ್ರಾರಂಭಿಸಲಿದೆ.

ದೆಹಲಿಗೆ ಮುಂಚಿತವಾಗಿ ಏಮ್ಸ್ ಪಾಟ್ನಾ ಜೂನ್ 3 ರಿಂದ 12-18 ವರ್ಷದ ಮಕ್ಕಳ ಮೇಲೆ ಕೊವಾಕ್ಸಿನ್‌ ಲಸಿಕೆ ಪ್ರಯೋಗಗಳನ್ನು ಪ್ರಾರಂಭಿಸಿತ್ತು.

ಈ ಪ್ರಯೋಗಗಳ ನಂತರ 6-12 ವಯಸ್ಸಿನ ಮತ್ತು ನಂತರ 2-6 ವಯಸ್ಸಿನ ಮಕ್ಕಳ ಮೇಲೆ ಪ್ರಯೋಗ ಮಾಡಲಾಗುವುದು. ಆದರೆ ಈಗ ನಾವು 12-18 ವರ್ಷ ವಯಸ್ಸಿನವರಲ್ಲಿ ಪ್ರಯೋಗಗಳನ್ನು ಪ್ರಾರಂಭಿಸಿದ್ದೇವೆ ”ಎಂದು ಏಮ್ಸ್ ಪಾಟ್ನಾದ ನಿರ್ದೇಶಕ ಡಾ. ಪ್ರಭಾತ್ ಕುಮಾರ್ ಸಿಂಗ್ ಹೇಳಿದ್ದಾರೆ. ಕಳೆದ ವಾರ 54 ಮಕ್ಕಳು ಪ್ರಯೋಗಗಳಿಗೆ ನೋಂದಾಯಿಸಿಕೊಂಡಿದ್ದು ಅದರಲ್ಲಿ 16 ಮಂದಿ 12-18 ವರ್ಷ ವಯಸ್ಸಿನವರಾಗಿದ್ದಾರೆ.

ಮೇ 12 ರಂದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) 2-18 ವರ್ಷಗಳ ಗುಂಪಿನಲ್ಲಿರುವ ಮಕ್ಕಳಲ್ಲಿ ಕೊವಾಕ್ಸಿನ್‌ನ ಎರಡನೇ ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಅನುಮತಿ ನೀಡಿತು. 12-18 ವರ್ಷ, 6-12 ವರ್ಷ ಮತ್ತು 2-6 ವರ್ಷ ವಯಸ್ಸಿನ ತಲಾ 175 ಸ್ವಯಂಸೇವಕರನ್ನು ಹೊಂದಿರುವ ಮೂರು ಭಾಗಗಳಲ್ಲಿ ಪ್ರಯೋಗ ನಡೆಸಲಾಗುವುದು ಎಂದು ಪಿಟಿಐ ಸೋಮವಾರ ತಿಳಿಸಿದೆ.

ಲಸಿಕೆಯನ್ನು ಇಂಟ್ರಾಮಸ್ಕುಲರ್ ಮಾರ್ಗದಿಂದ ದಿನ 0 ಮತ್ತು 28 ನೇ ದಿನದಲ್ಲಿ ಎರಡು ಡೋಸ್ ನೀಡಲಾಗುತ್ತದೆ. ಪ್ರಯೋಗವು ಮಕ್ಕಳಲ್ಲಿ ಲಸಿಕೆಯ ಸುರಕ್ಷತೆ, ರಿಯಾಕ್ಟೋಜೆನಿಸಿಟಿ ಮತ್ತು ಇಮ್ಯುನೊಜೆನೆಸಿಟಿಯನ್ನು ನಿರ್ಣಯಿಸುತ್ತದೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾವೈರಸ್ ಕಾಯಿಲೆ (ಕೊವಿಡ್ -19) ಮಕ್ಕಳಲ್ಲಿ ಗಂಭೀರ ಪರಿಣಾಮ ಬೀರದೇ ಇದ್ದರೂ ವೈರಸ್ ನಲ್ಲಿ ಬದಲಾವಣೆ ಕಂಡುಬಂದರೆ ವೈರಲ್ ಕಾಯಿಲೆಯ ಪರಿಣಾಮವು ಹೆಚ್ಚಾಗುತ್ತದೆ ಎಂದು ಕೇಂದ್ರವು ಎಚ್ಚರಿಸಿದ ನಂತರ ಮಕ್ಕಳಿಗಾಗಿ ಸಾಮೂಹಿಕ ಇನಾಕ್ಯುಲೇಷನ್ ಡ್ರೈವ್ ಅನ್ನು ಪ್ರಾರಂಭಿಸುವ ನಿರ್ಧಾರವು ಬಂದಿದೆ. ಭಾರತವು ಈವರೆಗೆ 25,48,49,301 ಫಲಾನುಭವಿಗಳಿಗೆ ಕೊರೊನಾವೈರಸ್ ಕಾಯಿಲೆ (ಕೊವಿಡ್ -19) ವಿರುದ್ಧ ಲಸಿಕೆ ನೀಡಿದೆ. ಈ ಪೈಕಿ ಸುಮಾರು 1.5 ದಶಲಕ್ಷ ಫಲಾನುಭವಿಗಳಿಗೆ ಕಳೆದ 24 ಗಂಟೆಗಳಲ್ಲಿ ಚುಚ್ಚುಮದ್ದು ನೀಡಲಾಗಿದೆ. ಸೋಮವಾರ, ದೇಶವು 70,421 ಹೊಸ ಪ್ರಕರಣಗಳನ್ನು ಕಂಡಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 29,510,410 ಕ್ಕೆ ಏರಿದೆ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ ಕೊವಿಡ್ ಪ್ರಕರಣ ಇಳಿಮುಖ, 70421 ಹೊಸ ಕೊರೊನಾವೈರಸ್ ಸೋಂಕು ಪ್ರಕರಣ ದಾಖಲು

(AIIMS Delhi Tuesday begin screening children in the age group of 6-12 years for the clinical trials of Covaxin)

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ