AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರವಲ್ಲದ ಕೊವಿಡ್ ಪ್ರಕರಣಗಳಿಗೆ ಸಿಟಿ ಸ್ಕ್ಯಾನ್ ಅಗತ್ಯವಿಲ್ಲ, ಅತಿಯಾದ ಸಿಟಿ ಸ್ಕ್ಯಾನ್ ಕ್ಯಾನ್ಸರ್​ಗೆ ಆಹ್ವಾನವಿತ್ತಂತೆ : ಏಮ್ಸ್ ನಿರ್ದೇಶಕ

CT scan: ಒಂದು ಸಿಟಿ ಸ್ಕ್ಯಾನ್ ಎದೆಗೆ ಮಾಡಿಸುವ 300-400 ಎಕ್ಸ್ ರೇ (Chest X-rays)ಗಳಿಗೆ ಸಮ. ಮಾಹಿತಿಗಳ ಪ್ರಕಾರ ಯುವಜವರು ಪದೇ ಪದೇ ಸಿಟಿ ಸ್ಕ್ಯಾನ್ ಮಾಡಿಸಿಕೊಂಡರೆ ಕ್ಯಾನ್ಸರ್​ಗೆ ಆಹ್ವಾನ ನೀಡಿದಂತೆ. ವಿಕಿರಣಗಳಿಗೆ ಪದೇ ಪದೇ ತೆರೆದುಕೊಳ್ಳುವುದರಿಂದ ಹಾನಿ ಸಂಭವಿಸುತ್ತದೆ.

ತೀವ್ರವಲ್ಲದ ಕೊವಿಡ್ ಪ್ರಕರಣಗಳಿಗೆ ಸಿಟಿ ಸ್ಕ್ಯಾನ್ ಅಗತ್ಯವಿಲ್ಲ, ಅತಿಯಾದ ಸಿಟಿ ಸ್ಕ್ಯಾನ್ ಕ್ಯಾನ್ಸರ್​ಗೆ ಆಹ್ವಾನವಿತ್ತಂತೆ : ಏಮ್ಸ್ ನಿರ್ದೇಶಕ
ಡಾ.ರಣದೀಪ್ ಗುಲೇರಿಯಾ
ರಶ್ಮಿ ಕಲ್ಲಕಟ್ಟ
|

Updated on:May 04, 2021 | 6:46 PM

Share

ದೆಹಲಿ: ತೀವ್ರವಲ್ಲದ ಕೊವಿಡ್-19 ಪ್ರಕರಗಳಿಗೆ ಪದೇ ಪದೇ ಸಿಟಿ ಸ್ಕ್ಯಾನ್ ಮಾಡುವುದು ಒಳ್ಳೆಯದಲ್ಲ. ಇದರಿಂದ ಆರೋಗ್ಯಕ್ಕೆ ಹೆಚ್ಚಿನ ಕೆಡುಕು ಉಂಟಾಗುತ್ತದೆ ಎಂದು ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ.ಕೊವಿಡ್ ಪಾಸಿಟಿವ್ ಎಂದು ತಿಳಿದ ಕೂಡಲೇ ಜನರು ಸಿಟಿ ಸ್ಕ್ಯಾನ್ ಮಾಡಿಸಲು ಮುಂದಾಗುತ್ತಾರೆ. ಇದು ಸಿಟಿ ಸ್ಕ್ಯಾನ್​ನ ದುರ್ಬಳಕೆ ಮತ್ತು ಇದರಿಂದ ಬಯೋಮಾರ್ಕರ್​ಗೆ ಹಾನಿಯಾಗುತ್ತದೆ ಎಂದು ಹೇಳಿದ್ದಾರೆ.

ಒಂದು ಸಿಟಿ ಸ್ಕ್ಯಾನ್ ಎದೆಗೆ ಮಾಡಿಸುವ 300-400 ಎಕ್ಸ್ ರೇ (Chest X-rays)ಗಳಿಗೆ ಸಮ. ಮಾಹಿತಿಗಳ ಪ್ರಕಾರ ಯುವಜವರು ಪದೇ ಪದೇ ಸಿಟಿ ಸ್ಕ್ಯಾನ್ ಮಾಡಿಸಿಕೊಂಡರೆ ಕ್ಯಾನ್ಸರ್​ಗೆ ಆಹ್ವಾನ ನೀಡಿದಂತೆ. ವಿಕಿರಣಗಳಿಗೆ ಪದೇ ಪದೇ ತೆರೆದುಕೊಳ್ಳುವುದರಿಂದ ಹಾನಿ ಸಂಭವಿಸುತ್ತದೆ. ಆಕ್ಸಿಜನ್ ಸ್ಯಾಚುರೇಷನ್ ನಾರ್ಮಲ್ ಆಗಿದ್ದು , ತೀವ್ರವಲ್ಲದ ಕೊವಿಡ್ ಆಗಿದ್ದರೆ ಸಿಟಿ ಸ್ಕ್ಯಾನ್ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ ಗುಲೇರಿಯಾ.

ಅಧ್ಯಯನ ವರದಿಯೊಂದನ್ನು  ಉಲ್ಲೇಖಿಸಿದ ಗುಲೇರಿಯಾ, ತೀವ್ರವಲ್ಲದ ಕೊವಿಡ್ ಮತ್ತು ಲಕ್ಷಣಗಳಿಲ್ಲ ರೋಗ ಸಂದರ್ಭಗಳಲ್ಲಿ ಸಿಟಿ ಸ್ಕ್ಯಾನ್ ಮಾಡಿದರೆ ಪ್ಯಾಚೆಸ್ (ಶ್ವಾಸಕೋಶದಲ್ಲಿನ ಸೋಂಕಿನ ಗುರುತು) ಕಂಡು ಬರಬಹುದು. ಚಿಕಿತ್ಸೆ ಇಲ್ಲದೆಯೂ ಅವು ತಾವಾಗಿಯೇ ಗುಣವಾಗುತ್ತದೆ. ಆಸ್ಪತ್ರೆಗೆ ದಾಖಲಾದಾಗ ಸಿಟಿ ಸ್ಕ್ಯಾನ್‌ಗಳನ್ನು ಮಾಡಬಹುದು ಎಂದು ಅವರು ಸಲಹೆ ನೀಡಿದರೆ, ಜನರಿಗೆ ಅನುಮಾನವಿದ್ದರೆ ಅವರು ಎದೆಯ ಎಕ್ಸ್ ರೇ ಮಾಡಿಸಬಹುದು.

ಒಂದು ರೋಗ ಅಥವಾ ಸ್ಥಿತಿಯ ಚಿಕಿತ್ಸೆಗೆ ದೇಹವು ಎಷ್ಟು ಚೆನ್ನಾಗಿ ಪ್ರತಿಕ್ರಿಯಿಸುತ್ತದೆ ಎಂಬುದನ್ನು ನೋಡಲು ಬಳಸುವ ಬಯೋಮಾರ್ಕರ್‌ಗಳ ಬಗ್ಗೆ ಮಾತನಾಡಿದ ಗುಲೇರಿಯಾ, ಒಬ್ಬ ವ್ಯಕ್ತಿಗೆ ತೀವ್ರವಲ್ಲದ ಕೊವಿಡ್ ಇದ್ದರೆರಕ್ತ ಪರೀಕ್ಷೆಗಳಿಗೆ ಹೋಗಬೇಕಾದ ಅಗತ್ಯವಿಲ್ಲ. ಸಿಪಿಸಿ ಅಥವಾ ಎಲ್‌ಡಿಹೆಚ್ ಇವು ಆತಂಕ ಸೃಷ್ಟಿಸುತ್ತವೆ. ಈ ಬಯೋಮಾರ್ಕರ್‌ಗಳು ತೀವ್ರ ಹಂತದ ಪ್ರತಿಕ್ರಿಯಾಕಾರಿಗಳಾಗಿದ್ದು ಅದು ನಿಮ್ಮ ದೇಹದಲ್ಲಿ ಉರಿಯೂತ ಹೆಚ್ಚು ಮಾಡುತ್ತವೆ. ಅಧಿಕ ಸ್ಟಿರಾಯ್ಡ್‌ ಸೇವನೆಯಿಂದ ವೈರಲ್‌ ನ್ಯುಮೋನಿಯಾಗೆ ಕಾರಣವಾಗಬಹುದು ಎಂದು ಗುಲೇರಿಯಾ ಎಚ್ಚರಿಸಿದ್ದಾರೆ.

ಕೆಲವು ರೋಗಿಗಳು ರೋಗದ ಆರಂಭದಲ್ಲಿ ಸ್ಟಿರಾಯ್ಡ್​ಗಳನ್ನು ತೆಗೆದುಕೊಳ್ಳುತ್ತಾರೆ, ಇದು ವೈರಲ್ ದ್ವಿಗುಣವಾಗಿಸುತ್ತದೆ. ತೀವ್ರವಲ್ಲದ ಕೊವಿಡ್ ರೋಗವಾಗಿದ್ದರೆ ಹೆಚ್ಚಿನ ಪ್ರಮಾಣದ ಸ್ಟಿರಾಯ್ಡ್ ತೆಗೆದುಕೊಳ್ಳುವುದರಿಂದ ತೀವ್ರವಾದ ವೈರಲ್ ನ್ಯುಮೋನಿಯಾಕ್ಕೆ ಕಾರಣವಾಗಬಹುದು. ಸ್ಟಿರಾಯ್ಡ್ ಮಧ್ಯಮ ಹಂತದಲ್ಲಿ ಮತ್ತು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು ಎಂದು ಗುಲೇರಿಯಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Karnataka Covid Curfew: ಮೇ 22ರವರೆಗೂ ಕರ್ನಾಟಕದಲ್ಲಿ ಕೊವಿಡ್ ಕರ್ಫ್ಯೂ; ಸಿಎಂ ಯಡಿಯೂರಪ್ಪ ಘೋಷಣೆ

ಸಿಟಿ ಸ್ಕ್ಯಾನ್, ರಕ್ತ ತಪಾಸಣೆ, ಸ್ಟೀರಾಯ್ಡ್ ಯಾವಾಗ ಅಗತ್ಯ?-ಅಪಾಯದ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ ಏಮ್ಸ್​ ನಿರ್ದೇಶಕ

Published On - 6:44 pm, Tue, 4 May 21

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು