AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 17, 2021 | 3:25 PM

Share

ದೆಹಲಿ: ಕೋವಿಡ್​-19 ಲಸಿಕೆ ಪಡೆದ ದೆಹಲಿಯ ಏಮ್ಸ್​ನ ಸೆಕ್ಯುರಿಟಿ ಗಾರ್ಡ್​ ತೀವ್ರ ಅಲರ್ಜಿಗೆ ಒಳಗಾಗಿದ್ದಾರೆ. ಗಂಭೀರ ಪ್ರಮಾಣದ ಅಲರ್ಜಿಯಾದ ಅನಾಫಿಲಾಕ್ಸಿಸ್​ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇದ್ದರೆ, ಇದರಿಂದ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುತ್ತದೆ ಎನ್ನಲಾಗಿದೆ.

ಈ 20 ವರ್ಷದ ಸೆಕ್ಯೂರಿಟಿ ಗಾರ್ಡ್​ನನ್ನು ಸದ್ಯ ಏಮ್ಸ್​ ​(AIIMS) ಅಬ್ಸರ್ವೇಶನ್​ನಲ್ಲಿ ಇಡಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ನಿನ್ನೆಯಿಂದ (ಜ.16) ದೇಶಾದ್ಯಂತ ಕೊವಿಡ್​-19 ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳನ್ನು ಕೊಡಲಾಗುತ್ತಿದೆ. ಈ ಸೆಕ್ಯೂರಿಟಿ ಗಾರ್ಡ್​ ನಿನ್ನೆ ಕೊವ್ಯಾಕ್ಸಿನ್​ ಲಸಿಕೆಯನ್ನು ಪಡೆದಿದ್ದರು. ಲಸಿಕೆ ಪಡೆದ ಕೆಲವೇ ಹೊತ್ತಲ್ಲಿ ಅಲರ್ಜಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ್ದು, ಸದ್ಯ 12 ರಾಜ್ಯಗಳಿಗೆ ವಿತರಣೆ ಮಾಡಲಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 4319 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್​ 19 ಲಸಿಕೆ ನೀಡಿದ್ದಾಗಿ ಸ್ಥಳೀಯ ಆರೋಗ್ಯ ಇಲಾಖೆ ತಿಳಿಸಿದೆ.

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ