AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 17, 2021 | 3:25 PM

Share

ದೆಹಲಿ: ಕೋವಿಡ್​-19 ಲಸಿಕೆ ಪಡೆದ ದೆಹಲಿಯ ಏಮ್ಸ್​ನ ಸೆಕ್ಯುರಿಟಿ ಗಾರ್ಡ್​ ತೀವ್ರ ಅಲರ್ಜಿಗೆ ಒಳಗಾಗಿದ್ದಾರೆ. ಗಂಭೀರ ಪ್ರಮಾಣದ ಅಲರ್ಜಿಯಾದ ಅನಾಫಿಲಾಕ್ಸಿಸ್​ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇದ್ದರೆ, ಇದರಿಂದ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುತ್ತದೆ ಎನ್ನಲಾಗಿದೆ.

ಈ 20 ವರ್ಷದ ಸೆಕ್ಯೂರಿಟಿ ಗಾರ್ಡ್​ನನ್ನು ಸದ್ಯ ಏಮ್ಸ್​ ​(AIIMS) ಅಬ್ಸರ್ವೇಶನ್​ನಲ್ಲಿ ಇಡಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ನಿನ್ನೆಯಿಂದ (ಜ.16) ದೇಶಾದ್ಯಂತ ಕೊವಿಡ್​-19 ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳನ್ನು ಕೊಡಲಾಗುತ್ತಿದೆ. ಈ ಸೆಕ್ಯೂರಿಟಿ ಗಾರ್ಡ್​ ನಿನ್ನೆ ಕೊವ್ಯಾಕ್ಸಿನ್​ ಲಸಿಕೆಯನ್ನು ಪಡೆದಿದ್ದರು. ಲಸಿಕೆ ಪಡೆದ ಕೆಲವೇ ಹೊತ್ತಲ್ಲಿ ಅಲರ್ಜಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ್ದು, ಸದ್ಯ 12 ರಾಜ್ಯಗಳಿಗೆ ವಿತರಣೆ ಮಾಡಲಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 4319 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್​ 19 ಲಸಿಕೆ ನೀಡಿದ್ದಾಗಿ ಸ್ಥಳೀಯ ಆರೋಗ್ಯ ಇಲಾಖೆ ತಿಳಿಸಿದೆ.

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

Follow Us
Lakshmi Hegde
Lakshmi Hegde
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ