AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 17, 2021 | 3:25 PM

Share

ದೆಹಲಿ: ಕೋವಿಡ್​-19 ಲಸಿಕೆ ಪಡೆದ ದೆಹಲಿಯ ಏಮ್ಸ್​ನ ಸೆಕ್ಯುರಿಟಿ ಗಾರ್ಡ್​ ತೀವ್ರ ಅಲರ್ಜಿಗೆ ಒಳಗಾಗಿದ್ದಾರೆ. ಗಂಭೀರ ಪ್ರಮಾಣದ ಅಲರ್ಜಿಯಾದ ಅನಾಫಿಲಾಕ್ಸಿಸ್​ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇದ್ದರೆ, ಇದರಿಂದ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುತ್ತದೆ ಎನ್ನಲಾಗಿದೆ.

ಈ 20 ವರ್ಷದ ಸೆಕ್ಯೂರಿಟಿ ಗಾರ್ಡ್​ನನ್ನು ಸದ್ಯ ಏಮ್ಸ್​ ​(AIIMS) ಅಬ್ಸರ್ವೇಶನ್​ನಲ್ಲಿ ಇಡಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ನಿನ್ನೆಯಿಂದ (ಜ.16) ದೇಶಾದ್ಯಂತ ಕೊವಿಡ್​-19 ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳನ್ನು ಕೊಡಲಾಗುತ್ತಿದೆ. ಈ ಸೆಕ್ಯೂರಿಟಿ ಗಾರ್ಡ್​ ನಿನ್ನೆ ಕೊವ್ಯಾಕ್ಸಿನ್​ ಲಸಿಕೆಯನ್ನು ಪಡೆದಿದ್ದರು. ಲಸಿಕೆ ಪಡೆದ ಕೆಲವೇ ಹೊತ್ತಲ್ಲಿ ಅಲರ್ಜಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ್ದು, ಸದ್ಯ 12 ರಾಜ್ಯಗಳಿಗೆ ವಿತರಣೆ ಮಾಡಲಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 4319 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್​ 19 ಲಸಿಕೆ ನೀಡಿದ್ದಾಗಿ ಸ್ಥಳೀಯ ಆರೋಗ್ಯ ಇಲಾಖೆ ತಿಳಿಸಿದೆ.

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ