AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 17, 2021 | 3:25 PM

Share

ದೆಹಲಿ: ಕೋವಿಡ್​-19 ಲಸಿಕೆ ಪಡೆದ ದೆಹಲಿಯ ಏಮ್ಸ್​ನ ಸೆಕ್ಯುರಿಟಿ ಗಾರ್ಡ್​ ತೀವ್ರ ಅಲರ್ಜಿಗೆ ಒಳಗಾಗಿದ್ದಾರೆ. ಗಂಭೀರ ಪ್ರಮಾಣದ ಅಲರ್ಜಿಯಾದ ಅನಾಫಿಲಾಕ್ಸಿಸ್​ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇದ್ದರೆ, ಇದರಿಂದ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುತ್ತದೆ ಎನ್ನಲಾಗಿದೆ.

ಈ 20 ವರ್ಷದ ಸೆಕ್ಯೂರಿಟಿ ಗಾರ್ಡ್​ನನ್ನು ಸದ್ಯ ಏಮ್ಸ್​ ​(AIIMS) ಅಬ್ಸರ್ವೇಶನ್​ನಲ್ಲಿ ಇಡಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ನಿನ್ನೆಯಿಂದ (ಜ.16) ದೇಶಾದ್ಯಂತ ಕೊವಿಡ್​-19 ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳನ್ನು ಕೊಡಲಾಗುತ್ತಿದೆ. ಈ ಸೆಕ್ಯೂರಿಟಿ ಗಾರ್ಡ್​ ನಿನ್ನೆ ಕೊವ್ಯಾಕ್ಸಿನ್​ ಲಸಿಕೆಯನ್ನು ಪಡೆದಿದ್ದರು. ಲಸಿಕೆ ಪಡೆದ ಕೆಲವೇ ಹೊತ್ತಲ್ಲಿ ಅಲರ್ಜಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ್ದು, ಸದ್ಯ 12 ರಾಜ್ಯಗಳಿಗೆ ವಿತರಣೆ ಮಾಡಲಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 4319 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್​ 19 ಲಸಿಕೆ ನೀಡಿದ್ದಾಗಿ ಸ್ಥಳೀಯ ಆರೋಗ್ಯ ಇಲಾಖೆ ತಿಳಿಸಿದೆ.

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ