AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು
ಪ್ರಾತಿನಿಧಿಕ ಚಿತ್ರ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 17, 2021 | 3:25 PM

Share

ದೆಹಲಿ: ಕೋವಿಡ್​-19 ಲಸಿಕೆ ಪಡೆದ ದೆಹಲಿಯ ಏಮ್ಸ್​ನ ಸೆಕ್ಯುರಿಟಿ ಗಾರ್ಡ್​ ತೀವ್ರ ಅಲರ್ಜಿಗೆ ಒಳಗಾಗಿದ್ದಾರೆ. ಗಂಭೀರ ಪ್ರಮಾಣದ ಅಲರ್ಜಿಯಾದ ಅನಾಫಿಲಾಕ್ಸಿಸ್​ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇದ್ದರೆ, ಇದರಿಂದ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುತ್ತದೆ ಎನ್ನಲಾಗಿದೆ.

ಈ 20 ವರ್ಷದ ಸೆಕ್ಯೂರಿಟಿ ಗಾರ್ಡ್​ನನ್ನು ಸದ್ಯ ಏಮ್ಸ್​ ​(AIIMS) ಅಬ್ಸರ್ವೇಶನ್​ನಲ್ಲಿ ಇಡಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ನಿನ್ನೆಯಿಂದ (ಜ.16) ದೇಶಾದ್ಯಂತ ಕೊವಿಡ್​-19 ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳನ್ನು ಕೊಡಲಾಗುತ್ತಿದೆ. ಈ ಸೆಕ್ಯೂರಿಟಿ ಗಾರ್ಡ್​ ನಿನ್ನೆ ಕೊವ್ಯಾಕ್ಸಿನ್​ ಲಸಿಕೆಯನ್ನು ಪಡೆದಿದ್ದರು. ಲಸಿಕೆ ಪಡೆದ ಕೆಲವೇ ಹೊತ್ತಲ್ಲಿ ಅಲರ್ಜಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ್ದು, ಸದ್ಯ 12 ರಾಜ್ಯಗಳಿಗೆ ವಿತರಣೆ ಮಾಡಲಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 4319 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್​ 19 ಲಸಿಕೆ ನೀಡಿದ್ದಾಗಿ ಸ್ಥಳೀಯ ಆರೋಗ್ಯ ಇಲಾಖೆ ತಿಳಿಸಿದೆ.

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು