AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದ ಏಮ್ಸ್ ಸೆಕ್ಯೂರಿಟಿ ಗಾರ್ಡ್​ಗೆ ತೀವ್ರ ಅಲರ್ಜಿ; ಚಿಕಿತ್ಸೆ ನೀಡುತ್ತಿರುವ ವೈದ್ಯರು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 17, 2021 | 3:25 PM

Share

ದೆಹಲಿ: ಕೋವಿಡ್​-19 ಲಸಿಕೆ ಪಡೆದ ದೆಹಲಿಯ ಏಮ್ಸ್​ನ ಸೆಕ್ಯುರಿಟಿ ಗಾರ್ಡ್​ ತೀವ್ರ ಅಲರ್ಜಿಗೆ ಒಳಗಾಗಿದ್ದಾರೆ. ಗಂಭೀರ ಪ್ರಮಾಣದ ಅಲರ್ಜಿಯಾದ ಅನಾಫಿಲಾಕ್ಸಿಸ್​ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇದ್ದರೆ, ಇದರಿಂದ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುತ್ತದೆ ಎನ್ನಲಾಗಿದೆ.

ಈ 20 ವರ್ಷದ ಸೆಕ್ಯೂರಿಟಿ ಗಾರ್ಡ್​ನನ್ನು ಸದ್ಯ ಏಮ್ಸ್​ ​(AIIMS) ಅಬ್ಸರ್ವೇಶನ್​ನಲ್ಲಿ ಇಡಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ನಿನ್ನೆಯಿಂದ (ಜ.16) ದೇಶಾದ್ಯಂತ ಕೊವಿಡ್​-19 ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳನ್ನು ಕೊಡಲಾಗುತ್ತಿದೆ. ಈ ಸೆಕ್ಯೂರಿಟಿ ಗಾರ್ಡ್​ ನಿನ್ನೆ ಕೊವ್ಯಾಕ್ಸಿನ್​ ಲಸಿಕೆಯನ್ನು ಪಡೆದಿದ್ದರು. ಲಸಿಕೆ ಪಡೆದ ಕೆಲವೇ ಹೊತ್ತಲ್ಲಿ ಅಲರ್ಜಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ್ದು, ಸದ್ಯ 12 ರಾಜ್ಯಗಳಿಗೆ ವಿತರಣೆ ಮಾಡಲಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 4319 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್​ 19 ಲಸಿಕೆ ನೀಡಿದ್ದಾಗಿ ಸ್ಥಳೀಯ ಆರೋಗ್ಯ ಇಲಾಖೆ ತಿಳಿಸಿದೆ.

ಕೊವ್ಯಾಕ್ಸಿನ್​ಗೆ ಅನುಮೋದನೆ ಸಿಗುತ್ತಿದ್ದಂತೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಲಸಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕ್ಲಿನಿಕಲ್​ ಟ್ರಯಲ್​ ಮುಗಿಸಿಲ್ಲ. ಆಗಲೇ ಬಳಕೆಗೂ ಅನುಮತಿ ನೀಡಿದೆ. ನಾಳೆ ಇದರಿಂದ ಜನರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಹಲವು ನಾಯಕರು ಪ್ರಶ್ನಿಸಿದ್ದರು.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ