AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ.  ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು […]

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ
ಏಮ್ಸ್​ ವಿದ್ಯಾರ್ಥಿಗಳ ರಾಮಾಯಣ ಸ್ಕಿಟ್​ ಪ್ರದರ್ಶನ
TV9 Web
| Edited By: |

Updated on: Oct 17, 2021 | 5:14 PM

Share

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ. 

ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದರು. ಅದರಲ್ಲಿ ಶೂರ್ಫನಖಿಯ ಪಾತ್ರವನ್ನು ತುಂಬ ಆಧುನಿಕವಾಗಿ ರೂಪಿಸಲಾಗಿತ್ತು. ಆಕೆ ತ್ರೀಫೋರ್ಥ್ ಪ್ಯಾಂಟ್​ ಹಾಕಿಕೊಂಡು ನಟಿಸಿದ್ದಳು. ತೂ ಚೀಜ್​ ಬಡಿ ಹೈ ಮಸ್ತ್​ ಮಸ್ತ್​ ಎಂಬ ಹಾಡನ್ನು ಲಕ್ಷ್ಮಣನನ್ನು ಉಲ್ಲೇಖಿಸಿ ಹಾಡಿದ್ದಳು. ಅದಾದ ಬಳಿಕ ಲಕ್ಷ್ಮಣ ಶೂರ್ಪನಖಿ ಮೂಗನ್ನು ಕತ್ತರಿಸಿದ್ದ. ನನ್ನ ಸಹೋದರ ಯಾರೆಂದು ನಿನಗೆ ತಿಳಿದಿಲ್ಲವೇ ಎಂದು ಆಕೆ ಪ್ರಶ್ನಿಸುವಂತೆ ಸ್ಕಿಟ್ ಸಾಗಿದೆ. ಆದರೆ ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬಳಿಕ ನೆಟ್ಟಿಗರು ಅದನ್ನು ಮೆಚ್ಚಿಕೊಳ್ಳಲಿಲ್ಲ. ರಾಮಲೀಲಾಕ್ಕೆ ಹಾಸ್ಯದ ಸ್ಪರ್ಶ ಕೊಡಲು ಹೋಗಿ ಹಿಂದುಗಳ ಭಾವನೆಗೆ ಧಕ್ಕೆ ಮಾಡಲಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂದಹಾಗೆ ಈ ಶೋವನ್ನು ಎಂಬಿಬಿಎಸ್​ ವಿದ್ಯಾರ್ಥಿ ಸೋಯೆಬ್​ ಅಫ್ತಾಬ್​ ಹೋಸ್ಟ್​ ಮಾಡಿದ್ದ..ಶೈಕ್ಷಣಿಕ ಆ್ಯಪ್​​ವೊಂದು ಇದನ್ನು ಪ್ರಾಯೋಜಿಸಿತ್ತು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?

‘ತಾಳಿ ಕಟ್ಟುವಾಗಲೇ ಹೆಂಡತಿ ಮುಖ ನೋಡಿದ್ದು’: ಹಿರಿಯ ನಟ ದೊಡ್ಡಣ್ಣ ಮದುವೆಯ ರಿಯಲ್​ ಸ್ಟೋರಿ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ