AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. […]

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 24, 2020 | 4:57 PM

Share

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ.

ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಗುಲಾಮ್‌ ನಬಿ ಆಜಾದ್‌ ನಮಗೆ ಬಿಜೆಪಿ ‘ಬಿ’ ಟೀಮ್‌ ಎಂದು ಮೂದಲಿಸಿದ್ದರು. ಈಗ ಅವರೇ ಬಿಜೆಪಿ ಜತೆ ಶಾಮಿಲಾಗಿದ್ದಾರೆಂದು ಅವರ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಅಷ್ಟೇ ಅಲ್ಲ ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡುತ್ತೀರಿ ಎಂದು ಕಾಂಗ್ರೆಸ್‌ ಪಕ್ಷದ ಮುಸ್ಲಿಂ ನಾಯಕರಿಗೆ ಓವೈಸಿ ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್‌ ಪಕ್ಷದಲ್ಲಿ ಮುಂದುವರಿಯುವ ಬಗ್ಗೆ ಮುಸ್ಲಿಂ ನಾಯಕರು ಚಿಂತಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದ್ರೆ ಈ ನಡುವೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಗುಲಾಮ್‌ ನಬಿ ಆಜಾದ್‌, ರಾಹುಲ್‌ ಗಾಂಧಿ ಹಾಗೇ ಹೇಳಿಲ್ಲ. ಇಂತಹ ಮಾತುಗಳೇ ಕಾಂಗ್ರೆಸ್‌ ಕಾರ್ಯಕಾರಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ವಿವಾದಕ್ಕೆ ತೇಪೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ