AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. […]

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ
Guru
| Edited By: |

Updated on: Aug 24, 2020 | 4:57 PM

Share

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ.

ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಗುಲಾಮ್‌ ನಬಿ ಆಜಾದ್‌ ನಮಗೆ ಬಿಜೆಪಿ ‘ಬಿ’ ಟೀಮ್‌ ಎಂದು ಮೂದಲಿಸಿದ್ದರು. ಈಗ ಅವರೇ ಬಿಜೆಪಿ ಜತೆ ಶಾಮಿಲಾಗಿದ್ದಾರೆಂದು ಅವರ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಅಷ್ಟೇ ಅಲ್ಲ ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡುತ್ತೀರಿ ಎಂದು ಕಾಂಗ್ರೆಸ್‌ ಪಕ್ಷದ ಮುಸ್ಲಿಂ ನಾಯಕರಿಗೆ ಓವೈಸಿ ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್‌ ಪಕ್ಷದಲ್ಲಿ ಮುಂದುವರಿಯುವ ಬಗ್ಗೆ ಮುಸ್ಲಿಂ ನಾಯಕರು ಚಿಂತಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದ್ರೆ ಈ ನಡುವೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಗುಲಾಮ್‌ ನಬಿ ಆಜಾದ್‌, ರಾಹುಲ್‌ ಗಾಂಧಿ ಹಾಗೇ ಹೇಳಿಲ್ಲ. ಇಂತಹ ಮಾತುಗಳೇ ಕಾಂಗ್ರೆಸ್‌ ಕಾರ್ಯಕಾರಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ವಿವಾದಕ್ಕೆ ತೇಪೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!