AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. […]

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ
Guru
| Edited By: |

Updated on: Aug 24, 2020 | 4:57 PM

Share

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ.

ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಗುಲಾಮ್‌ ನಬಿ ಆಜಾದ್‌ ನಮಗೆ ಬಿಜೆಪಿ ‘ಬಿ’ ಟೀಮ್‌ ಎಂದು ಮೂದಲಿಸಿದ್ದರು. ಈಗ ಅವರೇ ಬಿಜೆಪಿ ಜತೆ ಶಾಮಿಲಾಗಿದ್ದಾರೆಂದು ಅವರ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಅಷ್ಟೇ ಅಲ್ಲ ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡುತ್ತೀರಿ ಎಂದು ಕಾಂಗ್ರೆಸ್‌ ಪಕ್ಷದ ಮುಸ್ಲಿಂ ನಾಯಕರಿಗೆ ಓವೈಸಿ ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್‌ ಪಕ್ಷದಲ್ಲಿ ಮುಂದುವರಿಯುವ ಬಗ್ಗೆ ಮುಸ್ಲಿಂ ನಾಯಕರು ಚಿಂತಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದ್ರೆ ಈ ನಡುವೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಗುಲಾಮ್‌ ನಬಿ ಆಜಾದ್‌, ರಾಹುಲ್‌ ಗಾಂಧಿ ಹಾಗೇ ಹೇಳಿಲ್ಲ. ಇಂತಹ ಮಾತುಗಳೇ ಕಾಂಗ್ರೆಸ್‌ ಕಾರ್ಯಕಾರಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ವಿವಾದಕ್ಕೆ ತೇಪೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!