AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ

ಈ ರಥಯಾತ್ರೆಯಿಂದ ಕೋಮು ಸೌಹಾರ್ದತೆ ಹಾಳಾಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್​ ಬಿಜೆಪಿ ರಥಯಾತ್ರೆಗೆ ಸಮ್ಮತಿಸಿದೆ

ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ
ರಥಯಾತ್ರೆಗೆ ಸಿದ್ಧವಾಗಿರುವ ಬಿಜೆಪಿ ವಾಹನ
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 6:34 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎನ್ನುವ ಹಟಕ್ಕೆ ಬಿಜೆಪಿ ಬಿದ್ದಿದೆ. ದೊಡ್ಡದೊಡ್ಡ ರೋಡ್​ಶೋಗಳನ್ನು ಬಿಜೆಪಿ ನಡೆಸುತ್ತಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಪಶ್ಚಿಮ ಬಂಗಾಳದ ಐದು ಕಡೆಗಳಲ್ಲಿ ರಥಯಾತ್ರೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಫೆಬ್ರವರಿ 6ರಂದು ಪಶ್ಚಿಮ ಬಂಗಾಳದ ನವದ್ವೀಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಫೆಬ್ರವರಿ 11ರಂದು ಕೂಚ್​ ಬೇಹರ್​ನಲ್ಲಿ ಈ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಉಳಿದ ಮೂರು ರಥಯಾತ್ರೆಗಳನ್ನು ಜಾರ್ಗ್ರಾಮ್, ಕಾಕ್​ದ್ವೀಪ್ ಮತ್ತು ತಾರಪಿತ್​​ನಲ್ಲಿ ಪ್ರಾರಂಭಿಸಲಾಗುತ್ತಿದೆ. ಒಟ್ಟು 25 ದಿನ ರಥಯಾತ್ರೆ ನಡೆಯಲಿದ್ದು, 294 ಕ್ಷೇತ್ರಗಳನ್ನು ರಥಯಾತ್ರೆ ಕ್ರಮಿಸಲಿದೆ.

ಇನ್ನು,ಈ ರಥಯಾತ್ರೆಗೆ ಅಪಸ್ವರ ಕೇಳಿ ಬಂದಿತ್ತು. ಈ ರಥಯಾತ್ರೆಯಿಂದ ಕೋಮು ಸೌಹಾರ್ದತೆ ಹಾಳಾಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್​ ಬಿಜೆಪಿ ರಥಯಾತ್ರೆಗೆ ಸಮ್ಮತಿಸಿದೆ.

ವಿರೋಧ ಪಕ್ಷದವರಿಗೆ ಜನರ ಬಳಿ ಹೋಗಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ಆದರೆ, ಮಮತಾ ಬ್ಯಾನರ್ಜಿ ಸರ್ಕಾರ ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಕೈಲಾಶ್​ ವಿಜಯವಾರ್ಗೀಯ ಹೇಳಿದ್ದಾರೆ.

Mamata Banerjee ಚುನಾವಣಾ ಟೆನ್ಷನ್​ ಮರೆತು ನೃತ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ