AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ

ಈ ರಥಯಾತ್ರೆಯಿಂದ ಕೋಮು ಸೌಹಾರ್ದತೆ ಹಾಳಾಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್​ ಬಿಜೆಪಿ ರಥಯಾತ್ರೆಗೆ ಸಮ್ಮತಿಸಿದೆ

ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ
ರಥಯಾತ್ರೆಗೆ ಸಿದ್ಧವಾಗಿರುವ ಬಿಜೆಪಿ ವಾಹನ
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 6:34 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎನ್ನುವ ಹಟಕ್ಕೆ ಬಿಜೆಪಿ ಬಿದ್ದಿದೆ. ದೊಡ್ಡದೊಡ್ಡ ರೋಡ್​ಶೋಗಳನ್ನು ಬಿಜೆಪಿ ನಡೆಸುತ್ತಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಪಶ್ಚಿಮ ಬಂಗಾಳದ ಐದು ಕಡೆಗಳಲ್ಲಿ ರಥಯಾತ್ರೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಫೆಬ್ರವರಿ 6ರಂದು ಪಶ್ಚಿಮ ಬಂಗಾಳದ ನವದ್ವೀಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಫೆಬ್ರವರಿ 11ರಂದು ಕೂಚ್​ ಬೇಹರ್​ನಲ್ಲಿ ಈ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಉಳಿದ ಮೂರು ರಥಯಾತ್ರೆಗಳನ್ನು ಜಾರ್ಗ್ರಾಮ್, ಕಾಕ್​ದ್ವೀಪ್ ಮತ್ತು ತಾರಪಿತ್​​ನಲ್ಲಿ ಪ್ರಾರಂಭಿಸಲಾಗುತ್ತಿದೆ. ಒಟ್ಟು 25 ದಿನ ರಥಯಾತ್ರೆ ನಡೆಯಲಿದ್ದು, 294 ಕ್ಷೇತ್ರಗಳನ್ನು ರಥಯಾತ್ರೆ ಕ್ರಮಿಸಲಿದೆ.

ಇನ್ನು,ಈ ರಥಯಾತ್ರೆಗೆ ಅಪಸ್ವರ ಕೇಳಿ ಬಂದಿತ್ತು. ಈ ರಥಯಾತ್ರೆಯಿಂದ ಕೋಮು ಸೌಹಾರ್ದತೆ ಹಾಳಾಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್​ ಬಿಜೆಪಿ ರಥಯಾತ್ರೆಗೆ ಸಮ್ಮತಿಸಿದೆ.

ವಿರೋಧ ಪಕ್ಷದವರಿಗೆ ಜನರ ಬಳಿ ಹೋಗಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ಆದರೆ, ಮಮತಾ ಬ್ಯಾನರ್ಜಿ ಸರ್ಕಾರ ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಕೈಲಾಶ್​ ವಿಜಯವಾರ್ಗೀಯ ಹೇಳಿದ್ದಾರೆ.

Mamata Banerjee ಚುನಾವಣಾ ಟೆನ್ಷನ್​ ಮರೆತು ನೃತ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?