AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ 1 ಕೆಜಿ ಚಿನ್ನ ಸ್ಮಗ್ಲಿಂಗ್; ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ

ಕೇರಳದ ಕಣ್ಣೂರಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಗಗನಸಖಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರಭಿ ಖಾತೂನ್ ಎಂಬ ಗಗನಸಖಿ ತನ್ನ ಗುದನಾಳದಲ್ಲಿ ಸುಮಾರು 1 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡು ಭಾರತಕ್ಕೆ ಬರುತ್ತಿದ್ದಳು ಎಂದು ಆರೋಪಿಸಲಾಗಿದೆ.

ಗುದನಾಳದಲ್ಲಿ 1 ಕೆಜಿ ಚಿನ್ನ ಸ್ಮಗ್ಲಿಂಗ್; ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ
ಸುರಭಿ ಖಾತೂನ್
Follow us
ಸುಷ್ಮಾ ಚಕ್ರೆ
|

Updated on:May 31, 2024 | 6:56 PM

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ (Air India Express) ಕೆಲಸ ಮಾಡುತ್ತಿದ್ದ ಕೊಲ್ಕತ್ತಾದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ (Kannur Airport) ಬಂಧಿಸಲಾಗಿದೆ. ತನ್ನ ಗುದನಾಳದಲ್ಲಿ 1 ಕೆಜಿ ಚಿನ್ನವನ್ನು ಸ್ಮಗ್ಲಿಂಗ್ (Gold Smuggling) ಮಾಡುತ್ತಿದ್ದ ಆರೋಪದಲ್ಲಿ ಸುರಭಿ ಖಾತೂನ್ ಎಂಬ ಗಗನಸಖಿಯನ್ನು (Air hostess) ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಇಂದು ತಿಳಿಸಿದೆ.

ಗಗನಸಖಿಯನ್ನು ಸುರಭಿ ಖಾತೂನ್ ಎಂದು ಗುರುತಿಸಲಾಗಿದ್ದು, ಆಕೆಯ ಗುದನಾಳದಲ್ಲಿ ಸುಮಾರು 1 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಆಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 28ರಂದು ಮಸ್ಕತ್‌ನಿಂದ ಕಣ್ಣೂರಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿದ್ದರು.

ಇದನ್ನೂ ಓದಿ: Vistara Flight: 177 ಪ್ರಯಾಣಿಕರಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಸುರಭಿ ಖಾತೂನ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು ಮತ್ತು 14 ದಿನಗಳ ಕಸ್ಟಡಿಗೆ ನೀಡಲಾಗಿದೆ.

ವರದಿಗಳ ಪ್ರಕಾರ, ಸುರಭಿ ಖಾತೂನ್ ಈ ಹಿಂದೆ ಕೂಡ ಹಲವು ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂಬ ಆರೋಪವಿದೆ. ಈ ಬಾರಿ ಮಸ್ಕತ್​ನಿಂದ ಆಕೆ ಭಾರತಕ್ಕೆ ವಿಮಾನದಲ್ಲಿ ಬರುತ್ತಿದ್ದಾಗ ಯಾರೋ ಈ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸುರಭಿ ಖಾತೂನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Wastage Norms for Gold: ಚಿನ್ನಕ್ಕೆ ಹೊಸ ವೇಸ್ಟೇಜ್ ನಿಯಮ ಜಾರಿ ಜುಲೈ 31ರವರೆಗೆ ಇಲ್ಲ; ಆಭರಣಕಾರರ ಒತ್ತಡಕ್ಕೆ ಮಣಿದ ಸರ್ಕಾರ

ಸುರಭಿ ಖಾತೂನ್ ಈ ಹಿಂದೆ ಹಲವು ಚಿನ್ನ ಕಳ್ಳಸಾಗಣೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಇದಾದ ಬಳಿಕ ತನಿಖಾಧಿಕಾರಿಗಳು ಈ ಪ್ರಕರಣದಲ್ಲಿ ಇತರರ ಕೈವಾಡದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಕ್ಯಾಬಿನ್ ಸಿಬ್ಬಂದಿಯ ಇತರ ಸದಸ್ಯರು ಸಹ ಚಿನ್ನ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ಖಚಿತವಾಗಿದೆ. ಆ ಹೆಸರುಗಳನ್ನು ಸ್ವತಃ ಸುರಭಿಯೇ ಅಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಕಳ್ಳಸಾಗಣೆ ಚಟುವಟಿಕೆಗಳಿಗೆ ತನ್ನನ್ನು ನೇಮಿಸಿಕೊಳ್ಳಲಾಗಿತ್ತು ಮತ್ತು ಪ್ರತಿ ಬಾರಿ ಸ್ಮಗ್ಲಿಂಗ್ ಮಾಡುವಾಗಲೂ ಕಮಿಷನ್ ಸಿಗುತ್ತಿತ್ತು ಎಂದು ಆಕೆ ಹೇಳಿದ್ದಾಳೆ.

ತನಿಖೆಯ ಬಳಿಕ ಆ ಗಗನಸಖಿಯ ದೇಹದಿಂದ ಸುಮಾರು 1 ಕೆಜಿ ಚಿನ್ನ ಪತ್ತೆಯಾಗಿದೆ. ವಿಚಾರಣೆಯ ನಂತರ, ಅಧಿಕಾರಿಗಳು ಆಕೆಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು. ನಂತರ ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 31 May 24

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ